ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಆತ್ಮಹತ್ಯೆ

Published : Dec 22, 2020, 04:44 PM IST
ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಆತ್ಮಹತ್ಯೆ

ಸಾರಾಂಶ

ಗ್ರಾಮ ಪಂಚಾಯತಿ ಚುನಾವಣೆಯ ಮತದಾನ ನಡೆಯುತ್ತಿದ್ದ ಸಮಯದಲ್ಲೇ ಅಭ್ಯರ್ಥಿಯೋರ್ವ ನೇಣಿಗೆ ಶರಣಾಗಿದ್ದಾರೆ.

ಧಾರವಾಡ, (ಡಿ.22): ಗ್ರಾಮ ಪಂಚಾಯತಿ ಅಭ್ಯರ್ಥಿಯೊಬ್ಬ ಡೆತ್​ ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರವ ಘಟನೆ ಜಿಲ್ಲೆಯ ಗರಗ ಗ್ರಾಮದಲ್ಲಿ ನಡೆದಿದೆ. 

ಗ್ರಾಮದ 2ನೇ ವಾರ್ಡ್​​ ಅಭ್ಯರ್ಥಿ ದಾಮೋದರ ಯಲಿಗಾರ(25) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಾಮೋದರ ಯಲಿಗಾರ ಭಾರತೀಯ ಜನತಾ ಪಕ್ಷದ ಕಾರ್ಯಕರ್ತನಾಗಿದ್ದ.

ಹೈಕೋರ್ಟ್ ಬಿಗ್ ಶಾಕ್: ಬಿಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ

ದಾಮೋದರ ಯಲಿಗಾರ ವಿರುದ್ಧ ರಾಜು ಇಜಾರಿ ಎಂಬುವವರ ಸ್ಪರ್ಧೆ ಮಾಡಿದ್ದರು. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂಬುದು ಗೊತ್ತಾಗಿಲ್ಲವಾದರೂ, ಚುನಾವಣೆಯ ಕಾರಣದಿಂದಲೇ ಮಾನಸಿಕವಾಗಿ ಹೀಗೆ ಮಾಡಿಕೊಂಡಿದ್ದಾನೆಂದು ಹೇಳಲಾಗಿದೆ.

ಘಟನೆಯ ಸುದ್ಧಿ ತಿಳಿಯುತ್ತಿದಂತೆ ಗ್ರಾಮಸ್ಥರು ಮನೆ ಮುಂದೆ ಜಮಾವಣೆಯಾಗಿದ್ದು, ಸದ್ಯ, ಗರಗ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!