ಗೃಹಲಕ್ಷ್ಮೀ: ಸರ್ವರ್‌ ಸಮಸ್ಯೆ, ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ!

Published : Jul 24, 2023, 06:47 AM IST
ಗೃಹಲಕ್ಷ್ಮೀ: ಸರ್ವರ್‌ ಸಮಸ್ಯೆ, ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ!

ಸಾರಾಂಶ

  ತಾಂತ್ರಿಕ ದೋಷದಿಂದಾಗಿ ಭಾನುವಾರ ರಾಜ್ಯಾದ್ಯಂತ ಗೃಹಲಕ್ಷ್ಮಿ ನೋಂದಣಿಗಾಗಿ ಸರ್ವರ್‌ ಬಂದ್‌ ಹಿನ್ನೆಲೆಯಲ್ಲಿ ಸಾರ್ವಜನಿಕರು ನೋಂದಣಿ ಕೇಂದ್ರದ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ನಗರದ ವೀರಾಪುರ ಓಣಿಯಲ್ಲಿನ ‘ಕರ್ನಾಟಕ ಒನ್‌’ ಕೇಂದ್ರದಲ್ಲಿ ನಡೆದಿದೆ.

ಹುಬ್ಬಳ್ಳಿ (ಜು.24) :  ತಾಂತ್ರಿಕ ದೋಷದಿಂದಾಗಿ ಭಾನುವಾರ ರಾಜ್ಯಾದ್ಯಂತ ಗೃಹಲಕ್ಷ್ಮಿ ನೋಂದಣಿಗಾಗಿ ಸರ್ವರ್‌ ಬಂದ್‌ ಹಿನ್ನೆಲೆಯಲ್ಲಿ ಸಾರ್ವಜನಿಕರು ನೋಂದಣಿ ಕೇಂದ್ರದ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ನಗರದ ವೀರಾಪುರ ಓಣಿಯಲ್ಲಿನ ‘ಕರ್ನಾಟಕ ಒನ್‌’ ಕೇಂದ್ರದಲ್ಲಿ ನಡೆದಿದೆ.

ಭಾನುವಾರ ಗೃಹಲಕ್ಷ್ಮಿ ಸರ್ವರ ಬಂದ್‌ ಇರುವುದಾಗಿ ಸರ್ಕಾರ ಶನಿವಾರ ರಾತ್ರಿಯೇ ಆದೇಶ ಹೊರಡಿಸಿದೆ. ಆದರೆ, ಭಾನುವಾರ ಬೆಳಗಿನ ಜಾವ 4 ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದ ಸಾರ್ವಜನಿಕರು ಕೇಂದ್ರದ ಹೊರಗೆ ನೋಟಿಸ್‌ ಹಚ್ಚಿದರೂ ಗಮನಿಸಿರಲಿಲ್ಲ. ಬೇಕಂತಲ್ಲೇ ನೀವು ಕೇಂದ್ರವನ್ನು ಬಂದ್‌ ಮಾಡಿದ್ದೀರಿ ಎಂದು ಆರೋಪಿಸಿ ವಾಗ್ವಾದ ನಡೆಸಿ ಕರ್ನಾಟಕ ಒನ್‌ ಮಹಿಳಾ ಸಿಬ್ಬಂದಿ ಹಾಗೂ ಸೆಕ್ಯೂರಿಟಿ ಮೇಲೆ ಹಲ್ಲೆ ಮಾಡಿದ್ದಾರೆ.

2ನೇ ದಿನ ಗೃಹಲಕ್ಷ್ಮಿಗೆ 7.7 ಲಕ್ಷ ನೋಂದಣಿ; ಸರ್ವರ್‌ ಸಮಸ್ಯೆಗೆ ಹೈರಾಣು

ಹಲ್ಲೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಬೆಂಡಿಗೇರಿ ಠಾಣೆಯ ಪೊಲೀಸರು ಕರ್ನಾಟಕ ಒನ್‌ ಸೇವಾ ಕೇಂದ್ರಕ್ಕೆ ಬೀಗ ಜಡಿದು ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಸ್ಥಳಕ್ಕೆ ಬೆಂಡಿಗೇರಿ ಪೊಲೀಸ್‌ ಠಾಣೆಯ ಪಿಎಸ್‌ಐ ಶರಣು ದೇಸಾಯಿ ಭೇಟಿ ನೀಡಿದರು. ಕರ್ನಾಟಕ ಒನ್‌ ಕೇಂದ್ರದ ಎದುರು ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಬೆಂಡಿಗೇರಿ ಠಾಣೆಯ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು