
ಅಹಮದಾಬಾದ್(ಆ. 30) ಭಜರಂಗ ದಳದ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಕಾಮಸೂತ್ರದ ಪುಸ್ತಕವನ್ನು ಸುಟ್ಟು ಹಾಕಿದ್ದಾರೆ. ಗುಜರಾತ್ ನ ಅಹಮದಾಬಾದ್ ನಲ್ಲಿ ಘಟನೆ ನಡೆದಿದೆ. ಹಿಂದು ದೇವತೆಗಳನ್ನು ಪುಸ್ತಕದಲ್ಲಿ ಕೆಟ್ಟದಾಗಿ ಚಿತ್ರಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಂದು ದೇವತೆಗಳನ್ನು ಅಶ್ಲೀಲ ಭಂಗಿಯಲ್ಲಿ ತೋರಿಸಲಾಗಿದೆ ಎಂದು ಪುಸ್ತಕದ ಅಂಗಡಿಯೊಂದಕ್ಕೆ ನುಗ್ಗಿ ಕಾಮಸೂತ್ರದ ಪ್ರತಿಗಳನ್ನು ಹರಿದು ಹಾಕಿದ್ದಾರೆ.
ತತ್ವಜ್ಞಾನಿ ವಾತ್ಸಾಯನ ಬರೆದ ಕಾಮಸೂತ್ರ ಲೈಂಗಿಕತೆಯ ಸೂತ್ರಗಳನ್ನು ಹಣೆದಿರುವ ಪುಸ್ತಕ. ಪುಸ್ತಕ ಸುಡುವಾಗ ಜೈ ಶ್ರೀರಾಮ್ ಮತ್ತು ಹರ ಹರ ಮಹದೇವ್ ಎಂದು ಘೋಷಣೆ ಕೂಗಿದ್ದಾರೆ. ಈ ವಿಡಿಯೋಗಳು ವೈರಲ್ ಆಗುತ್ತಿವೆ.
ಕಾರ್ಯಕರ್ತರು ಯಾವ ಅಂಗಡಿಯಿಂದ ತಂದಿದ್ದಾರೆ ಎನ್ನುವುದು ಗೊತ್ತಾಗಿಲ್ಲ. ಇಂಥ ಪುಸ್ತಕಗಳನ್ನು ಮಾರಾಟ ಮಾಡಿದರೆ ಬೆಂಕಿ ಹಚ್ಚುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿಯವರೆಗೆ ಯಾವುದೇ ದೂರು ದಾಖಲಾಗಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ