ಪೆನ್ನು ಕದ್ದಿದ್ದಕ್ಕೆ ಬಾಲಕನಿಗೆ ಮನಬಂದಂತೆ ಥಳಿಸಿದ ಗುರೂಜಿ! ಮಗನ ಸ್ಥಿತಿ ಕಂಡು ತಾಯಿ ಆಘಾತ!

Published : Aug 03, 2024, 11:24 AM ISTUpdated : Aug 05, 2024, 02:41 PM IST
ಪೆನ್ನು ಕದ್ದಿದ್ದಕ್ಕೆ ಬಾಲಕನಿಗೆ ಮನಬಂದಂತೆ ಥಳಿಸಿದ ಗುರೂಜಿ! ಮಗನ ಸ್ಥಿತಿ ಕಂಡು ತಾಯಿ ಆಘಾತ!

ಸಾರಾಂಶ

ಪೆನ್ನು ಕದ್ದಿದ್ದಕ್ಕೆ ಬಡ ವಿದ್ಯಾರ್ಥಿಯೋರ್ವನ ಮೇಲೆ ಮನಬಂದಂತೆ ಹಲ್ಲೆ ನಡೆಸಿದ ಅಮಾನವೀಯ ಘಟನೆ ರಾಯಚೂರು ನಗರದ ರಾಮಕೃಷ್ಣ ಆಶ್ರಮದಲ್ಲಿ ನಡೆದಿದೆ. ಶ್ರವಣ್ ಕುಮಾರ್, ಹಲ್ಲೆಗೊಳಗಾದ ಬಾಲಕ. ರಾಮಕೃಷ್ಣ ಮಠದ ಗುರೂಜಿ ವೇಣುಗೋಪಾಲ್ ಎಂಬಾತನಿಂದ ಹಲ್ಲೆ

ರಾಯಚೂರು (ಆ.3): ಪೆನ್ನು ಕದ್ದಿದ್ದಕ್ಕೆ ಬಡ ವಿದ್ಯಾರ್ಥಿಯೋರ್ವನ ಮೇಲೆ ಮನಬಂದಂತೆ ಹಲ್ಲೆ ನಡೆಸಿದ ಅಮಾನವೀಯ ಘಟನೆ ರಾಯಚೂರು ನಗರದ ರಾಮಕೃಷ್ಣ ಆಶ್ರಮದಲ್ಲಿ ನಡೆದಿದೆ.

ಶ್ರವಣ್ ಕುಮಾರ್, ಹಲ್ಲೆಗೊಳಗಾದ ಬಾಲಕ. ರಾಮಕೃಷ್ಣ ಮಠದ ಗುರೂಜಿ ವೇಣುಗೋಪಾಲ್ ಎಂಬಾತನಿಂದ ಹಲ್ಲೆ. ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ. ಬಡತನದ ಕಾರಣಕ್ಕೆ ನಗರದ ಸ್ಟೇಷನ್ ರಸ್ತೆಯಲ್ಲಿರುವ ರಾಮಕೃಷ್ಣ ಆಶ್ರಮ ಸೇರಿಸಿದ್ದ ಪೋಷಕರು. ಆಕಸ್ಮಿಕವಾಗಿ ತಾಯಿ ಆಶ್ರಮಕ್ಕೆ ಭೇಟಿ ನೀಡಿ ಮಗುವನ್ನು ನೋಡಿದಾಗ ಮಗುವಿನ ಸ್ಥಿತಿ ಕಂಡು ಆಘಾತಕ್ಕೊಳಗಾದ ತಾಯಿ. ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪಿಎಸ್‌ಐ ಅನುಮಾನಾಸ್ಪದ ಸಾವು; ಯಾದಗಿರಿ ಶಾಸಕ, ಪುತ್ರನ ವಿರುದ್ಧ ಕುಟುಂಬ, ಸಂಘಟನೆಗಳು ಗಂಭೀರ ಆರೋಪ!

ಘಟನೆ ಹಿನ್ನೆಲೆ?

ಸಹಪಾಠಿಗಳ ಜೊತೆ ಆಟವಾಡು ವೇಳೆ ತಿಳಿದೋ ತಿಳಿಯದೋ ಪೆನ್ನು ಕದ್ದಿದ್ದ ಬಾಲಕ ಶ್ರವಣಕುಮಾರ್. ಸಹಪಾಠಿಗಳು ಗುರೂಜಿ ವೇಣುಗೋಪಾಲ್ ಬಳಿ ದೂರು ನೀಡಿದ್ದಾರೆ. ದೂರು ನೀಡುತ್ತಿದ್ದಂತೆ ಬಾಲಕನಿಗೆ ಮನಸೋ ಇಚ್ಛೆ ಥಳಿಸಿರುವ ವೇಣುಗೋಪಾಲ. ಅಷ್ಟು ಸಾಲದ್ದಕ್ಕೆ ಮೂರು ದಿನಗಳ ಕಾಲ ಕತ್ತಲೆ ಕೋಣೆಯಲ್ಲಿ ಕೂಡಿಹಾಕಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಹಲ್ಲೆಯಿಂದ ಬಾಲಕನ ಕಣ್ಣುಗಳು ಬಾವು ಬಂದಿದ್ದು ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಮಾಹಿತಿ ತಿಳಿದ ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ವೇಣುಗೋಪಾಲನ್ನ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ. ರಾಯಚೂರು ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು