
ಹಾಸನ (ಸೆ.12): ಪತ್ನಿಯನ್ನ ತವರುಮನೆಗೆ ಕರೆದುಕೊಂಡು ಹೋದಳೆಂದು ಕುಪಿತಗೊಂಡು ಅಳಿಯನೋರ್ವ ಅತ್ತೆಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹಾಸನ ಜಿಲ್ಲೆಯ ರಾಮನಾಥಪುರದಲ್ಲಿ ನಡೆದಿದೆ.
ಫೈರೋಜಾ (58) ಕೊಲೆಯಾದ ಅತ್ತೆ. ರಸುಲ್ಲಾ, ಅತ್ತೆ ಕೊಂದಿರೋ ಅಳಿಯ. ರಾಮನಾಥಪುರದ ನಿವಾಸಿಗಳಾದ ಫೈರೋಜಾ ತನ್ನ ಮಗಳು ಶೆಮಿನಾ ಬಾನುಳನ್ನ ಬೆಟ್ಟದಪುರದ ರಸುಲ್ಲಾ ಜೊತೆ ಮದುವೆ ಮಾಡಿಕೊಡಲಾಗಿತ್ತು. ವಿವಾಹವಾಗಿ 10 ವರ್ಷವಾದರೂ ದಂಪತಿಗೆ ಮಕ್ಕಳಾಗಿರಲಿಲ್ಲ. ಇದೇ ವಿಚಾರಕ್ಕೆ ಪತಿ-ಪತ್ನಿ ನಡುವೆ ಪದೇಪದೆ ಜಗಳವಾಗುತ್ತಿತ್ತು. ಪತ್ನಿಯ ಮೇಲೆ ರಸೂಲ್ ಅನುಮಾನಿಸಲು ಶುರುಮಾಡಿದ್ದ. ಇದರಿಂದ ಬೆಸತ್ತಿದ್ದ ಶೆಮಿನಾ ಬಾನು, ಗಂಡನ ಕಿರುಕುಳದ ಬಗ್ಗೆ ತಾಯಿಗೆ ತಿಳಿಸಿದ್ದಳು.
ಇದನ್ನೂ ಓದಿ: ಖಲೀಫಾ, ಘಜ್ವಾ ಉಗ್ರ ಜಾಲ ಬಯಲು! ದೇಶವನ್ನು ಖಿಲಾಫತ್ ಮಾಡಲು ಹೊಂಚು ಹಾಕಿದ್ದ ಐವರ ಬಂಧನ
ಇದನ್ನ ಅರಿತ ಫೈರೋಜಾ, ಅಳಿಯ ತನ್ನ ಮಗಳಿಗೆ ಕೊಡುತ್ತಿರುವ ಕಿರುಕುಳಕ್ಕೆ ಹೆದರಿ ಮಗಳನ್ನ ತವರುಮನೆಗೆ ಕರೆದೊಯ್ದಿದ್ದಳು. ಈ ಬೆಳವಣಿಗೆಯಿಂದ ಮತ್ತಷ್ಟು ಕುಪಿತಗೊಂಡ ರಸುಲ್ಲಾ ನಿನ್ನೆ ಅತ್ತೆ ಮನೆಗೆ ಬಂದಿದ್ದಾನೆ. ಮಗಳನ್ನ ಕರೆದುಕೊಂಡುಬಂದಿರೋ ವಿಚಾರಕ್ಕೆ ಅತ್ತೆಯೊಂದಿಗೆ ಜಗಳ ತೆಗೆದಿದ್ದಾನೆ. ಮೊದಲೇ ನಿರ್ಧರಿಸಿಕೊಂಡು ಬಂದವನಂತೆ ಅತ್ತೆಯ ಮೇಲೆ ಎರಗಿ ಚಾಕುವಿನಿಂದ ಇರಿದಿದ್ದಾನೆ. ಈ ವೇಳೆ ತಾಯಿ ರಕ್ಷಣೆಗೆ ಬಂದ ಪತ್ನಿಯ ಮೇಲೆಯೂ ಹಲ್ಲೆ ನಡೆಸಿ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಅಳಿಯ ಹಲವು ಬಾರಿ ಚಾಕು ಇರಿತದಿಂದ ತೀವ್ರ ರಕ್ತಸ್ರಾವದಿಂದ ಫೈರೋಜಾ ಜೀವ ಚೆಲ್ಲಿದ್ದಾಳೆ. ಸದ್ಯ ಘಟನೆ ಸಂಬಂಧದ ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೊಲೀಸರು ಆರೋಪಿಯ ಪತ್ತೆಗೆ ಕಾರ್ಯಾಚರಣೆ ಶುರು ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ