
ಶಿಗ್ಗಾಂವಿ[ಜ.09]: ವಿವಾಹಿತ ಮಹಿಳೆಯ ಗುಪ್ತಾಂಗದ ಮೇಲೆ ಆ್ಯಸಿಡ್ ಎರಚಿ ಕೊಲೆ ಮಾಡಲು ಯತ್ನಿಸಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಹತ್ತಿರದ ಶಿದ್ದನಗುಡ್ಡದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಶಿಗ್ಗಾವಿ ಪಟ್ಟಣದ ಮಲ್ಲಿಕಾರ್ಜುನ ನಗರದ ನಿವಾಸಿ ಮಂಜುನಾಥ ಪರಸಪ್ಪ ಕಳಸದ ಎಂಬಾತನೇ ಆ್ಯಸಿಡ್ ದಾಳಿ ಮಾಡಿದ ಆರೋಪಿ. ದಾಳಿಯಿಂದ ತೀವ್ರ ಗಾಯಗೊಂಡ ರಾಜೀವ ನಗರದ ಮಹಿಳೆಗೆ ಬಂಕಾಪುರ ಸಮುದಾಯ ಆರೊಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ಗೆ ದಾಖಲಿಸಲಾಗಿದೆ.
ಸಿನಿಮಾ ನಿರ್ದೇಶಕನ ಜತೆ ಪರಾರಿಯಾದ ನಟಿ: ಅಜ್ಜಿ ಆತ್ಮಹತ್ಯೆ
ಮಹಿಳೆ ಮತ್ತು ಆರೋಪಿ ನಡುವೆ ಅನೈತಿಕ ಸಂಬಂಧ ಇತ್ತು ಎನ್ನಲಾಗಿದೆ. ಇದೇ ವಿಷಯವಾಗಿ ಇಬ್ಬರ ಮಧ್ಯೆ ಆಗಾಗ ಜಗಳವಾಗುತ್ತಿತ್ತು. ಮಂಗಳವಾರ ಮಹಿಳೆಯನ್ನು ಟಾಟಾ ಏಸ್ ವಾಹನದಲ್ಲಿ ಹುಣಸಿಕಟ್ಟಿಗ್ರಾಮದ ಶಿದ್ದನಗುಡ್ಡಕ್ಕೆ ಕರೆದುಕೊಂಡು ಬಂದಿದ್ದ ವೇಳೆ ಮತ್ತೆ ಜಗಳವಾಗಿದೆ.
ಆ ವೇಳೆ ಮಹಿಳೆಯ ಕಾಲು ಮತ್ತು ಗುಪ್ತಾಂಗದ ಮೇಲೆ ಮಂಜುನಾಥ ಆ್ಯಸಿಡ್ ಎರಚಿ ಕೊಲೆಗೆ ಯತ್ನಿಸಿದ ಎನ್ನಲಾಗಿದೆ. ಮಹಿಳೆಯ ಕಿರುಚಾಟ ಕೇಳಿದ ಗ್ರಾಮಸ್ಥರು ರಕ್ಷಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಂಕಾಪುರ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ