
ಬೆಂಗಳೂರು(ಜು. 02) ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಕುಟುಂಬದವರು ತನಗೆ ಪರಿಚಯವಿದ್ದಾರೆ ಎಂದು ಹೇಳಿಕೊಂಡು ಕೆಲಸ ಕೊಡಿಸುವುದಾಗಿ ವಂಚಿಸುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಮೂಲದ ಶಿವಕುಮಾರ್ ಹೊಸಳ್ಳಿ ಬಂಧಿತ ಆರೋಪಿ.
ಯಾವ ಕೆಲಸ ಬೇಕಿದ್ದರೂ ಮಾಡಿಕೊಡುತ್ತೇನೆ ಎಂದು ಹಲವಾರು ಮಂದಿಗೆ ವಂಚಿಸಿದ್ದ. ಅದರಲ್ಲೂ ಉತ್ತರ ಕರ್ನಾಟಕ ಮೂಲದ ಯುವಕರಿಗೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಕೊಡಿಸುತ್ತೇನೆ ಎಂಬ ಅಮಿಷವೊಡ್ಡಿ ಹಣ ಪಡೆದಿದ್ದ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ನಿಮಗೆ ಕೆಲಸ ಕೊಡಿಸುತ್ತೇನೆ ಎಂದು ನಿರಂತರ ವಂಚನೆ ಮಾಡುತ್ತಿದ್ದವ ಅಂದರ್ ಆಗಿದ್ದಾನೆ.
ಬೆಂಗಳೂರು; ಅಡ್ರೆಸ್ ಕೇಳುವ ನೆಪದಲ್ಲಿ ಪತ್ರಕರ್ತೆ ಮುಂದೆಯೇ ಹಸ್ತಮೈಥುನ
ವಂಚನೆ ಮಾಡುತ್ತಿರುವ ಬಗ್ಗೆ ಸಿಸಿಬಿಗೆ ದೂರುಗಳು ಬಂದಿದ್ದವು. ಸಿಸಿಬಿ ಪೊಲೀಸರ ತನಿಖೆ ವೇಳೆ ಮತ್ತಷ್ಟು ಶಾಕಿಂಗ್ ಮಾಹಿತಿ ಬಯಲಾಗಿದೆ. ಗುತ್ತಿಗೆದಾರರಿಗೆ ಬಾಕಿ ಬಿಲ್ ಕ್ಲಿಯರ್ ಮಾಡಿಸುವುದಾಗಿ ಹಣ ಪಡೆದಿದ್ದಾನೆ ಚಾಲಾಕಿ. PWD ಸೇರಿ ಹಲವು ಇಲಾಖೆಗಳಲ್ಲಿ ಗುತ್ತಿಗೆದಾರರಿಗೆ ಬರಬೇಕಿದ್ದ ಬಾಕಿ ಬಿಲ್ ಮೊತ್ತ ತಕ್ಷಣ ಸೆಟಲ್ ಮಾಡಿಸುತ್ತೇನೆ ಎಂದು ಹಣ ಪಡೆದಿದ್ದ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ