
ಹಾವೇರಿ (ನ.10): ನಾಲ್ಕು ವರ್ಷಗಳಿಂದ ಪ್ರೀತಿ ಮದುವೆಯಾಗಿದ್ದ ಪತಿಯೇ ಆರು ತಿಂಗಳ ಗರ್ಭಿಣಿ ಪತ್ನಿಯ ಮೇಲೆಯೇ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಆಘಾತಕಾರಿ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಸನಾಬಾದ್ ಗ್ರಾಮದಲ್ಲಿ ನಡೆದಿದೆ.
ಅಮೀರಬಿ ಮನಿಯಾರ (21) ಪತಿಯಿಂದ ಹಲ್ಲೆಗೊಳಗಾದ ಪತ್ನಿ, ಅಹ್ಮದರಾಜ್ ಮಕ್ತೇಸೂರ್ ಹಲ್ಲೆ ನಡೆಸಿರುವ ಆರೋಪಿ ಪತಿ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರಿಂದ ಬಾಣಂತಿ ಮಹಿಳೆಯ ಹೊಟ್ಟೆಯಲ್ಲಿದ್ದು ಆರು ತಿಂಗಳ ಶಿಶು ಮೃತಪಟ್ಟಿದೆ.
ಕಾರವಾರ ಜಿಲ್ಲೆ ಮುಂಡಗೋಡ ತಾಲೂಕಿನ ಓಣಿಕೇರಿ ಯುವತಿಯಾದ ಅಮೀರಬಿ, ಹಾನಗಲ್ ತಾಲೂಕಿನ ಅಹ್ಮದರಾಜ್ ಮಕ್ತೇಸೂರ್ ನಾಲ್ಕು ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಮದುವೆ ನಂತರ ಅಹ್ಮದರಾಜ್ ಮತ್ತು ಅವರ ಕುಟುಂಬಸ್ಥರು ಅಮೀರಬಿಯ ಮೇಲೆ ನಿತ್ಯ ಹಲ್ಲೆ ನಡೆಸುತ್ತಿದ್ದರು ಎಂದು ಗಾಯಾಳು ಅಮೀರಬಿ ಆರೋಪಿಸಿದ್ದಾರೆ. ಗರ್ಭಿಣಿಯಾಗಿದ್ದರೂ ಕನಿಕರ ಕರುಣೆ ಇಲ್ಲದೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಕುತ್ತಿಗೆ, ಕೈ ಕಾಲುಗಳ ಮೇಲೆ ರಕ್ತ ಹೆಪ್ಪುಗಟ್ಟಿದಂತಾಗಿದೆ. ಸದ್ಯ ಗಂಭೀರ ಪೆಟ್ಟುಗಳಿಂದಾಗಿ ಅಮೀರಬಿಯನ್ನು ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ