
ಹಾವೇರಿ (ಜುಲೈ.25): ಹಿರೇಕೇರೂರು ತಾಲೂಕಿನ ಹಂಸಭಾವಿ ಗ್ರಾಮದಲ್ಲಿ ನಡೆದಿರುವ ಹೃದಯ ವಿದ್ರಾವಕ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶುಕ್ರವಾರ ಮಧ್ಯಾಹ್ನ ಮೃತ್ಯುಂಜಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸಂಭವಿಸಿದ ದುರಂತದಲ್ಲಿ ವಿದ್ಯುತ್ ಶಾಕ್ ಹೊಡೆದು 12 ವರ್ಷದ ಮಹಮ್ಮದ್ ಶಾ ಗೌಸ್ ರಟ್ಟಿಹಳ್ಳಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಜೊತೆಗೆ, ಇಬ್ಬರು ಬಾಲಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ವೈರಲ್ ಆಗಿರುವ ವಿಡಿಯೋದಲ್ಲಿ, ವಿದ್ಯುತ್ ಆಘಾತದಿಂದ ನಿಸ್ತೇಜನಾಗಿ ಬಿದ್ದಿದ್ದ ಬಾಲಕನನ್ನು ರಕ್ಷಿಸಲು ಸ್ಥಳೀಯರು ಒಣ ಕಟ್ಟಿಗೆ ಮತ್ತು ಕೋಲುಗಳನ್ನು ಹಿಡಿದು ಹರಸಾಹಸ ಪಡುತ್ತಿರುವುದು ಕಂಡುಬರುತ್ತದೆ. ಶಾಲಾ ಆವರಣದ ಮೇಲೆ ಹಾದುಹೋಗಿದ್ದ ವಿದ್ಯುತ್ ತಂತಿಯ ಮೇಲೆ ಬೃಹತ್ ತೆಂಗಿನ ಮರ ಬಿದ್ದ ಪರಿಣಾಮ, ತಂತಿಗಳು ನೆಲಕ್ಕೆ ತಗುಲಿವೆ. ಇದೇ ವೇಳೆ ಅಲ್ಲಿ ಆಟವಾಡುತ್ತಿದ್ದ ಬಾಲಕರಿಗೆ ವಿದ್ಯುತ್ ಶಾಕ್ ಹೊಡೆದಿದೆ.
ಈ ದುರ್ಘಟನೆ ಹಂಸಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಈ ವಿಡಿಯೋ ಸಾರ್ವಜನಿಕರಲ್ಲಿ ಆಘಾತ ಮೂಡಿಸಿದೆ. ವಿದ್ಯುತ್ ತಂತಿಗಳ ನಿರ್ವಹಣೆಯಲ್ಲಿನ ನಿರ್ಲಕ್ಷ್ಯದ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ