
ಹಾವೇರಿ (ಆ.20): ಪತ್ನಿಯ ಶೀಲ ಶಂಕಿಸಿ ಪತಿರಾಯನೊಬ್ಬ ಕುತ್ತಿಗೆಗೆ ಚಾಕು ಇರಿದು ಕೊಲ್ಲಲು ಯತ್ನಿಸಿದ ಆಘಾತಕಾರಿ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದ ಸುವರ್ಣ ಪಾರ್ಕ್ನಲ್ಲಿ ಘಟನೆ ನಡೆದಿದೆ.
ದಾವಣಗೆರೆಯ ಶ್ರೀರಾಮನಗರದ ಯೋಗೇಶ್ (28) ಎಂಬಾತ ತನ್ನ 22 ವರ್ಷದ ಪತ್ನಿ ಪದ್ಮಾಳನ್ನು ಮಾರಣಾಂತಿಕವಾಗಿ ಚಾಕುವಿನಿಂದ ಇರಿದಿರುವ ಆರೋಪಿ.
ಘಟನೆಯ ವಿವರಗಳ ಪ್ರಕಾರ, ಯೋಗೇಶ್ ಮತ್ತು ಪದ್ಮಾ ಸುವರ್ಣ ಪಾರ್ಕ್ನಲ್ಲಿ ಮಾತನಾಡುತ್ತಿದ್ದಾಗ ಇಬ್ಬರ ನಡುವೆ ವಾಗ್ವಾದ ಉಂಟಾಗಿದೆ. ವೈಯಕ್ತಿಕ ವಿಷಯಗಳಿಗೆ ಸಂಬಂಧಿಸಿದಂತೆ ಜಗಳ ತಾರಕಕ್ಕೇರಿದಾಗ, ಕೋಪಗೊಂಡ ಯೋಗೇಶ್ ತನ್ನ ಬಳಿಯಿದ್ದ ಚಾಕುವಿನಿಂದ ಪದ್ಮಾಳ ಕುತ್ತಿಗೆಗೆ ಇರಿದಿದ್ದಾನೆ. ಏಕಾಏಕಿ ನಡೆದ ಭೀಕರ ಕೃತ್ಯದಿಂದ ರಕ್ತಸ್ರಾವವಾದ ಪದ್ಮಾ ಕುಸಿದು ಬಿದ್ದಿದ್ದಾರೆ. ಸ್ಥಳೀಯರು ಘಟನೆಯನ್ನು ಗಮನಿಸಿ ತಕ್ಷಣ ರಾಣೇಬೆನ್ನೂರು ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಗಾಯಾಳುವನ್ನು ದಾಖಲಿಸಿದ್ದಾರೆ.
ಸದ್ಯ ಪದ್ಮಾ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಕುರಿತು ಮಾಹಿತಿ ಪಡೆದ ಹಲಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯೋಗೇಶ್ನನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಲಾಗಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಕುಟುಂಬದವರಿಗೆ ಆಘಾತವನ್ನುಂಟು ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ