ಐಸಿಸ್‌ನ ಭಾರತೀಯ ಘಟಕದ ಮುಖ್ಯಸ್ಥ ಅರೆಸ್ಟ್‌

Published : Mar 21, 2024, 06:09 AM IST
ಐಸಿಸ್‌ನ ಭಾರತೀಯ ಘಟಕದ ಮುಖ್ಯಸ್ಥ ಅರೆಸ್ಟ್‌

ಸಾರಾಂಶ

ಐಸಿಸ್‌ ಮುಖ್ಯಸ್ಥನ ಬಂಧನದ ಕುರಿತು ಮಾಹಿತಿ ನೀಡಿರುವ ಅಸ್ಸಾಂ ಪೊಲೀಸರು, 'ಹ್ಯಾರಿಸ್ ಮತ್ತು ರೆಹಾನ್ ಬಾಂಗ್ಲಾದೇಶದಿಂದ ಭಾರತಕ್ಕೆ ನುಸುಳುತ್ತಿದ್ದಾರೆ ಎಂಬ ಖಚಿತ ಮಾಹಿತಿ ಲಭ್ಯವಾಗಿತ್ತು. ಅದನ್ನು ಆಧರಿಸಿ ನಡೆಸಿದ ಕಾರ್ಯಾಚರಣೆ ವೇಳೆ ಇಬ್ಬರೂ ಬಾಂಗ್ಲಾದೇಶ ಗಡಿಯ ಧರ್ಮಶಾಲಾ ಪ್ರದೇಶದಲ್ಲಿ ಮಾ.20ರ ಬೆಳಗಿನ ಜಾವ 4.30ರ ವೇಳೆಗೆ ಸಿಕ್ಕಿಬಿದ್ದರು' ಎಂದು ತಿಳಿಸಿದ್ದಾರೆ.

ಗುವಾಹಟಿ(ಮಾ.21): ಮಹತ್ವದ ಬೆಳವಣಿಗೆಯೊಂದರಲ್ಲಿ ವಿಶ್ವದ ಕುಖ್ಯಾತ ಭಯೋತ್ಪಾದಕ ಸಂಘಟನೆಯಾದ ಐಸಿಸ್‌ನ ಭಾರತೀಯ ಘಟಕದ ಮುಖ್ಯಸ್ಥ ಹ್ಯಾರಿಸ್ ಫಾರೂಖಿ ಯನ್ನು ಬುಧವಾರ ಅಸ್ಸಾಂನಲ್ಲಿ ಬಂಧಿಸಲಾಗಿದೆ. ಹ್ಯಾರಿಸ್ ತನ್ನ ಆಪ್ತ ಅನುರಾಗ್ ಸಿಂಗ್ ಅಲಿಯಾಸ್ ರೆಹಾನ್ ಜೊತೆ ಬಾಂಗ್ಲಾದೇಶದಿಂದ ಭಾರತ ಪ್ರವೇ ಶಿಸುತ್ತಿದ್ದಾನೆ ಎಂಬ ಸುಳಿವು ಆಧರಿಸಿ ಕಾರ್ಯಾಚರಣೆ ನಡೆಸಿದಾಗ ಇಬ್ಬರೂ ಸಿಕ್ಕಿಬಿದ್ದಿದ್ದಾರೆ.

ಬಂಧಿತ ಇಬ್ಬರೂ ವ್ಯಕ್ತಿಗಳ ಗುರುತು ಖಚಿತಪಡಿಸಲಾಗಿದೆ. ಈ ಇಬ್ಬರೂ ದೇಶದ ವಿವಿಧ ರಾಜ್ಯಗಳಲ್ಲಿ ಬೇರೆ ಬೇರೆ ಉಗ್ರ ಕೃತ್ಯಗಳಲ್ಲಿ ಆರೋಪಿಗಳಾಗಿರುವ ಹಿನ್ನೆಲೆಯಲ್ಲಿ ಅವರನ್ನು ಎನ್‌ಐಎ ವಶಕ್ಕೆ ಒಪ್ಪಿಸಲು ಅಸ್ಸಾಂನ ಎಸ್‌ಟಿಎಫ್‌ ನಿರ್ಧರಿಸಿದೆ.

ಶಿವಮೊಗ್ಗ ಐಸಿಸ್ ಸಂಚು ಕೇಸ್‌: ಅರಾಫತ್‌ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌

ಐಸಿಸ್‌ ಮುಖ್ಯಸ್ಥನ ಬಂಧನದ ಕುರಿತು ಮಾಹಿತಿ ನೀಡಿರುವ ಅಸ್ಸಾಂ ಪೊಲೀಸರು, 'ಹ್ಯಾರಿಸ್ ಮತ್ತು ರೆಹಾನ್ ಬಾಂಗ್ಲಾದೇಶದಿಂದ ಭಾರತಕ್ಕೆ ನುಸುಳುತ್ತಿದ್ದಾರೆ ಎಂಬ ಖಚಿತ ಮಾಹಿತಿ ಲಭ್ಯವಾಗಿತ್ತು. ಅದನ್ನು ಆಧರಿಸಿ ನಡೆಸಿದ ಕಾರ್ಯಾಚರಣೆ ವೇಳೆ ಇಬ್ಬರೂ ಬಾಂಗ್ಲಾದೇಶ ಗಡಿಯ ಧರ್ಮಶಾಲಾ ಪ್ರದೇಶದಲ್ಲಿ ಮಾ.20ರ ಬೆಳಗಿನ ಜಾವ 4.30ರ ವೇಳೆಗೆ ಸಿಕ್ಕಿಬಿದ್ದರು' ಎಂದು ತಿಳಿಸಿದ್ದಾರೆ.

12 ಮೊದಲ ಪುಟದಿಂದ ಈ ಪೈಕಿ ಹ್ಯಾರಿಸ್ ಫಾರೂಖಿ ಅಲಿಯಾಸ್ ಹರೀಶ್ ಅಜ್ಜಲ್ ಫಾರೂಖಿ ಡೆಹ್ರಾಡೂನ್ ಮೂಲದ ಚಕ್ರತಾ ಪ್ರದೇಶದನು. ಈತ ಐಸಿಸ್ ಇಂಡಿಯಾದ ಮುಖ್ಯಸ್ಥ. ಇನ್ನು ಪಾಣಿಪತ್‌ನ ಅನುರಾಗ್ ಸಿಂಗ್ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ ತನ್ನ ಹೆಸರನ್ನು ರೆಹಾನ್ ಎಂದು ಬದಲಿಸಿಕೊಂಡಿದ್ದ. ಈತನ ಪತ್ನಿ ಬಾಂಗ್ಲಾದೇಶದವಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಐಸಿಸ್‌ ಸಿದ್ಧಾಂತ ಪ್ರಚಾರ: ಬಂಧಿತ ಇಬ್ಬರೂ ಅತ್ಯಂತ ಮತೀಯ ಭಾವನೆಗಳನ್ನು ಹೊಂದಿದವರಾಗಿದ್ದಾರೆ. ಭಾರತದಲ್ಲಿ ಐಸಿಸ್ ಸಿದ್ಧಾಂತ ಹರಡುವುದು ಇವರ ಉದ್ದೇಶವಾಗಿತ್ತು. ಇದಕ್ಕಾಗಿ ಭಾರತದಲ್ಲೇ ಉಗ್ರ ಸಂಘಟನೆಗೆ ಕಾರ್ಯಕರ್ತರ ನೇಮಕ ಮಾಡಿಕೊಳ್ಳುತ್ತಿದ್ದರು. ಸುಧಾರಿತ ಸ್ಫೋಟಕ ಬಳಸಿ ದೇಶಾದ್ಯಂತ ದುಷ್ಕೃತ್ಯದ ಸಂಚು ರೂಪಿಸಿದ್ದರು. ಇದೇ ಕಾರಣಕ್ಕಾಗಿ ಭಾರತಕ್ಕೆ ಆಗಮಿಸುತ್ತಿದ್ದ ವೇಳೆ ಇಬ್ಬರನ್ನೂ ಬಂಧಿಸಲಾಗಿದೆ. ಇಬ್ಬರ ವಿರುದ್ಧವೂ ದೆಹಲಿ, ಲಖನೌ ಸೇರಿ ದೇಶದ ಹಲವು ರಾಜ್ಯಗಳಲ್ಲಿ ವಿವಿಧ ಪ್ರಕರಣಗಳು ಬಾಕಿ ಇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!