
ನವದೆಹಲಿ(ಫೆ.11): 2019ರಲ್ಲಿ ದೇಶದ ವಿವಿಧ ಭಾಗಗಳಲ್ಲಿ 93 ದೇಶದ್ರೋಹ ಪ್ರಕರಣಗಳು ದಾಖಲಾಗಿದ್ದು, 96 ಮಂದಿಯನ್ನು ಬಂಧಿಸಲಾಗಿದೆ.
ಈ ಪೈಕಿ ಕರ್ನಾಟಕದಲ್ಲಿ ದೇಶದ್ರೋಹದ ಅತ್ಯಧಿಕ ಕೇಸ್ಗಳು (22 ಪ್ರಕರಣ) ದಾಖಲಾಗಿದ್ದು 18 ಜನರನ್ನು ಬಂಧಿಸಲಾಗಿದೆ ಎಂದು ಗೃಹ ಖಾತೆ ರಾಜ್ಯಸಚಿವ ಜಿ.ಕೃಷ್ಣ ರೆಡ್ಡಿ ಅವರು ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.
ರಾಯಚೂರು: ವಾಟ್ಸಪ್ನಲ್ಲಿ ದೇಶದ್ರೋಹದ ಸಂದೇಶ, ಉರ್ದು ಶಾಲೆ ಶಿಕ್ಷಕಿ ಅಮಾನತು
ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಅವರು, 2019ರಲ್ಲಿ ದೇಶದ್ರೋಹ ಪ್ರಕರಣಗಳಿಗೆ ಸಂಬಂಧಿಸಿದಂತೆ 76 ಜನರ ವಿರುದ್ಧ ಆರೋಪಪಟ್ಟಿ ದಾಖಲಿಸಿಕೊಳ್ಳಲಾಗಿದ್ದು, 29 ಮಂದಿ ಖುಲಾಸೆಗೊಂಡಿದ್ದಾರೆ. ಇನ್ನು ಅಸ್ಸಾಂನಲ್ಲಿ 17, ಜಮ್ಮು- ಕಾಶ್ಮೀರದಲ್ಲಿ 11, ಉತ್ತರ ಪ್ರದೇಶದಲ್ಲಿ 10 ಕೇಸ್ಗಳು ದಾಖಲಾಗಿವೆ ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ