ಮಂಗಳೂರು: ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿನಿಗೆ ಚೂರಿ ಇರಿದ ಹಿಂದೂ ಅಪ್ರಾಪ್ತ!

Published : Aug 20, 2024, 03:01 PM ISTUpdated : Aug 20, 2024, 03:09 PM IST
ಮಂಗಳೂರು: ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿನಿಗೆ ಚೂರಿ ಇರಿದ ಹಿಂದೂ ಅಪ್ರಾಪ್ತ!

ಸಾರಾಂಶ

ಪುತ್ತೂರು ತಾಲೂಕಿನ ಕೊಂಬೆಟ್ಟು ಕಾಲೇಜಿನಲ್ಲಿ ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿನಿ ಮೇಲೆ ಹಿಂದೂ ಅಪ್ರಾಪ್ತ ಬಾಲಕ ಚೂರಿ ಇರಿದ ಘಟನೆ ನಡೆದಿದೆ. ಒನ್‌ಸೈಡ್‌ ಲವ್‌ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಮಂಗಳೂರು (ಆ.20): ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಂಬೆಟ್ಟು ಕಾಲೇಜಿನಲ್ಲಿ ಭೀಕರ ಘಟನೆಯೊಂದು ನಡೆದಿದೆ. ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿನಿ ಮೇಲೆ ಹಿಂದೂ ಅಪ್ರಾಪ್ತ ಬಾಲಕನೋರ್ವ ಚೂರಿ ಇರಿದಿದ್ದಾನೆ. ಒನ್‌ಸೈಡ್‌ ಲವ್‌ ಎಂದು ಹೇಳಲಾಗುತ್ತಿದೆ. ಆದರೆ ಸ್ಪಷ್ಟಕಾರಣ ತಿಳಿದುಬಂದಿಲ್ಲ.

ಹೆಚ್‌ಡಿಕೆ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಮೊರೆ ಹೋದ ಎಸ್‌ಐಟಿ!

ಮುಸ್ಲಿಂ ವಿದ್ಯಾರ್ಥಿನಿಗೆ ಹಿಂದೂ ವಿದ್ಯಾರ್ಥಿ ಚೂರಿ ಇರಿದಿದ್ದು, ಕೈಗೆ ಗಾಯವಾಗಿದೆ. ಇಬ್ಬರೂ ಕೂಡ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಸೇರಿದ ವಿದ್ಯಾರ್ಥಿಗಳು. ಚೂರಿಯಿಂದ ದಾಳಿ ಮಾಡಿದ ಆರೋಪದ ಹಿನ್ನೆಲೆ, ಅಪ್ರಾಪ್ತ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಸದ್ಯ ಮುಸ್ಲಿಂ ವಿದ್ಯಾರ್ಥಿನಿಯನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಇದೆಲ್ಲದರ ನಡುವೆ ಆಸ್ಪತ್ರೆಯಲ್ಲಿ ಹೆಸರು ಬದಲಾಯಿಸಿ ಹೇಳುವಂತೆ ಶಿಕ್ಷಕಿ ಒತ್ತಡ ಹೇರಿದ್ದಾರೆ ಎಂದು ಬಾಲಕಿ ಆರೋಪಿಸಿದ್ದಾಳೆ. ಕೈಗೆ ಗಾಜು ತಾಗಿ ಗಾಯವಾಗಿದೆ ಎಂದು ಹೇಳಲು ಒತ್ತಾಯಿಸಿದ್ದಾರೆ ಎಂದು ಬಾಲಕಿ ಆರೋಪಿಸಿದ್ದಾಳೆ.

ವಿವಿಧ ರಾಜ್ಯದ 4 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಸುತ್ತೂರು ಮಠದ ಶಾಲೆಯಲ್ಲಿ 23 ಜೋಡಿ ಅವಳಿ ಮಕ್ಕಳು!

ಆಸ್ಪತ್ರೆಯ ಮುಂದೆ ಜನ ಸೇರಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಜನರನ್ನು ಆಸ್ಪತ್ರೆಯಿಂದ ಹೊರಗೆ ಪೋಲೀಸರು ಕಳುಹಿಸಿದ್ದಾರೆ. ಕೈಗೆ ಗಾಜು ತಾಗಿದ್ದಕ್ಕೆ ಕಾಲೇಜು ಪ್ರಾಂಶುಪಾಲರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ. ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರಿಂದ ತನಿಖೆ ನಡೆಯುತ್ತಿದೆ.

ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿ ಹೇಳಿಕೆ: ವಿಜಯ (ಹೆಸರು ಬದಲಿಸಲಾಗಿದೆ) ನನ್ನನ್ನ ಕಾಲೇಜು ಬಳಿ ಫಾಲೋ ಮಾಡಿಕೊಂಡು ಬಂದ. ನನ್ನ ಬಳಿ ಬಂದು ನೀನು ಜಾಜಿಯ (ಹೆಸರು ಬದಲಿಸಲಾಗಿದೆ) ಗೆಳತಿ ಅಲ್ವಾ ಅಂತ ಕೇಳಿದ. ಅಲ್ಲದೇ ನಾನು  ಜಾಜಿಯನ್ನು ಲವ್ ಮಾಡಲ್ಲ, ನಿನ್ನನ್ನು ಲವ್ ಮಾಡ್ತೇನೆ ಅಂದ. ಆಗ ನಾನು ಅವನಿಗೆ ಸರಿಯಾಗಿ ಬೈದಾಗಲೂ ಮತ್ತೆ ಮತ್ತೆ ಲವ್ ಮಾಡ್ತೇನೆ ಅಂದ. ಅಗ ನಾನು ವಿರೋಧಿಸಿದ್ದಕ್ಕೆ ನನ್ನ ಕೈಗೆ ಇರಿದು ಓಡಿ ಹೋದ. ಯಾವುದರಲ್ಲಿ ಇರಿದ ಗೊತ್ತಾಗಿಲ್ಲ, ಬಹುಶಃ ಬ್ಲೇಡ್ ನಲ್ಲಿ ಇರಬಹುದು. ಬೆಳಿಗ್ಗೆ ಒಂದು 8.45 ಗಂಟೆಗೆ ಈ ಘಟನೆ ನಡೆದಿದೆ. ಅವನು ಪ್ರಥಮ ಪಿಯುಸಿ ಆರ್ಟ್ಸ್ ವಿದ್ಯಾರ್ಥಿ, ನಾನು ಕಾಮರ್ಸ್ ವಿದ್ಯಾರ್ಥಿನಿ. ಅವನು ಬರುವಾಗ ಜೊತೆಗೆ ಜನ ಇದ್ದರು, ಆದರೆ ನನ್ನ ಬಳಿ ಅವನು ಒಬ್ಬನೇ ಬಂದಿದ್ದಾನೆ ಎಂದಿದ್ದಾಳೆ.

ವಿದ್ಯಾರ್ಥಿನಿ ಮೇಲಿನ ಚೂರಿ ಇರಿತ ಕೇಸ್ ಮುಚ್ಚಿ ಹಾಕಲು ಯತ್ನಿಸಿದ್ರಾ ಪ್ರಾಂಶುಪಾಲರು?
ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರಿನ ಕೊಂಬೆಟ್ಟು ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ವಿರುದ್ದ ಆಕ್ರೋಶ ವ್ಯಕ್ತವಾಗಿದೆ. ಆಸ್ಪತ್ರೆ ಮುಂಭಾಗ ಕಾಲೇಜಿನ ವಿರುದ್ದ ವಿದ್ಯಾರ್ಥಿ ಸಂಘಟನೆಗಳು ಕಾಲೇಜಿನ ಪ್ರಾಂಶುಪಾಲರು, ಶಿಕ್ಷಕರ ವಿರುದ್ದ ಪ್ರಕರಣ ದಾಖಲಿಸಲು ಒತ್ತಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 ಆಸ್ಪತ್ರೆ ಮಂಭಾಗ ಎನ್ ಎಸ್ ಯುಐ ಹಾಗೂ ಸಾರ್ವಜನಿಕರ ಆಕ್ರೋಶ. ಚೂರಿ ಇರಿದಿದ್ದನ್ನ ಗಾಜು ತಾಗಿದ್ದು ಅಂತ ಹೇಳಿ‌ ಮುಚ್ಚಿ ಹಾಕಲು ಯತ್ನಿಸಿದ್ದಾರೆ. ಕಾಲೇಜು ಪ್ರಮುಖರ ವಿರುದ್ದವೂ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು. ಮತ್ತೆ ಯಾವ ಕಾಲೇಜಿನಲ್ಲೂ ಇಂತಹ ಘಟನೆ ನಡೆಯಬಾರದು ಅಂತ ಆಕ್ರೋಶ ವ್ಯಕ್ತವಾಗಿದೆ. ಸದ್ಯ ಪೊಲೀಸರ ಭರವಸೆ ಹಿನ್ನೆಲೆ ಆಕ್ರೋಶಿತರು ತೆರಳಿದ್ದಾರೆ. ಪ್ರಕರಣದ ಕೂಲಂಕುಷ ತನಿಖೆಗೆ ಪೊಲೀಸರು ಮುಂದಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೋರ್ಟ್ ಸಮಯ ಹಾಳು ಮಾಡುತ್ತಿರೋ ಡಿ ಗ್ಯಾಂಗ್; ದಾಸನ ಬೇಡಿಕೆಗೆ SPP ಗುನ್ನ, ಮುಗಿಯಲ್ಲ ಗ್ರಹಣ..!
ಖಮೇನಿ ಕ್ರೌರ್ಯದ ಪುಟಗಳಿಂದ: ಚಿಕಿತ್ಸೆ ಕೊಟ್ಟಳೆಂದು ಒಬ್ಬಳು, ಹಿಜಾಬ್​ಗಾಗಿ ಮತ್ತೊಬ್ಬಳು, ಮಗದೊಬ್ಬಳು! ಕಣ್ಣೀರಿನ ಕಥೆ ಇದು