
ಬೆಂಗಳೂರು, (ಸೆ.21): ದೇಶದ್ರೋಹಿಗಳು ಬಳಕೆ ಮಾಡುವ ಅಪಾಯಕಾರಿ ಸ್ಯಾಟಲೈಟ್ ಫೋನ್ ಯಾದಗಿರಿ ಜಿಲ್ಲೆಯಲ್ಲಿ ಬಳಕೆ ಮಾಡಿರುವ ಆತಂಕಕಾರಿ ಸಂಗತಿ ಹೊರ ಬಿದ್ದಿದೆ.
ಯಾದಗಿರಿಯಿಂದ ಪಾಕಿಸ್ತಾನಕ್ಕೆ ಸ್ಯಾಟಲೈಟ್ ಪೋನ್ ಕರೆ ಹೋಗಿರುವ ಸಂಗತಿಯನ್ನು ರಾಜ್ಯ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದಾರೆ.
ಯಾದಗಿರಿಯಿಂದಲೂ ಪಾಕಿಸ್ತಾನಕ್ಕೆ ನಿಷೇಧಿತ ಸ್ಯಾಟಲೈಟ್ ಕರೆ
ಕರಾವಳಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಅಕ್ರಮವಾಗಿ ಸ್ಯಾಟಲೈಟ್ ಫೋನ್ ಬಳಕೆಯಾಗುತ್ತಿರುವ ಕುರಿತು ಅಗತ್ಯ
ಕ್ರಮ ತೆಗೆದುಕೊಳ್ಳುವಂತೆ ಪೊಲೀಸರಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದು ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.
ಕರಾವಳಿ ಭಾಗದಲ್ಲಿ ಸ್ಥಳೀಯ ಪೊಲೀಸರು, ಕರಾವಳಿ ಕಾವಲು ಪಡೆ, ಸ್ಯಾಟಲೈಟ್ ಫೋನ್ ನಲ್ಲಿ ಸಂವಹನ ನಡೆಸುವ ವ್ಯಕ್ತಿಗಳ ಮೇಲೆ ವಿಶೇಷ ನಿಗಾ ವಹಿಸಿದೆ. ಇದು ದೇಶದ ಭದ್ರತೆಯ ವಿಚಾರವಾಗಿದ್ದು, ಇತ್ತೀಚೆಗೆ ಸುಮಾರು 220 ಬಾರಿ ಸ್ಯಾಟಲೈಟ್ ಫೋನ್ ಮುಖಾಂತರ ಬೇರೆ ದೇಶದ ಜೊತೆ ಸಂಪರ್ಕ ಸಾಧಿಸಿರುವುದನ್ನು ಪತ್ತೆ ಹಚ್ಚಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ