ಹನಿಟ್ರ್ಯಾಪ್‌ಗೆ ಕೆಡವಿ ನಿವೃತ್ತ ಪ್ರಾಧ್ಯಾಪಕನಿಂದ 21 ಲಕ್ಷರೂ. ಪೀಕಿದ ಚೆಂದುಳ್ಳಿ ಚೆಲುವೆ

Published : Oct 13, 2022, 03:07 PM ISTUpdated : Oct 13, 2022, 03:10 PM IST
ಹನಿಟ್ರ್ಯಾಪ್‌ಗೆ ಕೆಡವಿ  ನಿವೃತ್ತ ಪ್ರಾಧ್ಯಾಪಕನಿಂದ 21 ಲಕ್ಷರೂ. ಪೀಕಿದ ಚೆಂದುಳ್ಳಿ ಚೆಲುವೆ

ಸಾರಾಂಶ

ನಿವೃತ್ತ ಪ್ರಾಧ್ಯಾಪಕರೊಬ್ಬರ ಜೊತೆ ಸಲುಗೆ ಬೆಳೆಸಿಕೊಂಡ ಚೆಂದುಳ್ಳಿ ಚೆಲುವೆಯೊಬ್ಬಳ್ಳು ಹನಿಟ್ರ್ಯಾಪ್(Honeytrap) ಖೆಡ್ಡಕ್ಕೆ ಕೆಡವಿ ಬಳಿಕ ಅವರ ಅಶ್ಲೀಲ ಚಿತ್ರ ಮತ್ತು ವಿಡಿಯೊಗಳನ್ನು ರೆಕಾರ್ಡ್ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ. ಕೊಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬ್ಲಾಕ್‌ಮೇಲ್ ಮಾಡಿ, ಬರೋಬ್ಬರಿ 21 ಲಕ್ಷ ದೋಚಿದ್ದಾಳೆ!

ಹುಬ್ಬಳ್ಳಿ (ಅ.13) : ನಿವೃತ್ತ ಪ್ರಾಧ್ಯಾಪಕರೊಬ್ಬರ ಜೊತೆ ಸಲುಗೆ ಬೆಳೆಸಿಕೊಂಡ ಚೆಂದುಳ್ಳಿ ಚೆಲುವೆಯೊಬ್ಬಳ್ಳು ಹನಿಟ್ರ್ಯಾಪ್(Honeytrap) ಖೆಡ್ಡಕ್ಕೆ ಕೆಡವಿ ಬಳಿಕ ಅವರ ಅಶ್ಲೀಲ ಚಿತ್ರ ಮತ್ತು ವಿಡಿಯೊಗಳನ್ನು ರೆಕಾರ್ಡ್ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ. ಕೊಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬ್ಲಾಕ್‌ಮೇಲ್ ಮಾಡಿ, ಬರೋಬ್ಬರಿ 21 ಲಕ್ಷ ದೋಚಿದ್ದಾಳೆ!

ಉಪತಹಸೀಲ್ದಾರ್‌ ಹನಿಟ್ರ್ಯಾಪ್‌ : ಪ್ರಕರಣ ಮುಚ್ಚಿ ಹಾಕಲು ₹25 ಲಕ್ಷಕ್ಕೆ ಬೇಡಿಕೆ

ಅಂಜಲಿ ಶರ್ಮಾ(Anjali sharma) ಎಂಬಾಕೆ ಧಾರವಾಡ(Dharwad)ದ ಆ ಪ್ರಾಧ್ಯಾಪಕರಿಗೆ ವಾಟ್ಸ್‌ಆ್ಯಪ್(Whatsapp) ವಿಡಿಯೊ ಕರೆ(Video call) ಮೂಲಕ ಪರಿಚಯವಾಗಿದ್ದಳು. ಸ್ನೇಹ ಸಲುಗೆಗೆ ತಿರುಗಿತ್ತು. ವಾಟ್ಸ್‌ಆ್ಯಪ್‌ನಲ್ಲಿ ಇಬ್ಬರೂ ತಮ್ಮ ಖಾಸಗಿ ವಿಡಿಯೊ ಹಾಗೂ ಫೋಟೊಗಳನ್ನು ವಿನಿಮಯ ಮಾಡಿಕೊಂಡಿದ್ದರು. ವಿಡಿಯೊ ಕಾಲ್‌ನಲ್ಲಿಯೂ ಮಾತನಾಡಿದ್ದರು.

ಕೆಲ ದಿನಗಳ ನಂತರ ಅಂಜಲಿ ನಿವೃತ್ತ ಪ್ರಾಧ್ಯಾಪಕರ ಖಾಸಗಿ ವಿಡಿಯೊ, ಫೋಟೊ, ವಿಡಿಯೊ ಕರೆಯ ಸ್ಕ್ರೀನ್‌ಶಾಟ್‌ಗಳನ್ನು ತೋರಿಸಿ 3 ಲಕ್ಷರೂ. ನೀಡುವಂತೆ ಬ್ಲಾಕ್‌ಮೇಲ್ ಮಾಡಿದ್ದಾಳೆ. ನಂತರ, ಆಕೆಯ ಸಹಚರ ವಿಕ್ರಮ್(Vikram)ಎಂಬಾತ ತಾನು ಸೈಬರ್ ಪೊಲೀಸ್ ಅಧಿಕಾರಿ(Cyber police Officer) ಎಂದು ಹೇಳಿಕೊಂಡು ಪ್ರಾಧ್ಯಾಪಕರಿಗೆ ಕರೆ ಮಾಡಿ 
ನಿಮಗೆ ಬ್ಲಾಕ್‌ಮೇಲ್ ಮಾಡಿರುವ ಅಂಜಲಿ ನನಗೆ ಪರಿಚಯವಿದ್ದು, ನಿಮ್ಮ ಫೋಟೊ ಮತ್ತು ವಿಡಿಯೊಗಳನ್ನು ಡೆಲಿಟ್ ಮಾಡಿಸುತ್ತೇನೆ. ಅದಕ್ಕಾಗಿ, ನನಗೆ 5 ಲಕ್ಷ ಕೊಡಬೇಕು ಎಂದಿದ್ದಾನೆ. 

ಪ್ರಾಧ್ಯಾಪಕರ ಬ್ಯಾಂಕ್ ಖಾತೆಯ ವಿವರ ಪಡೆದು, ಆನ್‌ಲೈನ್‌(Online)ನಲ್ಲಿ ಹಂತಹಂತವಾಗಿ 21 ಲಕ್ಷರೂ. ತನ್ನ ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹುಬ್ಬಳ್ಳಿ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯ ಹನಿಟ್ರ್ಯಾಪ್: ಸಲ್ಮಾಭಾನು ಮಾಯಾಜಾಲಕ್ಕೆ ಸಿಲುಕಿದ ಜಗನ್ನಾಥ ಶೆಟ್ಟಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಿರ್ಜಾ ಇಸ್ಮಾಯಿಲ್ ಮೊಮ್ಮಗಳ ಹಂತಕನಿಗೆ ಜೈಲೇ ಗತಿ, ಏನಿದು ಪ್ರಕರಣ?
ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ