
ವಿಜಯಪುರ (ಜೂ.21): ಸರ್ಕಾರಿ ಬಸ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬಸ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿ ಐವರು ಗಾಯಗೊಂಡಿರುವ ಘಟನೆ ವಿಜಯಪುರ ತಾಲೂಕಿನ ಹಡಗಲಿ ಗ್ರಾಮದ ಬಳಿ ನಡೆದಿದೆ. ವಿಜಯಪುರ ಕಲಬುರಗಿ ಹೆದ್ದಾರಿ ಮೇಲೆ ಈ ಅವಘಡ ಸಂಭವಿಸಿದ್ದು, ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಥಣಿಯಿಂದ ವಿಜಯಪುರ ಮಾರ್ಗವಾಗಿ ಗಾಣಗಾಪುರಕ್ಕೆ ಬಸ್ ಸಂಚರಿಸುತ್ತಿದ್ದಾಗ ಕಲಬುರಗಿಯಿಂದ ವಿಜಯಪುರದ ಕಡೆಗೆ ಹೊರಟಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಲಾರಿ ಚಾಲಕ ಬಸ್ ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿದುಬಂದಿದೆ. ವಿಜಯಪುರ ಗ್ರಾಮೀಣ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.
ಪರಪುರುಷನ ಜೊತೆ ಅನೈತಿಕ ಸಂಬಂಧ, ಪ್ರಿಯಕರನಿಂದಲೇ ಹೆಣವಾದ್ಲು ಪ್ರಿಯತಮೆ!
ಗೆಜ್ಜಲಗೆರೆ ಬಳಿ ಭೀಕರ ಅಪಘಾತ, ಉತ್ತರಪ್ರದೇಶ ಮೂಲದ ದಂಪತಿ, ಮಂಡ್ಯದ ಕಾರು ಚಾಲಕ ಸಾವು
ಮದ್ದೂರು: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಉತ್ತರ ಪ್ರದೇಶದ ಮೂಲಕ ದಂಪತಿ ಹಾಗೂ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟು ದಂಪತಿಗಳ ಪುತ್ರ ಗಾಯಗೊಂಡಿರುವ ಘಟನೆ ತಾಲೂಕಿನ ಗೆಜ್ಜಲಗೆರೆ ಸಮೀಪದ ಬೆಂಗಳೂರು - ಮೈಸೂರು ದಶಪಥ ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ಜರುಗಿದೆ.
ಉತ್ತರ ಪ್ರದೇಶ ಲಕ್ನೋ ತರಬೇತಿ ಮತ್ತು ನೇಮಕಾತಿ ವಿಭಾಗದ ಹೆಚ್ಚುವರಿ ನಿರ್ದೇಶಕ ನೀರಜ್ಕುಮಾರ್(55), ಪತ್ನಿ ಸೈಲ್ವಿ(50) ಹಾಗೂ ಕಾರು ಚಾಲಕ ಮಂಡ್ಯ ಗಾಂಧಿನಗರ ನಿವಾಸಿ ನಿರಂಜನ್ಕುಮಾರ್(30) ಮೃತಪಟ್ಟವರು. ಕಾರಿನಲ್ಲಿದ್ದ ನೀರಜ್ಕುಮಾರ್ ಪುತ್ರ ಸಾಗರ್ ಶ್ರೀ ವಾಸ್ತವ ತಲೆಗೆ ಬಿದ್ದ ತೀವ್ರ ಪೆಟ್ಟು ಮದ್ದೂರು, ಮಂಡ್ಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ಗೆ ದಾಖಲು ಮಾಡಲಾಗಿದೆ.
ಲಂಡನ್ನಲ್ಲಿ ವಾರದಲ್ಲಿ ಮೂವರು ಭಾರತೀಯ ಮೂಲದವರ ಹತ್ಯೆ: ಆತಂಕದಲ್ಲಿ ಅನಿವಾಸಿ
2022 ರಿಂದ ಉತ್ತರ ಪ್ರದೇಶ ಸರ್ಕಾರದ ಲಕ್ನೋದ ತರಬೇತಿ, ನೇಮಕಾತಿ ವಿಭಾಗದ ಹೆಚ್ಚುವರಿ ನಿರ್ದೇಶಕರಾಗಿದ್ದ ನೀರಜ್ಕುಮಾರ್ ಲಕ್ನೋದಿಂದ ಬೆಂಗಳೂರಿಗೆ ಬಂದು ಕ್ಯಾಬ್ ಬುಕ್ ಮಾಡಿಕೊಂಡು ಪತ್ನಿ ಸೈಲ್ವಿ, ಪುತ್ರ ಸಾಗರ್ ಶ್ರೀವಾಸ್ತವ್ ಜೊತೆ ಮಡಿಕೇರಿ ಪ್ರವಾಸ ತೆರಳುತ್ತಿದ್ದರು.
ರಾಷ್ಟ್ರೀಯ ಹೆದ್ದಾರಿಯ ಗೆಜ್ಜಲಗೆರೆ ಕಾಲೋನಿಯ ಕಿಟ್ಟಿಡಾಬಾ ಬಳಿ ಬೆಳಗ್ಗೆ 10.30ರ ಸುಮಾರಿಗೆ ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಟಾಟಾ ಎಕ್ಸಾ ಕಾರು ಮಳೆಯಿಂದ ಸ್ಕಿಡ್ ಆಗಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಮೈಸೂರು ಮಾರ್ಗದ ರಸ್ತೆಗೆ ನುಗ್ಗಿ ನೀರಜ್ಕುಮಾರ್ ಪ್ರಯಾಣಿಸುತ್ತಿದ್ದ ಮಾರುತಿ ಸ್ವಿಪ್್ಟಡಿಸೈರ್ಗೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.
ನೀರಜ್ಕುಮಾರ್ ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಟಾಟಾ ಎಕ್ಸಾ ಕಾರಿನಲ್ಲಿದ್ದ ವಿನಯ್ ಮತ್ತು ಆತನ ಪತ್ನಿ ಸಣ್ಣಪುಟ್ಟಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಿಂದ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು.
ಸುದ್ಧಿ ತಿಳಿದು ಸ್ಥಳಕ್ಕೆ ಧಾವಿಸಿದ ಇನ್ಸ್ ಪೆಕ್ಟರ್ ಸಂತೋಷ್, ಸಂಚಾರಿ ಠಾಣೆ ಪಿಎಸ್ಐ ಐ.ಎನ್.ಗೌಡ ಹಾಗೂ ಸಿಬ್ಬಂದಿಗಳು ಅಪಘಾತಕ್ಕೊಳಗಾದ ಎರಡು ಕಾರುಗಳನ್ನು ರಸ್ತೆ ಬದಿಗೆ ಸರಿಸಿ ಮೃತದೇಹಗಳನ್ನು ಹೊರ ತೆಗೆದು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ನಂತರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ