ಬೆಂಗಳೂರು: ತಿಂಡಿ ಎಸೆದು ಪಾತ್ರೆಯಿಂದ ಹಲ್ಲೆ ಮಾಡಿದ ಪುಂಡರಿಗೆ ಕುದಿಯುವ ಎಣ್ಣೆ ಎರಚಿದ ವ್ಯಾಪಾರಿ!

Published : Dec 12, 2025, 04:29 PM IST
Hot Oil Attack Street Vendor Retaliates After Youth Assault Him Over Petty Dispute in Hosur

ಸಾರಾಂಶ

ಹೊಸೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಬೀದಿ ಬದಿ ವ್ಯಾಪಾರಿಯೊಂದಿಗೆ ಜಗಳವಾಡಿದ ಇಬ್ಬರು ಯುವಕರು ಹಲ್ಲೆ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ, ವ್ಯಾಪಾರಿಯು ತನ್ನ ಮೇಲಿದ್ದ ಕುದಿಯುವ ಎಣ್ಣೆಯನ್ನು ಯುವಕನೊಬ್ಬನ ಮೇಲೆ ಎಸೆದು ಪ್ರತೀಕಾರ ತೀರಿಸಿಕೊಂಡಿದ್ದಾನೆ.

ಬೆಂಗಳೂರು (ಡಿ.12): ಬೀದಿ ಬದಿ ವ್ಯಾಪಾರಿಯೊಬ್ಬರೊಂದಿಗೆ ಪುಂಡ ಯುವಕರಿಬ್ಬರು ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ವ್ಯಾಪಾರಿ ಮೇಲೆ ಹಲ್ಲೆ ಮಾಡಿದ ಘಟನೆ ಹೊಸೂರಿನ ಟ್ಯಾಂಕ್ ಸ್ಟ್ರೀಟ್ ರಸ್ತೆಯಲ್ಲಿ ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ.

ತಿಂಡಿ ಎಸೆದು ಪುಂಡರಿಂದ ದಾಂಧಲೆ:

ಆರಂಭದಲ್ಲಿ, ಆ ಯುವಕರು ವ್ಯಾಪಾರಿಯ ಅಂಗಡಿಯಲ್ಲಿದ್ದ ತಿಂಡಿಗಳನ್ನು ಎಸೆದು ದರ್ಪ ಪ್ರದರ್ಶಿಸಿದ್ದಾರೆ. ಜಗಳ ವಿಕೋಪಕ್ಕೆ ಹೋಗಿ, ಯುವಕರು ವ್ಯಾಪಾರಿಗೆ ಆಹಾರದ ಪಾತ್ರೆಯೊಂದರಿಂದ ತಲೆಗೆ ಹೊಡೆದಿದ್ದಾರೆ. ಈ ಅನಿರೀಕ್ಷಿತ ಹಲ್ಲೆಯಿಂದ ಕುಪಿತಗೊಂಡ ವ್ಯಾಪಾರಿ, ತಕ್ಷಣವೇ ತನ್ನ ಬಳಿ ಇದ್ದ ಕುದಿಯುವ ಎಣ್ಣೆಯನ್ನು ಪುಂಡನ ಮೇಲೆ ಎಸೆದು ಪ್ರತಿದಾಳಿ ನಡೆಸಿದ್ದಾರೆ.

ಬಿಸಿ ಎಣ್ಣೆ ಮೈಮೇಲೆ ಬಿದ್ದ ತಕ್ಷಣ ಕಿರುಚಾಡಿದ ಪುಂಡ:

ಪಾತ್ರೆಯಿಂದ ತಲೆಗೆ ಹೊಡೆದ ಯುವಕನ ಮೇಲೆ ವ್ಯಾಪಾರಿ ಕುದಿಯುವ ಎಣ್ಣೆಯನ್ನು ಎರಚಿದ್ದಾರೆ. ಬಿಸಿ ಎಣ್ಣೆ ಮೈಮೇಲೆ ಬಿದ್ದ ತಕ್ಷಣ ಆ ಯುವಕ ತೀವ್ರ ನೋವಿನಿಂದ ರಸ್ತೆಯಲ್ಲಿ ಒದ್ದಾಡಿದ್ದಾನೆ. ಇದನ್ನು ಕಂಡ ಮತ್ತೊಬ್ಬ ಯುವಕ, ಕೋಪದಲ್ಲಿ ಸುತ್ತಲೂ ಇದ್ದ ಕಲ್ಲನ್ನು ತೆಗೆದುಕೊಂಡು ವ್ಯಾಪಾರಿಯ ಅಂಗಡಿಯ ಮೇಲೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾನೆ. ಘಟನೆಯ ನಂತರ, ಹಲ್ಲೆಗೊಳಗಾದ ಯುವಕನ ಪರಿಸ್ಥಿತಿ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಹೊಸೂರು ಪೊಲೀಸರು ಈ ಘಟನೆ ಕುರಿತು ತನಿಖೆ ನಡೆಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಪರೂಪದ ಕೋತಿ ಪ್ರಭೇದ ಬ್ಯಾಗ್‌ನಲ್ಲಿಟ್ಟು ವಿದೇಶದಿಂದ ಅಕ್ರಮ ಸಾಗಾಟ, ಬೆಂಗಳೂರು ಏರ್ಪೋರ್ಟ್‌ನಲ್ಲಿ ಸಿಕ್ಕಿಬಿದ್ದ ಪ್ರಯಾಣಿಕ!
ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ