Gadag: ಶಾಲೆಗೆ ಕಟ್ಟಬೇಕೆಂದು ಕೂಡಿಟ್ಟಿದ್ದ ಸ್ಕೂಲ್ ಫೀಜ್‌ ಹಣವನ್ನೇ ದೋಚಿದ ಖದೀಮರು..!

Published : Sep 14, 2022, 04:25 PM ISTUpdated : Sep 14, 2022, 04:26 PM IST
Gadag: ಶಾಲೆಗೆ ಕಟ್ಟಬೇಕೆಂದು ಕೂಡಿಟ್ಟಿದ್ದ ಸ್ಕೂಲ್ ಫೀಜ್‌ ಹಣವನ್ನೇ ದೋಚಿದ ಖದೀಮರು..!

ಸಾರಾಂಶ

ಸ್ಕೂಲ್‌ ಫೀಜ್‌ಗೆ ಅಂತ ಇಟ್ಟಿದ್ದ ಹಣ ಹಾಗೂ ಮದುವೆಗೆಂದು ಕೂಡಿಟ್ಟಿದ್ದ ಚಿನ್ನಾಭರಣಗಳನ್ನು ಕಳ್ಳರು ದೋಚಿಕೊಂಡು ಹೋಗಿದ್ದಾರೆ.

ಗದಗ, (ಸೆಪ್ಟೆಂಬರ್.14) : ಮಳೆಯ ಅಬ್ಬರದ ನಡುವೆ ವಿದ್ಯುತ್ ಸ್ಥಗಿತಗೊಂಡಿರುವ ಏರಿಯಾಗಳನ್ನೇ ಟಾರ್ಗೆಟ್ ಮಾಡಿ ಮನೆಯಲ್ಲಿ ಯಾರೂ ಇರದಿರುವ ಮನೆಗಳನ್ನ ಹುಡುಕಿ ಹಣ ಚಿನ್ನಕ್ಕೆ ಕನ್ನ ಹಾಕ್ತಿದ್ದಾರೆ..

ಗದಗ ನಗರದ ಹುಡ್ಕೋ ಕಾಲೋನಿಯ ದೀಪಕ್ ಪವಾರ್ ಎಂಬುವರ ಮನೆಯಲ್ಲಿ ಕಳ್ಳತನವಾಗಿದೆ. ಮನೆ ಮಂದಿಯಲ್ಲ ಹುಬ್ಬಳ್ಳಿಗೆ ಹೋಗಿದ್ದ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇರದಿರುವುದನ್ನ ಗಮನಿಸಿದ ಖದೀಮರು ಮಧ್ಯರಾತ್ರಿ 1 ಗಂಟೆಯಿಂದ 3 ಗಂಟೆಯ ಸುಮಾರಿಗೆ ಬೀಗ‌ಮುರಿದು ಮನೆಯಲ್ಲಿದ್ದ ಬೀರುನಲ್ಲಿದ್ದ 120 ಗ್ರಾಂ ಚಿನ್ನಾಭರಣ, ಮತ್ತು ಮಕ್ಕಳ ಪೀಜ್ ಗಾಗಿ ಇಟ್ಟಿದ್ದ ಒಂದು ಲಕ್ಷ ರೂಪಾಯಿಯನ್ನ ದೋಚಿಕೊಂಡು ಹೋಗಿದ್ದಾರೆ. 

ಬೆಂಗಳೂರಿನಲ್ಲಿ ಹೆಚ್ಚಾಗಿದೆ RX ಬೈಕ್ ಕಳ್ಳತನ: ಕಳ್ಳರಿಗೂ ಇಷ್ಟವಾಯ್ತು ಆರ್‌ ಎಕ್ಸ್ ಕ್ರೇಜ್!

ಪವಾರ್ ಕುಟುಂಬದಲ್ಲಿ ಮದುವೆಗಾಗಿ ಆಗಾಗ ಚಿನ್ನಾಭರಣ ಖರೀದಿಸಿ ಕೂಡಿಟ್ಟಿದ್ದರು. ಚಿನ್ನದ ಸರ, ಉಂಗುರ, ನೆಕ್ ಲೇಸ್ ಗಳನ್ನ ತಂದಿಟ್ಟಿದ್ದರು. ಆದ್ರೆ ಖದೀಮರು ಎಲ್ಲವನ್ನೂ ದೋಚಿ ಪರಾರಿಯಾಗಿದ್ದಾರೆ. ಅದೇ ಕಪಾಟಿನಲ್ಲಿ, ಪುಸ್ತಕದ ಕೆಳಗೆ 10 ಸಾವಿರ ರೂಪಾಯಿ ಇಟ್ಟಿದ್ದರು. ಆದ್ರೆ ಅವು ಮಾತ್ರ ಕಳ್ಳರ ಕಣ್ಣಿಗೆ ಬಿದ್ದಿಲ್ಲ. ಮತ್ತು ಚಿಲ್ಲರೆಗಳನ್ನೂ ಸಹ ಬಿಟ್ಟು ಹೋಗಿದ್ದಾರೆ. ಆದ್ರೆ ಬೆಳಗ್ಗೆ ಪಕ್ಕದ ಮನೆಯವರು ಗಮನಿಸಿದಾಗ ಮನೆಯ ಬಾಗಿಲು ತೆರೆದಿದ್ದು ನೋಡಿ ಮನೆಯ ಯಜಮಾನ ದೀಪಕ್ ಅವರಿಗೆ ಕರೆ ಮಾಡಿ ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.. 

ಇನ್ನು ಕಳ್ಳತನವಾಗಿರೋ ಬಗ್ಗೆ ಮನೆಯ ಪಕ್ಕದ ಮನೆಯಲ್ಲಿನ ಸಿಸಿಟಿವಿಯಲ್ಲಿನ ದೃಶ್ಯಾವಳಿಗಳು ಕಳ್ಳರು ಓಡಾಡಿರೋ ಬಗ್ಗೆ ಸುಳಿವು ಸಿಕ್ಕಿದೆ. ಆದ್ರೆ ಅವರ ಮುಖ ಚರ್ಯೆ ಬಗ್ಗೆ ಸ್ಪಷ್ಟತೆ ಇಲ್ಲ.ಇನ್ನು ಈ ಸಂಬಂಧ ಗದಗ ನವರತ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆದಷ್ಟು ಬೇಗ ನಮ್ಮ ಚಿನ್ನಾಭರಣ ಮತ್ತು ಹಣ ಪತ್ತೆ ಮಾಡಿಸಿಕೊಡಿ ಅಂತ ಕಣ್ಣೀರು ಹಾಕ್ತಿದ್ದಾರೆ..

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪ್ರೆಗ್ನೆಂಟ್ ಮಾಡಿ ಗರ್ಭಪಾತ ಮಾಡಿಸಿದ, Sorry ಅಮ್ಮಾ ಸಾಯ್ತಿದ್ದೀನಿ: ಯುವತಿ ಆತ್ಮ*ಹತ್ಯೆ
Actor Dileep Case: ಖ್ಯಾತ ನಟಿ ಮೇಲಿನ ಅ*ತ್ಯಾಚಾರ ಆರೋಪ; 8 ವರ್ಷಗಳ ಹೋರಾಟ, ನಟ ದಿಲೀಪ್‌ಗೆ ನಿರಾಳ!