ಮಂಡ್ಯ: ಹೊಟ್ಟೆನೋವು ತಾಳಲಾರದೆ ಗೃಹಿಣಿ ಆತ್ಮಹತ್ಯೆ

Published : May 25, 2024, 12:39 PM IST
ಮಂಡ್ಯ: ಹೊಟ್ಟೆನೋವು ತಾಳಲಾರದೆ ಗೃಹಿಣಿ ಆತ್ಮಹತ್ಯೆ

ಸಾರಾಂಶ

ಮೃತಳ ತಾಯಿ ಬೊಮ್ಮೇಗೌಡನಕೊಪ್ಪಲು ಗ್ರಾಮದ ಗೌರಮ್ಮ ಕಿಕ್ಕೇರಿ ಪೊಲೀಸರಿಗೆ ದೂರು ನೀಡಿದ್ದಾರೆ. ಕಿಕ್ಕೇರಿ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.   

ಕಿಕ್ಕೇರಿ(ಮೇ.25):  ಹೊಟ್ಟೆನೋವು ತಾಳಲಾರದೆ ಗೃಹಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ಹೆಗ್ಗಡಹಳ್ಳಿಯಲ್ಲಿ ಗುರುವಾರ ರಾತ್ರಿ ಜರುಗಿದೆ.

ಗ್ರಾಮದ ಪ್ರಸನ್ನರ ಪತ್ನಿ ಅಶ್ವಿನಿ (25) ಮೃತ ಮಹಿಳೆ. ಮೃತಳಿಗೆ ಪತಿ, ಪುತ್ರ ಇದ್ದಾರೆ. ಒಂದು ವರ್ಷದಿಂದ ಈಕೆಗೆ ಹೊಟ್ಟೆನೋವು ಆಗಿಂದಾಗ್ಗೆ ಕಾಣಿಸಿಕೊಳ್ಳುತ್ತಿತ್ತು. ಹಲವೆಡೆ ಚಿಕಿತ್ಸೆ ಪಡೆದರು ಗುಣಮುಖವಾಗಿರಲಿಲ್ಲ. ಇದರಿಂದ ಖಿನ್ನತೆಗೊಳಗಾಗಿದ್ದಳು. ಹೊಟ್ಟೆನೋವು ಬಾಧೆಗೆ ಬೇಸತ್ತು ಗುರುವಾರ ತಮ್ಮ ಮನೆಯಲ್ಲಿ ವೇಲ್‌ನಿಂದ ಬಿಗಿದುಕೊಂಡು ಸಾವಿಗೆ ಯತ್ನಿಸಿದ್ದಾಳೆ.

ಕೇವಲ 2000 ರೂ.ಗೆ ಬೆಂಗಳೂರು ಯುವತಿ ಪ್ರಭುಧ್ಯಾಳ ಮರ್ಡರ್

ಈ ವೇಳೆ ಈಕೆ ಪತಿ ನೋಡಿ ಅಸ್ವಸ್ಥೆಯಾಗಿದ್ದ ಅಶ್ವಿನಿ ಅವರನ್ನು ಕುಣಿಕೆಯಿಂದ ಬಿಡಿಸಿ ತುರ್ತು ಚಿಕಿತ್ಸೆಗೆ ಕೆ.ಆರ್.ಪೇಟೆ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಮೃತಳ ತಾಯಿ ಬೊಮ್ಮೇಗೌಡನಕೊಪ್ಪಲು ಗ್ರಾಮದ ಗೌರಮ್ಮ ಕಿಕ್ಕೇರಿ ಪೊಲೀಸರಿಗೆ ದೂರು ನೀಡಿದ್ದಾರೆ. ಕಿಕ್ಕೇರಿ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಮೃತರದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡ್ರಗ್ಸ್‌ ಸಪ್ಲೈಗೆ ಸ್ತ್ರೀಯರ ಬಳಕೆ ಅಧಿಕ! ಆಫ್ರಿಕಾ ಖಂಡದ ಸ್ತ್ರೀಯರೇ ಅಧಿಕ
ಗುಜರಾತ್‌ನಲ್ಲೊಂದು ನಿರ್ಭಯಾ ಪ್ರಕರಣ