ಹುಬ್ಬಳ್ಳಿ: ಹಣದಾಸೆ ತೋರಿಸಿ ಕೈಕೊಟ್ಟ ಬಿಜೆಪಿ ಮುಖಂಡ, ಗೃಹಿಣಿ ಆತ್ಮಹತ್ಯೆ

Suvarna News   | Asianet News
Published : Sep 26, 2020, 02:25 PM ISTUpdated : Sep 26, 2020, 02:30 PM IST
ಹುಬ್ಬಳ್ಳಿ: ಹಣದಾಸೆ ತೋರಿಸಿ ಕೈಕೊಟ್ಟ ಬಿಜೆಪಿ ಮುಖಂಡ, ಗೃಹಿಣಿ ಆತ್ಮಹತ್ಯೆ

ಸಾರಾಂಶ

ಕಲಘಟಗಿ ಮೂಲದ ಬಿಜೆಪಿ ಮುಖಂಡ ಬಸವರಾಜ್ ಕೆಲಗಾರ| ಹುಬ್ಬಳ್ಳಿಯ ಸ್ವಾಗತ ಕಾಲೋನಿಯ ತಮ್ಮದೆ ಮನೆಯಲ್ಲಿ ನೇಣಿಗೆ ಶರಣಾದ ಗೃಹಿಣಿ| ಪ್ರೀತಿಸಿ ಮದುವೆಯಾಗಿ ಮಹಿಳೆಗೆ ವಂಚಿಸಿದ್ದ ಬಿಜೆಪಿ‌ ಮುಖಂಡ ಬಸವರಾಜ್ ಕೆಲಗಾರ| 

ಹುಬ್ಬಳ್ಳಿ(ಸೆ.26): ಬಿಜೆಪಿ‌ ಮುಖಂಡನ ಎರಡನೇ ಪತ್ನಿ ಎಂದು ಹೇಳಿಕೊಂಡಿದ್ದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಸ್ವಾಗತ ಕಾಲೋನಿಯಲ್ಲಿ ಇಂದು(ಶನಿವಾರ) ನಡೆದಿದೆ. ಅನಿತಾ ರೇವಣಕರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಗೃಹಿಣಿಯಾಗಿದ್ದಾರೆ.

ಕಲಘಟಗಿ ಮೂಲದ ಬಿಜೆಪಿ‌ ಮುಖಂಡ ಬಸವರಾಜ್ ಕೆಲಗಾರ ಅವರು ಹಣದಾಸೆಗೆ ಪ್ರೀತಿಸಿ ಮದುವೆಯಾಗಿ, ಕೈಕೊಟ್ಟಿದಕ್ಕೆ‌ ಅನಿತಾ ರೇವಣಕರ್ ಇಂದು ನಗರದ ತಮ್ಮದೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. 

ತಂಗಿ ಆತ್ಮಹತ್ಯೆಗೆ ಕಾರಣವೆಂದು ಭಾವನನ್ನೇ ಹತ್ಯೆಗೈದ ಯೋಧ

ಬಿಜೆಪಿ‌ ಮುಖಂಡ ಬಸವರಾಜ್ ಕೆಲಗಾರ ನನ್ನನ್ನು ಪ್ರೀತಿಸಿ ಮದುವೆಯಾಗಿ ವಂಚಿಸಿದ್ದ ಎಂದು ಮೃತ ಮಹಿಳೆ ಅನಿತಾ ರೇವಣಕರ್ ಆರೋಪಿಸಿದ್ದರು. ಇತ್ತೀಚೆಗೆ ಈ ಮಹಿಳೆಯನ್ನು ಬಿಜೆಪಿ ಮುಖಂಡ ಬಸವರಾಜ ‌ಕೆಲಗಾರ ಥಳಿಸಿದ್ದರು. ಈ ಸಂಬಂಧ ಹುಬ್ಬಳ್ಳಿಯ ಕೇಶ್ವಾಪುರ ಠಾಣೆಯಲ್ಲಿ‌ ಬಸವರಾಜ್ ವಿರುದ್ಧ ದೂರು ದಾಖಲಾಗಿತ್ತು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!