
ಹುಬ್ಬಳ್ಳಿ(ಫೆ.25): ಇಲ್ಲಿನ ವ್ಯಕ್ತಿಯೊಬ್ಬರು ಕೊಲ್ಲಾಪುರದ ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವೀರಾಪುರ ಓಣಿಯ ನಿವಾಸಿ ರವಿ ಹೋತಪೇಟೆ ಎಂಬುವವರೇ ಆತ್ಮಹತ್ಯೆಗೆ ಶರಣಾದವರು.
ರವಿ ಹೋತಪೇಟೆ ಗೊಂಬೆಗಳಿಗೆ ಆಭರಣಗಳನ್ನು ಪೂರೈಸುವ ವ್ಯಾಪಾರ ಮಾಡುತ್ತಿದ್ದರು. ಆಭರಣಗಳನ್ನು ತರುವುದಾಗಿ ಕೊಲ್ಲಾಪುರಕ್ಕೆ ತೆರಳಿದ್ದರು. ಇದೇ ವೇಳೆ ತಂಗಿದ್ದ ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಬಾಗಲಕೋಟೆ: MBBS ವಿದ್ಯಾರ್ಥಿನಿ ನೇಣಿಗೆ ಶರಣು, ಕಾರಣ..?
ಅಯ್ಯಪ್ಪ ಮಾಲಾಧಾರಿಗಳಿಗೆ ಗುರುಸ್ವಾಮಿಯಾಗಿದ್ದರು ಎಂದು ಹೇಳಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕೊಲ್ಲಾಪುರ ಠಾಣೆಯ ಪೊಲೀಸರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು, ಸಂಬಂಧಿಗಳು ಕೊಲ್ಲಾಪುರಕ್ಕೆ ತೆರಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ