ಹುಬ್ಬಳ್ಳಿಯಲ್ಲಿ ಖೋಟಾ ನೋಟು ದಂಧೆ; ಮೂವರನ್ನು ಬಂಧಿಸಿದ ಪೊಲೀಸರು

Published : Oct 12, 2022, 02:27 PM ISTUpdated : Oct 12, 2022, 02:31 PM IST
ಹುಬ್ಬಳ್ಳಿಯಲ್ಲಿ ಖೋಟಾ ನೋಟು ದಂಧೆ; ಮೂವರನ್ನು ಬಂಧಿಸಿದ ಪೊಲೀಸರು

ಸಾರಾಂಶ

ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಇಷ್ಟು ದಿನ ತಣ್ಣಗಾಗಿದ್ದ ಖೋಟಾನೋಟ್  ಚಲಾವಣೆ ದಂಧೆ ಮತ್ತೆ ಮುನ್ನೆಲೆಗೆ ಬಂದಿದೆ. ಪ್ರಖ್ಯಾತಿ ಮತ್ತು ಕುಖ್ಯಾತಿ ಎರಡರಲ್ಲೂ ಹೆಸರು ಮಾಡಿರುವ ಹುಬ್ಬಳ್ಳಿಯಲ್ಲಿ ಖೋಟಾ ನೋಟಿನ ಹಾವಳಿ ಮತ್ತೇ ಸದ್ದು ಮಾಡುತ್ತಿದೆ.

ಹುಬ್ಬಳ್ಳಿ (ಅ.12) : ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಇಷ್ಟು ದಿನ ತಣ್ಣಗಾಗಿದ್ದ ಖೋಟಾನೋಟ್  ಚಲಾವಣೆ ದಂಧೆ ಮತ್ತೆ ಮುನ್ನೆಲೆಗೆ ಬಂದಿದೆ. ಪ್ರಖ್ಯಾತಿ ಮತ್ತು ಕುಖ್ಯಾತಿ ಎರಡರಲ್ಲೂ ಹೆಸರು ಮಾಡಿರುವ ಹುಬ್ಬಳ್ಳಿಯಲ್ಲಿ ಖೋಟಾ ನೋಟಿನ ಹಾವಳಿ ಮತ್ತೇ ಸದ್ದು ಮಾಡುತ್ತಿದೆ.

ಹುಬ್ಬಳ್ಳಿ(Hubballi)ಯ ಹಳೆ ಬಸ್‌ನಿಲ್ದಾಣದ ಬಳಿ ಖೋಟಾನೋಟು(Fake notes)ಗಳನ್ನು ಚಲಾವಣೆ ಮಾಡುತ್ತಿದ್ದ ಮೂವರನ್ನು ಉಪನಗರ ಠಾಣೆ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ. ವಿಜಯಪುರ(Vijayapur) ಜಿಲ್ಲೆಯ ಬಸವನ ಬಾಗೇವಾಡಿ(Basavanabagewadi) ತಾಲ್ಲೂಕಿನ ಶಿವಾನಂದ ಕಾರಜೋಳ(Shivanand Karjol), ವಿಜಯಪುರದ ಅಡವಿ ಶಂಕರಲಿಂಗನ ಗುಡಿ ನಿವಾಸಿ ಕಲ್ಲಯ್ಯ ಪಟ್ಟದಮಠ(Kallaiah pattadamath) ಹಾಗೂ ಉತ್ತರ ಕನ್ನಡ(Uttara kannada) ಜಿಲ್ಲೆಯ ಹೆಗ್ಗರಣಿಯ ಗುರುರಾಜ ಜಾಧವ(Gururaj jadhav) ಬಂಧಿತರು ಎಂದು ತಿಳಿದುಬಂದಿದೆ.

ಆರೋಪಿಗಳು ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್(Channamma Circle) ಬಳಿಯ ಸನ್ಮಾನ್ ಲಾಡ್ಜ್‌(Sanman Lodge)ನಲ್ಲಿ 200 ಮತ್ತು 100 ಮುಖಬೆಲೆಯ ಖೋಟಾ ನೋಟುಗಳನ್ನು ಚಲಾವಣೆ ಮಾಡುತ್ತಿರುವ ಖಚಿತ  ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ದಂಧೆಯ ರೂವಾರಿಗಳನ್ನು ಬಂಧಿಸಿಸದ್ದು. ಬಂಧಿತ ಆರೋಪಿಗಳಿಂದ 73 ಖೋಟಾ ನೋಟುಗಳು, ಒಂದು ವಾಹನ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿಕ್ಕೋಡಿ: ಖೋಟಾ ನೋಟು ಜಾಲ ಪತ್ತೆ: ಮುಗ್ದ ಜನರಿಗೆ ವಂಚಿಸುತ್ತಿದ್ದ ಗ್ಯಾಂಗ್‌ ಅರೆಸ್ಟ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು