ಪತ್ನಿ ಅಂತ್ಯಸಂಸ್ಕಾರ ವೇಳೆ ಶಾಮಿಯಾನಕ್ಕೆ ನೇಣು ಬಿಗಿದು ಪತಿಯೂ ಆತ್ಮಹತ್ಯೆ

Published : Jul 19, 2021, 07:31 AM IST
ಪತ್ನಿ ಅಂತ್ಯಸಂಸ್ಕಾರ ವೇಳೆ ಶಾಮಿಯಾನಕ್ಕೆ ನೇಣು ಬಿಗಿದು ಪತಿಯೂ ಆತ್ಮಹತ್ಯೆ

ಸಾರಾಂಶ

* ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದಲ್ಲಿ ನಡೆದ ಘಟನೆ *  ಪತಿಗೆ ತೀವ್ರ ಕುಡಿತದ ಚಟ * ಈ ಸಂಬಂಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು  

ಬೆಳ್ತಂಗಡಿ(ಜು.19): ಪತ್ನಿ ಆತ್ಮಹತ್ಯೆ ಮಾಡಿಕೊಂಡದ್ದರಿಂದ ಮನನೊಂದ ಪತಿ, ಆಕೆಯ ಅಂತ್ಯಸಂಸ್ಕಾರಕ್ಕೆ ಹಾಕಲಾಗಿದ್ದ ಶಾಮಿಯಾನದ ಕಂಬಕ್ಕೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ಮುಡಿಪಿರೆ ಎಂಬಲ್ಲಿ ನಡೆದಿದೆ. 

ಚಂದ್ರಾವತಿ (49) ಅವರು ಮನೆಯ ಪಕ್ಕದ ಗೇರುಮರಕ್ಕೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಮರುದಿನ ಅವರ ಪತಿ ಶಿವಪ್ಪ ಗೌಡ(56) ಎಂಬವರೂ ಇದೇ ಕೃತ್ಯವೆಸಗಿದ್ದಾರೆ. 

ಮಾಟಕ್ಕೆ ಹೆದರಿ ಇಬ್ಬರು ಮಕ್ಕಳ ಕೊಂದ ತಂದೆ, ರಕ್ತ ದೇವರಿಗೆ ಅರ್ಪಣೆ!

ಪತಿಗೆ ತೀವ್ರ ಕುಡಿತದ ಚಟ, ಪತಿಗೆ ವಾಸಿಯಾಗದ ದೀರ್ಘ ಕಾಲದ ಅಸೌಖ್ಯ ಮತ್ತು ಮಕ್ಕಳಾಗದೆ ಇರುವ ಬಗ್ಗೆ ಮಾನಸಿಕವಾಗಿ ನೊಂದಿದ್ದ ಚಂದ್ರಾವತಿ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ದಂಪತಿ ತಾಯಿ ನಾಗಮ್ಮರೊಂದಿಗೆ ವಾಸ್ತವ್ಯವಿದ್ದರು. ಇದೀಗ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದು, ತಾಯಿ ಒಬ್ಬಂಟಿಯಾಗಿದ್ದಾರೆ. ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೆಳತಿಯ ತಡೆಯಲು ಕಾರಿನ ರೂಫ್‌ ಮೇಲೆ ಹತ್ತಿದ.. ಆದರೆ ಆಕೆಯ ಪ್ರಿಯಕರ ಆತನ ಮೇಲೆ ಕಾರು ಹತ್ತಿಸಿದ
Shivamogga: 14 ವರ್ಷ ಜೈಲು ಶಿಕ್ಷೆ ಅನುಭವಿಸಿದ್ರು ಬದಲಾಗಲಿಲ್ಲ; ತಂದೆಯನ್ನು ಕೊಲೆಗೈದು ಬಾವಿಗೆ ಎಸೆದ ಮಗ!