ಮುಂಡಗೋಡ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ವ್ಯಕ್ತಿ ಆತ್ಮಹತ್ಯೆ

Kannadaprabha News   | Asianet News
Published : Aug 18, 2021, 09:13 AM IST
ಮುಂಡಗೋಡ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ವ್ಯಕ್ತಿ ಆತ್ಮಹತ್ಯೆ

ಸಾರಾಂಶ

*  ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಕಾವಲಕೊಪ್ಪ ಗ್ರಾಮದಲ್ಲಿ ನಡೆದ ಘಟನೆ *  ಗಂಗಾಧರ ಶಿಡ್ರೊಳ್ಳಿ ಜಾಧವ ಆತ್ಮಹತ್ಯೆಗೆ ಶರಣಾದ ವ್ಯಕ್ತಿ *  ಗಾಯಗೊಂಡ ಪತ್ನಿಯ ಸ್ಥಿತಿ ನೋಡಿ ಹೆದರಿದ ಪತಿ   

ಮುಂಡಗೋಡ(ಆ.18): ಪತ್ನಿಯ ಮೇಲೆ ಕತ್ತಿಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ವ್ಯಕ್ತಿಯೋರ್ವ ಆಕೆಯ ಸ್ಥಿತಿ ನೋಡಿ ಗಾಬರಿಗೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಾವಲಕೊಪ್ಪ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ. 

ಗಂಗಾಧರ ಶಿಡ್ರೊಳ್ಳಿ ಜಾಧವ(40) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಪತ್ನಿ ರೇಖಾ ಅವರೊಂದಿಗೆ ಜಗಳವಾಗಿದ್ದು, ಅದು ಅತಿರೇಕಕ್ಕೆ ತಿರುಗಿ ಪತ್ನಿ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ. 

ಕಾರಿನಲ್ಲಿ ಬೆಂಕಿಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆ

ತೀವ್ರ ಗಾಯಗೊಂಡ ಪತ್ನಿಯ ಸ್ಥಿತಿ ನೋಡಿ ಹೆದರಿದ ಈತ ಗದ್ದೆಗೆ ತೆರಳಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಿಂತಾಜನಕ ಸ್ಥಿತಿಯಲ್ಲಿರುವ ಈತನ ಪತ್ನಿಯನ್ನು ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಹುನುಗುಂದದಲ್ಲಿ ಮಂಕಿ ಕ್ಯಾಪ್ ಗ್ಯಾಂಗ್: ಒಂದೇ ರಾತ್ರಿ, 9 ಮನೆ ಕಳವು, ಪೋಲಿಸರ ಮನೆಗಳನ್ನೇ ಬಿಡದ ಖದೀಮರು!
ಬೆಂಗಳೂರು: ತಿಂಡಿ ಎಸೆದು ಪಾತ್ರೆಯಿಂದ ಹಲ್ಲೆ ಮಾಡಿದ ಪುಂಡರಿಗೆ ಕುದಿಯುವ ಎಣ್ಣೆ ಎರಚಿದ ವ್ಯಾಪಾರಿ!