ಹೆಂಡತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸುತ್ತಿದ್ದನ್ನು ಕಣ್ಣಾರೆ ಕಂಡ ಪತಿ ಹಾರ್ಟ್ ಅಟ್ಯಾಕ್‌ಗೆ ಬಲಿ

Published : Nov 04, 2023, 11:01 AM IST
ಹೆಂಡತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸುತ್ತಿದ್ದನ್ನು ಕಣ್ಣಾರೆ ಕಂಡ ಪತಿ ಹಾರ್ಟ್ ಅಟ್ಯಾಕ್‌ಗೆ ಬಲಿ

ಸಾರಾಂಶ

ಬೆಂಗಳೂರಿನ ಚಂದ್ರಲೇಔಟ್‌ನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಹೆಂಡತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸುತ್ತಿದ್ದನ್ನು ಕಣ್ಣಾರೆ ಕಂಡು ಪತಿಗೆ ಹಾರ್ಟ್ ಅಟ್ಯಾಕ್ ಆಗಿ ಸಾವಿಗೀಡಾಗಿದ್ದಾನೆ.

ಬೆಂಗಳೂರು (ಅ.4): ಬೆಂಗಳೂರಿನ ಚಂದ್ರಲೇಔಟ್‌ನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಹೆಂಡತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸುತ್ತಿದ್ದನ್ನು ಕಣ್ಣಾರೆ ಕಂಡು ಪತಿಗೆ ಹಾರ್ಟ್ ಅಟ್ಯಾಕ್ ಆಗಿ ಸಾವಿಗೀಡಾಗಿದ್ದಾನೆ. ಪತ್ನಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ. 

ಬೆಂಗಳೂರಿನ ಚಂದ್ರಲೇಔಟ್‌ನ ಗಂಗೊಂಡನ ಹಳ್ಳಿ ನಿವಾಸಿ  ಮುದಾಸೀರ್ ಖಾನ್. ಸಣ್ಣ ಪುಟ್ಟ ಕೆಲಸ ಮಾಡ್ಕೊಂಡು ತನ್ನ ಹೆಂಡತಿ ಹಾಗೂ ಮೂವರು ಮಕ್ಕಳ ಜೊತೆ ಸುಖ ಸಂಸಾರ ನಡೆಸುತ್ತಿದ್ದ.‌ ಆದ್ರೆ ಈ ಸುಖ ಸಂಸಾರದ ಮೇಲೆ  ವಹೀದ್ ಅಹ್ಮದ್ ಹಾಗೂ ಮತೀನ್ ಅಹ್ಮದ್ ಎಂಬ  ಇಬ್ಬರ ಕಣ್ಣು ಬಿತ್ತು. ಮುದಾಸೀರ್ ಹೆಂಡತಿ ಕಂಡ್ರೆ ಅದೇನೋ ಇವರಿಬ್ಬರಿಗೆ ಕೋಪ. ಈ ಇಬ್ಬರೂ ಅಣ್ಣ ತಮ್ಮಂದಿರು  ಮುದಾಸೀರ್ ಸಂಬಂಧಿಕರೇ ಆಗಬೇಕು.  

ಈ ಪುಟ್ಟ ಸಂಸಾರ ಹಾಳು ಮಾಡಬೇಕೆಂದೇ ನಿನ್ನೆ ಮುದಾಸೀರ್ ಹೆಂಡತಿಯ ನಡತೆಯ ಬಗ್ಗೆ  ವಹೀದ್ ಹಾಗೂ ಮತೀನ್  ಕೆಟ್ಟದಾಗಿ ಮಾತನಾಡಿದ್ದಾರೆ. ಇದರಿಂದ ಕೋಪಗೊಂಡ ಮುದಾಸೀರ್ ಪತ್ನಿ ತನ್ನ ಗಂಡನನ್ನು ಕರೆದುಕೊಂಡು  ರಾತ್ರಿ ವಹೀದ್ ಹಾಗೂ ಮತೀನ್ ಜೊತೆ ಜಗಳ ಮಾಡುತ್ತಾರೆ. ಈ ವೇಳೆ ಕೋಪಗೊಂಡ ವಹೀದ್ ಹಾಗೂ ಮತೀನ್ ಇಬ್ಬರು ಮುದಾಸೀರ್ ಪತ್ನಿ ಮೇಲೆ ಮಚ್ಚಿನಿಂದ ಮನಸೋ ಇಚ್ಚೆ ಹಲ್ಲೆ ನಡೆಸಿದ್ದಾರೆ. ಹೆಂಡತಿ ಮೇಲೆ ಯಾವಾಗ ಮಾರಣಾಂತಿಕ ಹಲ್ಲೆ ನಡೆಯುತ್ತಿತ್ತೋ ಮುದಾಸಿರ್‌ಗೆ ಗಾಬರಿಯಿಂದ ಹಾರ್ಟ್ ಅಟ್ಯಾಕ್ ಆಗಿದೆ. 

ತಕ್ಷಣ ಮುದಾಸಿರ್‌ ಅನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ರು ಕೂಡ ಪ್ರಯೋಜನವಾಗದೇ ಕೊನೆಯುಸಿರೆಳೆದಿದ್ದಾನೆ. ಸದ್ಯಕ್ಕೆ ಚಂದ್ರಾಲೇಔಟ್ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ವಹೀದ್ ಹಾಗೂ ಮತೀನ್ ಇಬ್ಬರನ್ನೂ ಅರೆಸ್ಟ್ ಮಾಡಿ ತನಿಖೆ ಮುಂದುವರಿಸಿದ್ದಾರೆ. ಕೊನೆಗೂ ಅಣ್ಣ ತಮ್ಮನ ದ್ವೇಷಕ್ಕೆ ಮುದ್ದಾದ ಸಂಸಾರ ದುರಂತ ಅಂತ್ಯ ಕಂಡಿದ್ದು, ಮುದಾಸೀರ್ ಪತ್ನಿ ಸಾವು ಬದುಕಿನ ನಡುವೆ ಹೋರಾಟ ಮಾಡ್ತಿದ್ದಾಳೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೋರ್ಟ್ ಸಮಯ ಹಾಳು ಮಾಡುತ್ತಿರೋ ಡಿ ಗ್ಯಾಂಗ್; ದಾಸನ ಬೇಡಿಕೆಗೆ SPP ಗುನ್ನ, ಮುಗಿಯಲ್ಲ ಗ್ರಹಣ..!
ಖಮೇನಿ ಕ್ರೌರ್ಯದ ಪುಟಗಳಿಂದ: ಚಿಕಿತ್ಸೆ ಕೊಟ್ಟಳೆಂದು ಒಬ್ಬಳು, ಹಿಜಾಬ್​ಗಾಗಿ ಮತ್ತೊಬ್ಬಳು, ಮಗದೊಬ್ಬಳು! ಕಣ್ಣೀರಿನ ಕಥೆ ಇದು