ರಾಮನಗರ: ವರದಕ್ಷಿಣೆ ಆಸೆಗಾಗಿ ಮಹಿಳೆಗೆ ವಿಷ ಕುಡಿಸಿದ ಪತಿ ಮನೆಯವರು!

Published : Oct 16, 2024, 08:51 PM IST
ರಾಮನಗರ: ವರದಕ್ಷಿಣೆ ಆಸೆಗಾಗಿ ಮಹಿಳೆಗೆ ವಿಷ ಕುಡಿಸಿದ ಪತಿ ಮನೆಯವರು!

ಸಾರಾಂಶ

ತುಮಕೂರು ಜಿಲ್ಲೆ ಕುಣಿಗಲ್ ಟೌನಿನ ಬಿಎಲ್ ಆರ್‌ಎಸ್ ಲೇಔಟ್ ವಾಸಿ ವೀರಣ್ಣ ಮತ್ತು ಗೌರಮ್ಮ ದಂಪತಿ ಪುತ್ರಿ ವಿದ್ಯಾಶ್ರೀ ಮತ್ತು ಮಾಗಡಿ ತಾಲೂಕು ಕೂಡೂರು ಗ್ರಾಮದ ರೇಣುಕಪ್ಪ ಪುತ್ರ ಕರುಣೇಶ್ ಅವರೊಂದಿಗೆ 3 ವರ್ಷಗಳ ಹಿಂದೆ ಮದುವೆ ಆಗಿತ್ತು. ಆ ಸಂದರ್ಭದಲ್ಲಿ ವರನಿಗೆ 250 ಗ್ರಾಂ ಚಿನ್ನ, 1 ಕೆ.ಜಿ.ಬೆಳ್ಳಿ, 5 ಲಕ್ಷ ಹಣ ನೀಡಿ ಸುಮಾರು 15 ಲಕ್ಷ ರು.ಖರ್ಚು ಮಾಡಿ ವಿವಾಹ ಮಾಡಿಕೊಡಲಾಗಿತ್ತು. 

ಕುದೂರು(ಅ.16): ವರದಕ್ಷಿಣೆಗಾಗಿ ಪೀಡಿಸಿ ಮಹಿಳೆಗೆ ಆಕೆಯ ಪತಿ ಮನೆಯವರು ವಿಷ ಕುಡಿಸಿ ಸಾಯಿಸಲು ಯತ್ನಿಸಿರುವ ಘಟನೆ ಮಾಗಡಿ ತಾಲೂಕು ಸೋಲೂರು ಹೋಬಳಿಯ ಕೂಡೂರು ಗ್ರಾಮದಲ್ಲಿ ನಡೆದಿದೆ. ವಿಷ ಕುಡಿಸಿದ್ದರಿಂದ ಅಸ್ವಸ್ಥಗೊಂಡಿರುವ ವಿದ್ಯಾಶ್ರೀ (22) ಅವರನ್ನು ನೆಲಮಂಗಲದ ವಿ.ಪಿ.ಮ್ಯಾಗ್ನಸ್ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವು- ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. 

ತುಮಕೂರು ಜಿಲ್ಲೆ ಕುಣಿಗಲ್ ಟೌನಿನ ಬಿಎಲ್ ಆರ್‌ಎಸ್ ಲೇಔಟ್ ವಾಸಿ ವೀರಣ್ಣ ಮತ್ತು ಗೌರಮ್ಮ ದಂಪತಿ ಪುತ್ರಿ ವಿದ್ಯಾಶ್ರೀ ಮತ್ತು ಮಾಗಡಿ ತಾಲೂಕು ಕೂಡೂರು ಗ್ರಾಮದ ರೇಣುಕಪ್ಪ ಪುತ್ರ ಕರುಣೇಶ್ ಅವರೊಂದಿಗೆ 3 ವರ್ಷಗಳ ಹಿಂದೆ ಮದುವೆ ಆಗಿತ್ತು. ಆ ಸಂದರ್ಭದಲ್ಲಿ ವರನಿಗೆ 250 ಗ್ರಾಂ ಚಿನ್ನ, 1 ಕೆ.ಜಿ.ಬೆಳ್ಳಿ, 5 ಲಕ್ಷ ಹಣ ನೀಡಿ ಸುಮಾರು 15 ಲಕ್ಷ ರು.ಖರ್ಚು ಮಾಡಿ ವಿವಾಹ ಮಾಡಿಕೊಡಲಾಗಿತ್ತು. 

ಈಗ ಕರುಣೇಶ್ ಮತ್ತು ವಿದ್ಯಾಶ್ರೀ ದಂಪತಿಗೆ 2 ವರ್ಷದ ಗಂಡು ಮಗು ಇದೆ. ಪತಿ ಕರುಣೇಶ್ ಮನೆಯವರು ವರದಕ್ಷಿಣೆ ನೀಡಬೇಕೆಂದು ಪದೆ ಪದೇ ಕಿರುಕುಳ ನೀಡುತ್ತಿರುವ ವಿಚಾರವನ್ನು ವಿದ್ಯಾಶ್ರೀ ತನ್ನ ಪೋಷಕರಿಗೆ ಹೇಳುತ್ತಿದ್ದರು. ಕಳೆದ ಮಾರ್ಚ್ 14ರಂದು ಪತಿ ಕರುಣೇಶ್, ಅತ್ತೆ ಸರ್ವಮ್ಮ, ಮಾವ ರೇಣುಕಪ್ಪ, ನಾದಿನಿ ಚೈತ್ರಾ, ಆಕೆಯ ಗಂಡ ವಿನೋದ್ ಕುಮಾರ್‌ಸೇರಿಕೊಂಡು ವಿದ್ಯಾಶ್ರೀ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದರು. ಆಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ನಂತರ ಗ್ರಾಮದ ಮುಖಂಡರು ಮಧ್ಯಸ್ಥಿಕೆ ವಹಿಸಿ ರಾಜೀ ಸಂಧಾನ ಮಾಡಿ ವಿದ್ಯಾಶ್ರೀಯನ್ನು ಮತ್ತೆ ಪತಿಯ ಮನೆಗೆ ಕಳುಹಿಸಿ ಕೊಟ್ಟಿದ್ದರು. 

ಅ.14ರ ಬೆಳಗ್ಗೆ 6 ಗಂಟೆ ಸಮಯದಲ್ಲಿ ವಿದ್ಯಾಶ್ರೀ ಕಿರುಚಾಡುತ್ತಿರುವುದನ್ನು ಕೇಳಿಸಿಕೊಂಡು ಪಕ್ಕದ ಮನೆಯವರಾದ ದೀಪು ಮತ್ತು ಸ್ನೇಹಿತರು ಮನೆಯ ಬಾಗಿಲು ಒಡೆದು ಆಕೆಯನ್ನು ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿದರು. ಪೋಷಕರು ವೈದ್ಯರನ್ನು ವಿಚಾರಿಸಿದಾಗ ವಿದ್ಯಾಶ್ರೀಗೆ ವಿಷ ಕುಡಿಸಿದ್ದು, ಸಾವು- ಬದುಕಿನ ನಡುವೆ ಹೋರಾಟ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. 

ಕಳೆದ 8 ದಿನಗಳಿಂದ ಪತಿ ಮನೆಯವರು ವಿದ್ಯಾಶ್ರೀಗೆ ಹಿಂಸೆ ನೀಡುತ್ತಿದ್ದರು. ಹಬ್ಬ ಮುಗಿಸಿಕೊಂಡು ಮಾತನಾಡುವುದಾಗಿ ತಿಳಿಸಿದ್ದೇವು. ಈಗ ಆಕೆಗೆ ವಿಷ ಕುಡಿಸಿ ಸಾಯಿಸಲು ಯತ್ನಿಸಿದ್ದಾರೆ. ಇದಕ್ಕೆ ಕಾರಣರಾದ ಮಗಳ ಪತಿ ಕರುಣೇಶ್, ಅತ್ತೆ ಸರ್ವಮ್ಮ, ಮಾವ ರೇಣುಕಪ್ಪ, ನಾದಿನ ಚೈತ್ರ ಹಾಗೂ ಆಕೆಯ ಗಂಡ ವಿನೋದ್ ಕುಮಾರ್‌ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ವಿದ್ಯಾಶ್ರೀ ತಾಯಿ ಗೌರಮ್ಮ ಕುದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ