
ಅಥಣಿ(ಜ.31): ಪರಾರಿಯಾಗಿ ಗ್ರಾಮಕ್ಕೆ ಆಗಮಿಸಿದ್ದ ಪತ್ನಿ ತನ್ನ ಪ್ರಿಯಕರನನ್ನು ಆಕೆಯ ಪತಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದು, ಈ ವೇಳೆ ಬಿಡಿಸಲು ಹೋದ ಇಬ್ಬರಿಗೆ ತೀವ್ರ ಗಾಯಗಳಾದ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕೊಕಟನೂರು ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಕೊಕಟನೂರು ಗ್ರಾಮದ ಯಾಸಿನ್ ಬಾಗೋಡಿ (21) ಮತ್ತು ಹೀನಾ ಕೌಸರ್ (19) ಕೊಲೆಯಾದ ಪ್ರೇಮಿಗಳು. ಈ ಕುರಿತು ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೌಫಿಕ ಖ್ಯಾಡಿ ಹತ್ಯೆ ಮಾಡಿದ ಆರೋಪಿ.ಗಾಳಪ್ಪ ಕೊಲೆ ಪ್ರಕರಣ; ಸಾವಿಗೂ ಮುನ್ನ ಎದುರಾಳಿಯ ಕೈಗೆ ರೌಡಿಯಿಂದ ಗಂಭೀರ ಹಲ್ಲೆ!
ಘಟನೆ ವಿವರ:
ಕೊಕಟನೂರು ಗ್ರಾಮದ ಆರೋಪಿ ತೌಪಿಕ್ ಖ್ಯಾಡಿ ಎಂಬಾತನ ಜೊತೆ ಹೀನಾ ಕೌಸರ್ ವಿವಾಹವಾಗಿತ್ತು. ಆದರೆ ಹೀನಾ ಕೌಸರ್ಇತ್ತೀಚಿಗೆ ಅದೇ ಗ್ರಾಮದ ಯಾಸಿನ್ ಬಾಗೋಡಿ ಎಂಬಾತನನ್ನು ಪ್ರೀತಿಸುತ್ತಿದ್ದಳು. ಅಲ್ಲದೇ ಅನೇಕ ದಿನಗಳಿಂದ ಗ್ರಾಮದಿಂದ ಪರಾರಿಯಾಗಿದ್ದರು. ಇಬ್ಬರು ಗ್ರಾಮಕ್ಕೆ ಆಗಮಿಸಿದ ಬಗ್ಗೆ ಮಾಹಿತಿ ತಿಳಿದುಕೊಂಡ ತೌಫಿಕ್ ಖ್ಯಾಡಿ ರೊಚ್ಚಿಗೆದ್ದು ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಈ ಮಾರಾಮಾರಿಯಲ್ಲಿ ಜಗಳ ಬಿಡಿಸಲು ಹೋದ ಅಮೀನ್ ಬಾಗೋಡಿ ಮತ್ತು ಮುಶಿಪ್ ಮುಲ್ಲಾ ಎಂಬುವರಿಗೆ ತೀವ್ರ ಗಾಯವಾಗಿದ್ದು, ಗಾಯಾ ಳುಗಳಿಗೆ ಅಥಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮಿರಜ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗಾಗಿ ಶೋಧಕಾರ್ಯ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ