ಗಂಗಾವತಿ: ವರದಕ್ಷಿಣೆ ತರದ ಪತ್ನಿಯನ್ನ ಕಾಲುವೆಗೆ ನೂಕಿ ಕೊಲೆಗೈದ ಪಾಪಿ ಗಂಡ..!

Published : Sep 27, 2023, 11:38 AM IST
ಗಂಗಾವತಿ: ವರದಕ್ಷಿಣೆ ತರದ ಪತ್ನಿಯನ್ನ ಕಾಲುವೆಗೆ ನೂಕಿ ಕೊಲೆಗೈದ ಪಾಪಿ ಗಂಡ..!

ಸಾರಾಂಶ

ಪತ್ನಿ ಶರಣಮ್ಮಳನ್ನು ಬೈಕ್ ಮೇಲೆ ಕರೆದುಕೊಂಡು ಬಂದ ಪತಿ ಡಂಕನಕಲ್ ಬಳಿಯ ತುಂಗಭದ್ರಾ ಕಾಲುವೆಗೆ ನೂಕಿ ಕೊಲೆ ಮಾಡಿದ ಪತಿ. ಈ ಸಂಬಂಧ ಗಂಗಾವತಿ ಗ್ರಾಮೀಣ ಠಾಣೆಗೆ ದೂರು ನೀಡಿದ ಮೃತ ಶರಣಮ್ಮಳ ಸಂಬಂಧಿಕರು. 

ಗಂಗಾವತಿ(ಸೆ.27):  ವರದಕ್ಷಿಣೆ ಕಿರುಕುಳದ ಜೊತೆ ದೈಹಿಕ, ಮಾನಸಿಕ ಹಿಂಸೆ ನೀಡಿ ಪತ್ನಿಯನ್ನು ಎಡದಂಡೆ ಕಾಲುವೆಗೆ ನೂಕಿ ಕೊಲೆಗೈದ ಘಟನೆ ತಾಲೂಕಿನ ಜಿರಾಳ ಕಲ್ಗುಡಿ ಡಂಕನಕಲ್ ಬಳಿ ಸೋಮವಾರ ಸಂಜೆ ನಡೆದಿದೆ. ಇಲ್ಲಿನ ನಿವಾಸಿ ಶರಣಮ್ಮ ಚಿದಾನಂದ ಕೊಲೆಯಾದ ಗೃಹಿಣಿ ಎಂದು ತಿಳಿದುಬಂದಿದೆ.

12 ವರ್ಷಗಳ ಹಿಂದೆ ಇರ್ಕಲ್‌ ಗಡಾದ ಶರಣಮ್ಮಳನ್ನು ಜಿರಾಳ ಕಲ್ಗುಡಿಯ ಚಿದಾನಂದ ಹನುಮಂತಪ್ಪ ಎಂಬವರಿಗೆ ಮದುವೆ ಮಾಡಿಕೊಡಲಾಗಿತ್ತು. ಈ ವೇಳೆ 3 ತೊಲೆ ಚಿನ್ನ, ₹50 ಸಾವಿರ ನಗದು ಮತ್ತು ವಾಚ್‌ನ್ನು ವರದಕ್ಷಿಣೆಯಾಗಿ ನೀಡಲಾಗಿತ್ತು. ಆದರೂ ಪತಿ ದೈಹಿಕ, ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದನ್ನು ಸಹಿಸದ ಶರಣಮ್ಮಳ ಕುಟುಂಬದವರು ಮುಖಂಡರೊಂದಿಗೆ ಪಂಚಾಯಿತಿ ಮಾಡಿಸಿದ್ದರು. ಪತಿ ಮತ್ತೆ ಕಿರುಕುಳ ನೀಡುವುದನ್ನು ಮುಂದುವರಿಸಿದ್ದರಿಂದ ಮಗಳನ್ನು ತವರುಮನೆಯವರು ಇರ್ಕಲ್ ಗಡಾಕ್ಕೆ ಕರೆದುಕೊಂಡು ಬಂದಿದ್ದರು.

ರಾಯಚೂರು: ಪತ್ನಿ ಕೊಲೆ ಮಾಡಿ ಪತಿ ಆತ್ಮಹತ್ಯೆ, ಪಾಲಕರನ್ನು ಕಳೆದುಕೊಂಡ ಇಬ್ಬರು ಮಕ್ಕಳು ಅನಾಥ

ಸೋಮವಾರ ಇರ್ಕಲ್ ಗಡಾದಿಂದ ಪತ್ನಿ ಶರಣಮ್ಮಳನ್ನು ಬೈಕ್ ಮೇಲೆ ಕರೆದುಕೊಂಡು ಬಂದ ಪತಿ ಡಂಕನಕಲ್ ಬಳಿಯ ತುಂಗಭದ್ರಾ ಕಾಲುವೆಗೆ ನೂಕಿ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿತು. ಇದರಿಂದ ಅನುಮಾನಗೊಂಡ ಶರಣಮ್ಮಳ ಸಂಬಂಧಿಕರು ಗಂಗಾವತಿ ಗ್ರಾಮೀಣ ಠಾಣೆಗೆ ದೂರು ನೀಡಿದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡರು.

ಪತಿ ಚಿದಾನಂದನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಪತ್ನಿಯನ್ನು ಕಾಲುವೆಗೆ ನೂಕಿದ್ದಾಗಿ ಆತ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಶರಣಮ್ಮಳ ಶವ ಸಿಂಧನೂರು ತಾಲೂಕಿನ ದುರ್ಗಾಕ್ಯಾಂಪ್ ಬಳಿ ಮಂಗಳವಾರ ಪತ್ತೆಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?