
ರಾಯಚೂರು (ನ.27): ಕುಡಿಯುದಕ್ಕೆ ಹಣ ಕೊಡಲಿಲ್ಲವೆಂದು ಪತ್ನಿಯನ್ನೇ ಹೊಡೆದು ಕೊಂದಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಚಿಕ್ಕ ಉಪ್ಪೇರಿ ಗ್ರಾಮದಲ್ಲಿ ನಡೆದಿದೆ.
ಸುನೀತಾ (28)ಹತ್ಯೆಯಾದ ಮಹಿಳೆ, ಪತಿ ಬಸವರಾಜ್ ಕೊಲೆಗೈದ ಆರೋಪಿ. 2015ರಲ್ಲಿ ಪರಸ್ಪರ ಪ್ರೀತಿಸಿ ಲಿಂಗಸಗೂರು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆಯಾಗಿದ್ದ ದಂಪತಿ. ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳು, ಮದುವೆಯಾಗಿ ಕೆಲ ದಿನಗಳ ಕಾಲ ಮಾತ್ರ ಸುಖಸಂಸಾರ ನಡೆಸಿದ್ದಾರೆ. ಕುಡಿತದ ಚಟಕ್ಕೆ ದಾಸನಾಗಿದ್ದ ಆರೋಪಿ ಬಸವರಾಜ್, ಕುಡಿದು ಬಂದು ದಿನನಿತ್ಯ ಪತ್ನಿಯೊಂದಿಗೆ ಗಲಾಟೆ ಮಾಡುತ್ತಿದ್ದ. ಕುಡಿಯುವುದಕ್ಕೆ ಹಣ ನೀಡುವಂತೆ ಪೀಡಿಸುತ್ತಿದ್ದ ಪತಿರಾಯ. ಎಷ್ಟು ದಿನಾಂತ ಕೊಟ್ಟಾಳು? ಕೂಲಿ ಮಾಡಿ ಕೂಡಿಟ್ಟ ಹಣವೆಲ್ಲ ಗಂಡ ಬಸವರಾಜನ ಕುಡಿತಕ್ಕೆ ಹೋಗುತ್ತಿದ್ದರಿಂದ ಸಂಸಾರ ನಡೆಸುವುದೇ ಕಷ್ಟವಾಗಿದೆ.
ರಾಷ್ಟ್ರೀಯ ರನ್ನಿಂಗ್ ರೇಸ್ ಸೋಲು; ಪುತ್ತೂರಿನ ವಿದ್ಯಾರ್ಥಿನಿ ಆತ್ಮಹತ್ಯೆ !
ಎಂದಿನಂತೆ ನಿನ್ನೆ ಸಂಜೆಯೂ ಸಹ ಜಮೀನಿನಲ್ಲಿ ಬೆಳೆಗೆ ನೀರು ಕಟ್ಟುವಾಗ ಇಬ್ಬರ ನಡುವೆ ಗಲಾಟೆಯಾಗಿದೆ. ಜಮೀನಿನಲ್ಲಿ ಕುಡಿಯುವುದಕ್ಕೆ ಹಣ ಕೊಡುವಂತೆ ಪತ್ನಿಯೊಂದಿಗೆ ಜಗಳಕ್ಕಿಳಿದಿರುವ ಪತಿ. ಈ ವೇಳೆ ಹಣ ಕೊಡಲು ಒಪ್ಪದ್ದಕ್ಕೆ ಇಬ್ಬರ ನಡುವೆ ಜಮೀನಿನಲ್ಲಿ ಜಗಳವಾಗಿದೆ ಈ ವೇಳೆ ಕೋಪಗೊಂಡು ಪತ್ನಿಯನ್ನ ಹತ್ಯೆ ಮಾಡಿರುವ ಆರೋಪಿ ಬಸವರಾಜ್
ಸದ್ಯ ಪ್ರಕರಣ ಸಂಬಂಧ ಲಿಂಗಸಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖದೀಮರು ಹೇಗೆಲ್ಲ ವಂಚನೆ ಮಾಡ್ತಾರೆ ನೋಡಿ; ಸಾಲ ಕೊಡಿಸೋದಾಗಿ ನಂಬಿಸಿ ಉದ್ಯಮಿಗೆ ಬರೋಬ್ಬರಿ ₹2.40 ಕೋಟಿ ಟೋಪಿ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ