Davanagere: ಚಿಕನ್ ಮಾಡಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಕೊಂದ ಕಿರಾತಕ ಪತಿ

Published : Jun 09, 2022, 08:46 PM IST
Davanagere: ಚಿಕನ್ ಮಾಡಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಕೊಂದ ಕಿರಾತಕ ಪತಿ

ಸಾರಾಂಶ

ಊಟಕ್ಕೆ ಚಿಕನ್ ಮಾಡಿಲ್ಲ ಎನ್ನುವ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಪತ್ನಿಯನ್ನು ಪತಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ದಾವಣಗೆರೆ ಜಿಲ್ಲೆಯಲ್ಲಿ ನಡೆದ ಈ ಕೊಲೆ ಪ್ರಕರಣದ ಸಂಪೂರ್ಣ ವರದಿ ಓದಿ.

ವರದಿ: ವರದರಾಜ್, ದಾವಣಗೆರೆ

ದಾವಣಗೆರೆ (ಜೂ.09): ಅವರಿಬ್ಬರು ಪ್ರೀತಿಸಿ ಮದುವೆಯಾದ ಜೋಡಿ, ಒಂದು ಮದುವೆಯಾದರೂ, ಮೊದಲನೇ ಹೆಂಡತಿಗೆ ಮಕ್ಕಳಾಗಿಲ್ಲ ಎಂದು  ಮತ್ತೊಂದು ಯುವತಿಯನ್ನು ಪ್ರೀತಿಸಿ ಮದುವೆಯಾದ, ಮಗು ಆದ ನಂತರ ಎರಡನೇ ಮದುವೆಯ ವಿಷಯ ಗೊತ್ತಾಗಿದೆ. ಆಗಿನಿಂದ ಸಣ್ಣಪುಟ್ಟ ಗಲಾಟೆಗಳು ನಡೆಯುತ್ತಿದ್ದು, ಕಳೆದ ರಾತ್ರಿ ಊಟಕ್ಕೆ ಚಿಕನ್ ಮಾಡಿಲ್ಲ ಎನ್ನುವ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಪತ್ನಿಯನ್ನು ಪತಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ದಾವಣಗೆರೆ ಜಿಲ್ಲೆಯಲ್ಲಿ ನಡೆದ ಈ ಕೊಲೆ ಪ್ರಕರಣದ ಸಂಪೂರ್ಣ ವರದಿ ಓದಿ.

ಸಂಸಾರ ಅಂದ್ರೆ ಹಾಗೇ ಎಲ್ಲಾವು ಸರಿ ಇದ್ದರೆ ಸುಖಜೀವನ  ಇರುತ್ತೆ. ಏನಾದ್ರು ಒಬ್ಬರ ಮೇಲೊಬ್ಬರ ಮೇಲೆ  ಅನುಮಾನ ಮನಸ್ಥಾಪಗಳು ಬಂದ್ರೆ ನಿಜಕ್ಕೂ ಬದುಕು ನರಕವಾಗುತ್ತದೆ. ಅಂತಹದ್ದೇ ಒಂದು ಘಟನೆಗೆ ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಬನ್ನಿ ಕೋಡು ಗ್ರಾಮ ಸಾಕ್ಷಿಯಾಗಿದೆ. ಗಂಡ ಹೆಂಡತಿಯ ನಡುವೆ ಚಿಕನ್ ಊಟದ ವಿಚಾರವಾಗಿ ಜಗಳ ತಾರಕಕ್ಕೇರಿ ತನ್ನಪತ್ನಿಯನ್ನೇ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ. ಹೀಗೆ ರಕ್ತದ ಮಡುವಿನಲ್ಲಿ ಬಿದ್ದಿರುವ ಮಹಿಳೆಯ ಹೆಸರು ಶೀಲಾ. ಬನ್ನಿಕೋಡು ಗ್ರಾಮದ ರೋಡ್ ರೋಲರ್ ಅಪರೇಟರ್ ಆಗಿದ್ದ ಕೆಂಚಪ್ಪನ  ಜೊತೆ 9 ವರ್ಷಗಳ ಹಿಂದೆ ಮದುವೆಯಾಗಿತ್ತು.

ಶಿಕ್ಷಣ ಸಚಿವರ ಮನೆಗೆ ನುಗ್ಗಿದವರು ವಿದ್ಯಾರ್ಥಿಗಳೇ ಅಲ್ಲ: Araga Jnanendra

ಹರಿಹರ ತಾಲೂಕಿನ ವಾಸನ ಗ್ರಾಮದ ಶೀಲಾಳನ್ನು ಕೆಂಚಪ್ಪ ಪ್ರೀತಿಸಿ ಮನೆಯವರು ವಿರೋಧದ ನಡುವೆ ಮದುವೆಯಾಗಿದ್ದ. ಈ  ಹಿನ್ನಲೆ ಮನೆಯಿಂದ ಓಡಿ ಬಂದು ದೇವಸ್ಥಾನದಲ್ಲಿ ಮದುವೆಯಾಗಿದ್ದರು, ಹೇಗೋ ಸುಖವಾಗಿ ಸಂಸಾರ ಮಾಡಿ ಒಂದು ಮುದ್ದಾದ ಮಗುವನ್ನು ಪಡೆದಿದ್ದರು, ಆಗ ಕೆಂಚಪ್ಪನ ಅಸಲಿ ಸತ್ಯ ಗೊತ್ತಾಗಿದೆ. ಕೆಂಚಪ್ಪನಿಗೆ ಈಗಾಗಲೇ ಮದುವೆ ಯಾಗಿದ್ದು, ಆಕೆಗೆ ಮಕ್ಕಳಿಲ್ಲ ಎನ್ನುವ ಕಾರಣಕ್ಕೆ ತನ್ನನ್ನು  ಮದುವೆಯಾಗಿರುವುದು ಶೀಲಾಳಿಗೆ  ಗೊತ್ತಾಗಿದೆ. ಅಂದಿನಿಂದ ಗಂಡ ಹೆಂಡತಿ ನಡುವೆ  ಪ್ರತಿನಿತ್ಯ ಒಂದಿಲ್ಲೊಂದು ಕಾರಣಕ್ಕೆ  ಜಗಳ ಶುರುವಾಗಿದೆ. ಕೆಂಚಪ್ಪ ಕೂಡ ಮದ್ಯ ಸೇವನೆ ಮಾಡಿ ಬಂದು ಮನೆಯಲ್ಲಿ  ರಾದ್ದಾಂತ ಮಾಡುತ್ತಿದ್ದ, ಇದು ಎರಡು ಮನೆಯವರಿಗೆ ಗೊತ್ತಾಗಿ ರಾಜೀ ಪಂಚಾಯತಿ ಮಾಡಿ ಹೋಗಿದ್ದರು. 

ಆದರೆ ಕಳೆದ ರಾತ್ರಿ ಮದ್ಯ ಸೇವನೆ ಮಾಡಿ ಬಂದ ಕೆಂಚಪ್ಪ ಹೆಂಡತಿಗೆ ಚಿಕನ್ ಅಡುಗೆ ಮಾಡಿಲ್ಲ ಎಂದು ಜಗಳವಾಡಿ ಕೊನೆಗೆ ಚಾಕುವಿನಿಂದ ಹಿರಿದು ಕೊಲೆ ಮಾಡಿದ್ದಾನೆ. ಒಂದು ಮಗು ಆಗುವವರೆಗು ಚೆನ್ನಾಗಿದ್ದ  ಕೆಂಚಪ್ಪ  ನಂತರ ನಿತ್ಯ ಕುಡಿದು ಬಂದು ಜಗಳವಾಡುತ್ತಿದ್ದ. ಇದರಿಂದ ಶೀಲಾ ತನ್ನ 4 ವರ್ಷದ ಮಗಳನ್ನು ತಾಯಿ ಮನೆಯಲ್ಲಿಯೇ ಬಿಟ್ಟಿದ್ದಳು, ಅಲ್ಲದೆ ಕಳೆದ 7 ರಂದು ಮಗಳ ಹುಟ್ಟುಹಬ್ಬವನ್ನು ತವರು ಮನೆಯಲ್ಲಿಯೇ ಆಚರಣೆ ಮಾಡಿ ಬುಧವಾರ ಬಂದಿದ್ದರು, ಹುಟ್ಟು ಹಬ್ಬಕ್ಕೂ‌ ಕೂಡ ಕೆಂಚಪ್ಪ ಹೋಗಿರಲಿಲ್ಲ. ತವರಿನಿಂದ ವಾಪಸ್ಸು ಬಂದ ನಂತರ ಮತ್ತೆ ಜಗಳವಾಡಿದ್ದ, ಅಲ್ಲದೆ ಸಂಜೆ ಬರುವುದರೊಳಗೆ ಚಿಕನ್ ಮಾಡು ಎಂದು ಹೇಳಿ ಹೋಗಿದ್ದಾನೆ.

Davangere: ಕೊಚ್ಚಿಹೋದ ಕಾಲುವೆಯಿಂದ 15 ಕೋಟಿ ಭತ್ತ ಬೆಳೆ ಒಣಗುವ ಭೀತಿ

ರಾತ್ರಿ ಮದ್ಯ ಸೇವನೆ ಮಾಡಿ ಬಂದ ಕೆಂಚಪ್ಪ ಶೀಲಾಳ ಜೊತೆ ಜಗಳವಾಡಿ ಚಾಕುವಿನಿಂದ ಹಿರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಕೊಲೆ ಸಂಬಂಧ ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೊದಲ ಮದುವೆ ಆಗಿದ್ದನ್ನು ಮುಚ್ಚಿಟ್ಟು ಸುಳ್ಳು ಹೇಳಿ ಶೀಲಾಳನ್ನು ವರಿಸಿದ್ದ ಕೆಂಚಪ್ಪ ಮದ್ಯದ ದಾಸನಾಗಿ ತನ್ನ ಸಂಸಾರವೇ ತಾನೇ ಹಾಳು ಮಾಡಿಕೊಂಡಿದ್ದಾನೆ. ದುರಂತದಲ್ಲಿ ಇತ್ತ ತಾಯಿ ಇನ್ನೊಂದು ಕಡೆ  ತಂದೆ ಕಳೆದುಕೊಂಡು ಪುಟ್ಟ ಮಗು ಮಾತ್ರ ಅನಾಥವಾಗಿದೆ. ಮಗಳನ್ನು ಕಳೆದುಕೊಂಡ ಕುಟುಂಬ ಮಗಳು ಅನ್ಯಾಯವಾಗಿ ಸಾವನ್ನಪ್ಪಿದ್ದು ಆರೋಪಿಗೆ ತಕ್ಕ ಶಿಕ್ಷೆಯಾಗಬೇಕೆಂದು ಆಗ್ರಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು