
ಚಾಮರಾಜನಗರ(ಅ.24): ಹಣಕಾಸಿನ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಜಗಳ ನಡೆದು ಹೆಂಡತಿಯನ್ನು ಕೊಲೆ ಮಾಡಿರುವ ಘಟನೆ ತಾಲೂಕಿನ ಮಂಗಲ ಹೊಸೂರು ಗ್ರಾಮದಲ್ಲಿ ನಡೆದಿದೆ.
ತಮಿಳುನಾಡು ಮೂಲದ ರಾಧಿಕಾ (22) ಮೃತ ಪಟ್ಟಿದ್ದಾಳೆ. ಪತಿ ಕಾರ್ತಿಕ್ ಬಲವಾದ ಆಯುಧದಿಂದ ತಲೆಗೆ ಹೊಡೆದು ಹೆಂಡತಿಯನ್ನು ಕೊಂದಿದ್ದಾನೆ. ಇವರು ಮಂಗಲ ಹೊಸೂರು ಗ್ರಾಮದಲ್ಲಿ ಜಮೀನನ್ನು ಗುತ್ತಿಗೆ ಪಡೆದು ವ್ಯವಸಾಯ ಮಾಡುತಿದ್ದರು. ದಂಪತಿಗೆ 10 ತಿಂಗಳ ಹೆಣ್ಣು ಮಗುವಿದ್ದು, ಹಣಕಾಸಿನ ವಿಚಾರವಾಗಿ ರಾತ್ರಿ ಜಗಳ ಆಗಿತ್ತು. ಕೋಪದಲ್ಲಿ ಗಂಡ ಆಯುಧದಿಂದ ಹೆಂಡತಿಯ ತಲೆಗೆ ಹೊಡೆದಿದ್ದಾನೆ.
ಉತ್ತರ ಕನ್ನಡ: ಮದುವೆಯಾಗಿ ಮಕ್ಕಳಿದ್ರೂ ಬಿಡದ ಆ ಒಂದು ಚಟ, ಹೆಂಡತಿಯ ಕತ್ತು ಸೀಳಿ ಕೊಲೆ ಮಾಡಿದ ಗಂಡ
ಆರೋಪಿ ಕಾರ್ತಿಕ್ ನನ್ನು ವಶಕ್ಕೆ ಪಡೆದಿರುವ ಸಂತೇಮರಹಳ್ಳಿ ಪೊಲೀಸರು ಡಿವೈಎಸ್ಪಿ ಲಕ್ಷ್ಮಯ್ಯ, ಸರ್ಕಲ್ ಇನ್ಸ್ಪೆಕ್ಟರ್ ಬಸವರಾಜ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ