ಕೂಡ್ಲಿಗಿ: ಶೀಲ ಶಂಕಿಸಿ ಕತ್ತು ಸೀಳಿ ಪತ್ನಿ ಹತ್ಯೆಗೈದ ಪತಿ

Kannadaprabha News   | Asianet News
Published : Sep 03, 2020, 11:58 AM IST
ಕೂಡ್ಲಿಗಿ: ಶೀಲ ಶಂಕಿಸಿ ಕತ್ತು ಸೀಳಿ ಪತ್ನಿ ಹತ್ಯೆಗೈದ ಪತಿ

ಸಾರಾಂಶ

ಶೀಲ ಶಂಕಿಸಿ ಪತ್ನಿಯ ಕತ್ತು ಸೀಳಿ ಕೊಲೆಗೈದ ಗಂಡ| ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮಡ್ಲಾಕನಹಳ್ಳಿ ಗ್ರಾಮದಲ್ಲಿ ನಡೆದ ಘಟನೆ| ಈ ಸಂಬಂಧ ಹೊಸಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು| 

ಕೂಡ್ಲಿಗಿ(ಸೆ.03): ಶೀಲ ಶಂಕಿಸಿ ಪತ್ನಿಯ ಕತ್ತು ಸೀಳಿ ಕೊಲೆಗೈದಿರುವ ಘಟನೆ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮಡ್ಲಾಕನಹಳ್ಳಿ ಗ್ರಾಮದಲ್ಲಿ ನಿನ್ನೆ(ಬುಧವಾರ) ಜರುಗಿದೆ. ವನಜಾಕ್ಷಿ(20) ಎಂಬುವರೇ ಕೊಲೆ​ಯಾದ ಮಹಿ​ಳೆಯಾಗಿದ್ದಾಳೆ. 

ವನ​ಜಾಕ್ಷಿಯನ್ನು ಸಂಡೂರು ತಾಲೂಕಿನ ತೊಣಸಿಗೆರೆ ಗ್ರಾಮದ ತಿಪ್ಪೇಶಿ ಎಂಬುವನೊಂದಿಗೆ 5 ತಿಂಗಳ ಹಿಂದೆ ಮದುವೆ ಮಾಡಿಕೊಡಲಾಗಿತು. ಇತ್ತೀಚೆಗೆ ನಾಗರ ಪಂಚಮಿ ಹಬ್ಬಕ್ಕೆಂದು ತವರೂರು ಮಡ್ಲಾಕನಹಳ್ಳಿಗೆ ಪತಿಯೊಂದಿಗೆ ಬಂದಿದ್ದರು. ನಂತರ ಪತ್ನಿಯ ಶೀಲದ ಬಗ್ಗೆ ಅನುಮಾನ ಪಟ್ಟ ಗಂಡ ತಿಪ್ಪೇಶಿ ಬುಧವಾರ ಮನೆಯಲ್ಲಿ ಎಲ್ಲರು ಜಮೀನಿಗೆ ಹೋದಾಗ ಹೆಂಡತಿಯೊಂದಿಗೆ ಜಗಳವಾಡಿ ನಂತರ ಕತ್ತಿಯಿಂದ ಕತ್ತುಸೀಳಿ ಕೊಲೆಗೈದು ಪರಾರಿಯಾಗಿದ್ದಾನೆ. 

ಹಸಿರಾಗುತ್ತಿದೆ ತುಂಗಭದ್ರಾ ಜಲಾಶಯದ ನೀರು

ಈ ಸಂಬಂಧ ತಾಲೂಕಿನ ಹೊಸಹಳ್ಳಿ ಪೊಲೀಸ್‌ ಠಾಣೆಯಲ್ಲಿ ಮೃತಳ ತಂದೆ ವೀರಣ್ಣ ನೀಡಿದ ದೂರಿನಂತೆ ಬುಧವಾರ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!