
ಕಲಬುರಗಿ(ಮಾ.04): ಕಪ್ಪಗಿದ್ದಿಯಾ ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ ಪತಿಯೊಬ್ಬ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿರುವ ಅಮಾನವೀಯ ಘಟನೆ ಜೇವರ್ಗಿ ತಾಲೂಕಿನ ಕೆಲ್ಲೂರ್ ಗ್ರಾಮದಲ್ಲಿ ನಡೆದಿದೆ. ಫರ್ಜಾನ ಬೇಗಂ (28) ಕೊಲೆಯಾದವರು. ಖಾಜಾ ಪಟೇಲ್ ಎಂಬಾತನೆ ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಕಪ್ಪಗಿದ್ದಿಯಾ, ನೀನೆಷ್ಟೇ ಪೌಡರ್ ಹಾಕಿದರೂ ಬೆಳ್ಳಗಾಗಲ್ಲ ಅಂತ ಖಾಜಾ ಪಟೇಲ್ ಪತ್ನಿ ಫರ್ಜಾನ ಬೇಗಂ ಅವರಿಗೆ ಕಿರುಕುಳ ನೀಡುತ್ತಿದ್ದ. ಅಲ್ಲದೆ ಮದುವೆಯಾದ ದಿನದಿಂದಲೂ ತವರು ಮನೆಯಿಂದ ವರದಕ್ಷಿಣೆ ತರುವಂತೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದ ಎಂದು ತಿಳಿದುಬಂದಿದೆ.
7 ವರ್ಷಗಳ ಹಿಂದೆ ಫರ್ಜಾನ ಬೇಗಂ ಮತ್ತು ಖಾಜಾ ಪಟೇಲ್ ಮದುವೆಯಾಗಿತ್ತು ಎಂದು ತಿಳಿದುಬಂದಿದೆ. ಕೊಲೆ ಮಾಡಿದ ಬಳಿಕ ಖಾಜಾ ಪಟೇಲ್ ಮತ್ತು ಆತನ ಕುಟುಂಬದವರು ಪರಾರಿಯಾಗಿದ್ದಾರೆ. ಈ ಸಂಬಂಧ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ