Bengaluru: ಅನೈತಿಕ ಸಂಬಂಧ ಶಂಕೆ, ಗಂಡನಿಂದಲೇ ಹೆಂಡತಿಯ ಬರ್ಬರ ಕೊಲೆ, ಅನಾಥವಾದ ಮಕ್ಕಳು!

Published : Jun 05, 2023, 11:50 AM IST
Bengaluru: ಅನೈತಿಕ ಸಂಬಂಧ ಶಂಕೆ, ಗಂಡನಿಂದಲೇ ಹೆಂಡತಿಯ ಬರ್ಬರ ಕೊಲೆ, ಅನಾಥವಾದ ಮಕ್ಕಳು!

ಸಾರಾಂಶ

ಬೆಂಗಳೂರಿನ ಬಸವೇಶ್ವರ ನಗರದ ಮಂಜುನಾಥನಗರದಲ್ಲಿ  ಗಂಡನಿಂದಲೇ ಹೆಂಡತಿಯ ಬರ್ಬರ ಕೊಲೆ ನಡೆದಿದೆ. ಅನೈತಿಕ ಸಂಬಂಧ ಕೊಲೆಗೆ ಕಾರಣ ಎಂದು ಹೇಳಲಾಗುತ್ತಿದೆ.

ಬೆಂಗಳೂರು (ಜೂ.5): ಬೆಂಗಳೂರಿನ ಬಸವೇಶ್ವರ ನಗರದ ಮಂಜುನಾಥನಗರದಲ್ಲಿ ಮಹಿಳೆಯ ಬರ್ಬರ ಕೊಲೆ ನಡೆದಿದೆ. ಗಂಡನಿಂದಲೇ ಹೆಂಡತಿಯ ಬರ್ಬರ ಕೊಲೆ ನಡೆದಿದ್ದು, ನಾಗರತ್ನ (32) ಕೊಲೆಯಾದ ಮಹಿಳೆ ಯಾಗಿದ್ದಾಳೆ. ಈಕೆಯ ಗಂಡ ಅಯ್ಯಪ್ಪ ಚಾಕುವಿನಿಂದ ಮನಸೋ ಇಚ್ಚೆ ಹಲ್ಲೆ ನಡೆಸಿ ಕೊಲೆ ನಡೆಸಿದ್ದಾನೆ. ಅನೈತಿಕ ಸಂಬಂಧದ ಅನುಮಾನದ ಹಿನ್ನೆಲೆ ಈ ಕೊಲೆ ನಡೆದಿರೋ ಶಂಕೆ ವ್ಯಕ್ತವಾಗಿದೆ.

ಅಪ್ಪ ಅಮ್ಮ‌ ಇಲ್ಲದೆ ಅನಾಥಾಶ್ರಮದಲ್ಲಿದ್ದ ನಾಗರತ್ನಳನ್ನು 12 ವರ್ಷಗಳ ಹಿಂದೆ ಅಯ್ಯಪ್ಪ ಮದುವೆಯಾಗಿದ್ದ, ದಂಪತಿಗೆ 11 ವರ್ಷದ ಮಗ ಹಾಗೂ 7 ವರ್ಷದ ಮಗಳು ಇದ್ದಳು. ಅಯ್ಯಪ್ಪ ತನ್ನ ಅಕ್ಕನ ಮನೆಯಲ್ಲಿ ಮಕ್ಕಳನ್ನು ಬಿಟ್ಟಿದ್ದನು. ಇತ್ತೀಚೆಗೆ ಹೆಂಡತಿ ಮೇಲೆ ಅಯ್ಯಪ್ಪ ಅನುಮಾನ ಪಡುತ್ತಾ ಇದ್ದನು. ಕಳೆದ ಮೂರು ದಿನಗಳಿಂದ ದಂಪತಿ ಮಧ್ಯೆ ಗಲಾಟೆ ನಡೀತಾ ಇತ್ತು. 

Bengaluru: ಪತಿ ಕಣ್ಣೆದುರೇ ಪತ್ನಿಯನ್ನು ಬಲಿ ತೆಗೆದುಕೊಂಡ ಕೆಎಸ್‌ಆರ್‌ಟಿಸಿ ಬಸ್!

ಇದಕ್ಕೆ ಪುಷ್ಟಿ ನೀಡುವಂತೆ ಕೊಲೆಯಾದ ಮಹಿಳೆ ನಾಗರತ್ನ ಜೊತೆ ಆ ದಿನ ಓರ್ವ ವ್ಯಕ್ತಿ ಇದ್ದ. ಅಯ್ಯಪ್ಪ ಅಕ್ಕನ ಮಗ ಚಂದ್ರು ಜೊತೆ ನಾಗರತ್ನ ಮನೆಯಲ್ಲಿದ್ದಳು. ಶನಿವಾರ ರಾತ್ರಿ  ಗಂಡ ಮನೆಗೆ ಬಂದಾಗ ಚಂದ್ರು ಮನೆಯಲ್ಲಿ ಮಲಗಿದ್ದ. ಚಂದ್ರುಗೆ ಮದುವೆಯಾಗಿ ಸಂಸಾರವಿದೆ. ಹೀಗಿದ್ದರೂ ತನ್ನ ಮನೆಯಲ್ಲಿ ಮಲಗಿದ್ದಾನೆ. ಯಾಕೆ ಬಂದಿದ್ದಾನೆ ಎಂದು ಅಯ್ಯಪ್ಪ ಗಲಾಟೆ ತೆಗೆದಿದ್ದ. ಚಂದ್ರು ಬಳಿಯಿದ್ದ ಮೊಬೈಲ್ ಕಿತ್ತುಕೊಂಡು ಗಲಾಟೆ ಮಾಡಿದ್ದ, ಬಳಿಕ ಚಂದ್ರು ನಾಪತ್ತೆಯಾಗಿದ್ದಾನೆ. ಸದ್ಯ ಚಂದ್ರು ಕುಟುಂಬದಲ್ಲಿ ಆತಂಕ ಶುರುವಾಗಿದೆ. ಸದ್ಯ ಚಂದ್ರು ನಾಪತ್ತೆ, ಮೊಬೈಲ್ ಸ್ವಿಚ್ ಆಫ್ ಹಿಂದೆ ಮತ್ತಷ್ಟು ಅನುಮಾನ ವ್ಯಕ್ತವಾಗಿದೆ.

MYSURU: ಹಿಂದೂ ಯುವಕ ಬರ್ತಡೇ ಆಚರಿಸಿದ್ದನ್ನು ವಿರೋಧಿಸಿ 5 ಜನರಿಂದ ಚಾಕು ಇರಿತ!

ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,  ಪೊಲೀಸರಿಂದ ಘಟನಾ ಸ್ಥಳದ ಪರಿಶೀಲನೆ ನಡೆದಿದೆ. ಕೊಲೆ ಆರೋಪಿ ಅಯ್ಯಪ್ಪನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಅಯ್ಯಪ್ಪ- ನಾಗರತ್ನ ಅವರ ಮಕ್ಕಳೀಗ ಅನಾಥರಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!