
ಬೆಂಗಳೂರು(ಸೆ.23): ಶೀಲ ಶಂಕಿಸಿ ತನ್ನ ಪತ್ನಿಯ ಕುತ್ತಿಗೆ ಕೊಯ್ದು ಕೊಂದು(Murder) ರಿಯಲ್ ಎಸ್ಟೇಟ್ ಏಜೆಂಟ್ವೊಬ್ಬ ಪರಾರಿಯಾಗಿರುವ ಘಟನೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೆಲ್ತ್ ಲೇಔಟ್ನಲ್ಲಿ ಬುಧವಾರ ನಡೆದಿದೆ.
ಹೆಲ್ತ್ ಲೇಔಟ್ ನಿವಾಸಿ ರೂಪಾ (34) ಕೊಲೆಯಾದ ದುರ್ದೈವಿ. ಈ ಕೃತ್ಯ ಎಸಗಿ ತಪ್ಪಿಸಿಕೊಂಡಿರುವ ಮೃತಳ ಪತಿ ಕಾಂತರಾಜು ಪತ್ತೆಗೆ ಪೊಲೀಸರು(Police) ಹುಡುಕಾಟ ನಡೆಸಿದ್ದಾರೆ. ಕೌಟುಂಬಿಕ ವಿಚಾರವಾಗಿ ಸಂಜೆ ದಂಪತಿ ಮಧ್ಯೆ ಜಗಳವಾಗಿದೆ. ಈ ಹಂತದಲ್ಲಿ ಕೆರಳಿದ ಆತ, ಪತ್ನಿಯ ಕತ್ತು ಕೊಯ್ದು ಪರಾರಿಯಾಗಿದ್ದಾನೆ. ಚೀರಾಟ ಶಬ್ಧ ಕೇಳಿ ನೆರೆಹೊರೆಯವರು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
ಬೆಳಗಾವಿ ಕೊಳವೆಬಾವಿ ದುರಂತಕ್ಕೆ ಟ್ವಿಸ್ಟ್: ಮಗನನ್ನೇ ಕೊಂದು ಬೋರ್ವೆಲ್ಗೆ ಎಸೆದ ಪಾಪಿ ತಂದೆ
ಹತ್ತು ವರ್ಷಗಳ ಹಿಂದೆ ರೂಪಾ ಹಾಗೂ ಕಾಂತರಾಜು ವಿವಾಹವಾಗಿದ್ದು, ಈ ದಂಪತಿಗೆ ಗಂಡು ಮಗುವಿದೆ. ಕೆಲ ದಿನಗಳಿಂದ ಪತ್ನಿ ನಡವಳಿಕೆ ಮೇಲೆ ಗುಮಾನಿಗೊಂಡಿದ್ದ ಕಾಂತರಾಜು, ಇದೇ ವಿಚಾರವಾಗಿ ಸದಾ ಮನೆಯಲ್ಲಿ ಗಲಾಟೆ ಮಾಡುತ್ತಿದ್ದ. ಅಂತೆಯೇ ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಸಹ ಸತಿ-ಪತಿ ಮಧ್ಯೆ ಉಂಟಾದ ಜಗಳವು ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ