ಹುಬ್ಬಳ್ಳಿ: ಕೌಟುಂಬಿಕ ಕಲಹ, ಹೆಂಡತಿಯನ್ನೇ ಕೊಂದ ಪಾಪಿ ಗಂಡ

Suvarna News   | Asianet News
Published : Mar 15, 2021, 02:20 PM ISTUpdated : Mar 15, 2021, 02:21 PM IST
ಹುಬ್ಬಳ್ಳಿ: ಕೌಟುಂಬಿಕ ಕಲಹ, ಹೆಂಡತಿಯನ್ನೇ ಕೊಂದ ಪಾಪಿ ಗಂಡ

ಸಾರಾಂಶ

ನೇಣು ಬಿಗಿದು ಹೆಂಡತಿ ಕೊಲೆ ಮಾಡಿದ ಗಂಡ| ಹುಬ್ಬಳ್ಳಿಯ ಹನುಮಂತ ನಗರದಲ್ಲಿ ನಡೆದ ಘಟನೆ| ಆರೋಪಿಯನ್ನ ವಶಕ್ಕೆ ಪಡೆದ ಪೊಲೀಸರು| ಈ ಸಂಬಂಧ ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು| 

ಹುಬ್ಬಳ್ಳಿ(ಮಾ.15): ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡ ತನ್ನ ಪತ್ನಿಯನ್ನೇ ನೇಣು ಬಿಗಿದು ಕೊಲೆ ಮಾಡಿದ ಘಟನೆ ಹನುಮಂತ ನಗರದಲ್ಲಿ ಇಂದು(ಸೋಮವಾರ) ನಡೆದಿದೆ. ಪಶ್ಚಿಮ ಬಂಗಾಳದ ಕೋಲ್ಕತ್ತಾ ಮೂಲದ ರೇಣುಕಾ(32) ಕೊಲೆಯಾದ ಮಹಿಳೆಯಾಗಿದ್ದಾಳೆ.

ಮಹದೇವಪ್ಪ ತನ್ನ ಹೆಂಡತಿಯನ್ನೇ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಮಹದೇವಪ್ಪ ನಗರದಲ್ಲಿ ಕಾರು ಚಾಲನೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಎಂದು ತಿಳಿದು ಬಂದಿದೆ. ಪದೇ ಪದೆ ಇವರಿಬ್ಬರ ಮಧ್ಯೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎಂದು ಹೇಳಲಾಗುತ್ತಿದೆ. ಇಂದೂ ಕೂಡ ಸತಿ- ಪತಿ ಮಧ್ಯೆ ಕಲಹ ನಡೆದಿದೆ. ಆದರೆ, ಕೋಪಗೊಂಡ ಮಹದೇವಪ್ಪ ನೇಣು ಬಿಗಿದು ರೇಣುಕಾಳನ್ನ ಹತ್ಯೆ ಮಾಡಿದ್ದಾನೆ.

ಬಳ್ಳಾರಿ: ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪೊಲೀಸ್‌ ಪೇದೆ

ಘಟನಾ ಸ್ಥಳಕ್ಕೆ ವಿದ್ಯಾನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಂಡತಿಯನ್ನ ಕೊಲೆ ಮಾಡಿದ  ಮಹದೇವಪ್ಪನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

The Devil Movie: ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ Darshan ಮೆಸೇಜ್
ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು