6 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಗಂಡ ಮಂಗಳಮುಖಿಯಾಗಿ ಪತ್ತೆ; ಸುಳಿವು ಕೊಟ್ಟ ಬಿಗ್‌ಬಾಸ್, ಪತಿ ವೇಷ ಕಂಡು ಪತ್ನಿ ಮೂರ್ಛೆ!

Published : Feb 01, 2024, 08:24 AM ISTUpdated : Feb 01, 2024, 08:41 AM IST
6 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಗಂಡ ಮಂಗಳಮುಖಿಯಾಗಿ ಪತ್ತೆ; ಸುಳಿವು ಕೊಟ್ಟ ಬಿಗ್‌ಬಾಸ್, ಪತಿ ವೇಷ ಕಂಡು ಪತ್ನಿ ಮೂರ್ಛೆ!

ಸಾರಾಂಶ

ನಾಪತ್ತೆಯಾಗಿದ್ದ ವಿವಾಹಿತ ವ್ಯಕ್ತಿಯೊಬ್ಬ ಲಿಂಗ ಬದಲಾವಣೆ ಮಾಡಿಕೊಂಡು ಪತ್ತೆಯಾದ ಘಟನೆ ರಾಮನಗರದಲ್ಲಿ ವರದಿಯಾಗಿದೆ.

ರಾಮನಗರ (ಫೆ.1): ನಾಪತ್ತೆಯಾಗಿದ್ದ ವಿವಾಹಿತ ವ್ಯಕ್ತಿಯೊಬ್ಬ ಲಿಂಗ ಬದಲಾವಣೆ ಮಾಡಿಕೊಂಡು ಪತ್ತೆಯಾದ ಘಟನೆ ರಾಮನಗರದಲ್ಲಿ ವರದಿಯಾಗಿದೆ. 2017ರಲ್ಲಿ ಮನೆ ಬಿಟ್ಟು ಹೋಗಿದ್ದ ಗಂಡ, ಇದೀಗ ಲಿಂಗ ಪರಿವರ್ತನೆ ಮಾಡಿಕೊಂಡಿರುವುದನ್ನು ಕಂಡ ಕುಟುಂಬಸ್ಥರು ಆಘಾತಗೊಂಡಿದ್ದು, ಗಂಡನನ್ನು ಆ ರೂಪದಲ್ಲಿ ಕಂಡ ಹೆಂಡತಿ ಆಘಾತಕ್ಕೀಡಾಗಿದ್ದಾರೆ. ಮೂಲಗಳ ಪ್ರಕಾರ ಚಿಕನ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಲಕ್ಷ್ಮಣರಾವ್ ಎಂಬುವರು 2015 ರಲ್ಲಿ ಮದುವೆಯಾಗಿ ಪತ್ನಿಯೊಂದಿಗೆ ರಾಮನಗರಲ್ಲಿ ನೆಲೆಸಿದ್ದರು. ದಂಪತಿಗೆ ಇಬ್ಬರು ಗಂಡು ಮಕ್ಕಳು ಕೂಡ ಇದ್ದಾರೆ. ಮದುವೆ ಆದ ಎರಡೇ ವರ್ಷಕ್ಕೆ ಅಂದರೆ 2017ರಲ್ಲಿ ಲಕ್ಷ್ಮಣ್ ಸಾಲದ ವಿಚಾರಕ್ಕೆ ಜಿಗುಪ್ಸೆಗೊಂಡು ಮನೆಯಿಂದ ನಾಪತ್ತೆಯಾಗಿದ್ದ. ಗಂಡನ ಬಗ್ಗೆ ಯಾವುದೇ ಸುಳಿವು ಸಿಗದ ಕಾರಣ ಪತ್ನಿ ಐಜೂರು ಪೊಲೀಸ್ ಠಾಣೆಗೆ ಪತ್ನಿ ದೂರು ನೀಡಿದ್ದರು.

ಆದರೆ ಆತನ ಬಗ್ಗೆ ಯಾವುದೇ ಸುಳಿವು ದೊರೆತಿರಲಿಲ್ಲ. ಆದರೆ ಆತನ ಬಗ್ಗೆ ಸುಳಿವು ನೀಡಿದ್ದು ಮಾತ್ರ ಒಂದು ರಿಯಾಲಿಟೋ ಷೋ ಕಾರ್ಯಕ್ರಮ..

ಸುಳಿವು ಕೊಟ್ಟ 'ಬಿಗ್ ಬಾಸ್'

ಬರೊಬ್ಬರಿ ಆರು ವರ್ಷಗಳ ಬಳಿಕ ಇದೀಗ ಲಕ್ಷ್ಮಣ್ ರಾವ್ ಸುಳಿವು ಪತ್ತೆಯಾಗಿದೆ. ಆದರೆ, ಸುಳಿವು ನೀಡಿದ್ದು ಮಾತ್ರ ಕನ್ನಡದ ರಿಯಾಲಿಟಿ ಷೋ ಬಿಗ್ ಬಾಸ್... ಹೌದು.. ಇತ್ತೀಚೆಗೆ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಸ್ಪರ್ಧಿ ನೀತು ವನಜಾಕ್ಷಿ ಮೈಸೂರಿಗೆ ಆಗಮಿಸಿದ್ದರು. ಮೈಸೂರಿನಲ್ಲಿ ತೃತೀಯ ಲಿಂಗಿಗಳು ಅವರನ್ನು ಸ್ವಾಗತಕ್ಕೆ ತೆರಳಿ ಸನ್ಮಾನಿಸಿದ್ದರು. ಈ ವೇಳೆ ತೃತೀಯ ಲಿಂಗಿ ರಶ್ಮಿಕಾ ಮಾಡಿದ್ದ ರೀಲ್ಸ್‌ನಲ್ಲಿ ಲಕ್ಷ್ಮಣ್ ಹೆಣ್ಣಾಗಿ ಕಾಣಿಸಿಕೊಂಡಿದ್ದರು. ಈ ವಿಡಿಯೋ ವ್ಯಾಪಕ ವೈರಲ್ ಆಗಿತ್ತು.

ತೃತೀಯ ಲಿಂಗಿಗಳಿಗೂ ಬದುಕಲು ಅವಕಾಶ ಕೊಡಿ: ಮಂಜಮ್ಮ ಜೋಗತಿ ಮನವಿ

ವೈರಲ್ ಆಗಿದ್ದ ರೀಲ್ಸ್‌ನಲ್ಲಿ ಲಕ್ಷ್ಮಣ್ ಮುಖದ ಸ್ಪಷ್ಟ ಹೋಲಿಕೆ ಇತ್ತು. ಹೀಗಾಗಿ ಕುಟುಂಬಸ್ಥರಿಗೂ ಲಕ್ಷ್ಮಣ್ ಇರಬಹುದು ಎಂಬ ಅನುಮಾನ ಮೂಡಿತ್ತು. ತೃತೀಯ ಲಿಂಗಿಗಳ ಸಾಮಾಜಿಕ ಹೋರಾಟಗಾರ್ತಿ ರಶ್ಮಿಕಾ ಹೆಸರಿನ ರೀಲ್ಸ್ ಪ್ರೊಫೈಲ್ ಪರಿಶೀಲಿಸಿದಾಗ ಐಜೂರು ಪೊಲೀಸರು ಲಕ್ಷ್ಮಣ್ ರಾವ್ ವಿಚಾರ ಪ್ರಸ್ತಾಪಿಸಿದ್ದಾರೆ. ಹಿನ್ನೆಲೆ ಗೊತ್ತಿಲ್ಲವಾದರೂ ವಿಳಾಸ ಕೊಡುವುದಾಗಿ ರಶ್ಮಿಕಾ ಹೇಳಿದ್ದಾರೆ. ವಿಳಾಸ ಅನುಸರಿಸಿ ತೆರಳಿದ್ದ ಪೊಲೀಸರಿಗೆ ಶಾಕ್ ಎದುರಾಗಿದ್ದು, ಪೊಲೀಸರ ಬಳಿ ಇದ್ದ ಫೋಟೋ ಗೂ ಎದುರಿಗಿದ್ದ ಹೆಣ್ಣಿಗೂ ಅಜಾಗಜ ವ್ಯತ್ಯಾಸವಿತ್ತು. ಮುಖ ಮಾತ್ರ ಪೂರ್ಣ ಹೋಲಿಕೆಯಾಗುತ್ತಿತ್ತು.

ಪೊಲೀಸರು ನೀವು ಲಕ್ಷ್ಮಣ್ ಅಲ್ಲವೇ ಎಂದು ಕೇಳಿದಾಗ, ನಾನು ಲಕ್ಷ್ಮಣ್ ರಾವ್ ಅಲ್ಲ, ನಾನು ವಿಜಯಲಕ್ಷ್ಮೀ ಎಂದು ಉತ್ತರಿಸಿದ್ದಾರೆ. ಎಷ್ಟೇ ಪ್ರಯತ್ನಿಸಿದರೂ ತಾನು ವಿಜಯಲಕ್ಷ್ಮೀ ಎಂದು ಲಕ್ಷ್ಮಣ್ ಪಟ್ಟು ಹಿಡಿದಿದ್ದು, ಪೊಲೀಸರೂ ಒಂದು ಹಂತದಲ್ಲಿ ಬೇರೆಯೇ ಅಭಿಪ್ರಾಯಕ್ಕೆ ಬಂದಿದ್ದಾರೆ. ಲಕ್ಷ್ಮಣ್ ನಿಮ್ಮ ಹಾಗೆಯೇ ಕಾಣಿಸಿದ ಕಾರಣ ವಿಚಾರಿಸಲು ಬಂದೆವು. ನೀವು ವಾಪಾಸ್ ಹೋಗಿ ಎಂದು ಪೊಲೀಸರು ಹೇಳಿದ್ದಾರೆ. ವಾಪಾಸ್ ಹೋಗೊ ವೇಳೆ, ಜೋರಾಗಿ ಲಕ್ಷ್ಮಣ್ ಎಂದು ಇನ್ಸ್ ಪೆಕ್ಟರ್ ಕೂಗಿದ್ದಾರೆ. ಕೂಡಲೇ ಹಾಂ… ಎಂಬ ಪ್ರತ್ಯುತ್ತರ ವಿಜಯಲಕ್ಷ್ಮೀ ಬಾಯಿಯಿಂದ ಬಂದಿದೆ!

ಪತಿಯ ವೇಷ ನೋಡಿ ಮೂರ್ಛೆ ಹೋದ ಪತ್ನಿ

ಪೊಲೀಸರಿಗೆ ಎಲ್ಲವೂ ಖಾತ್ರಿಯಾಗಿ ಐಜೂರು ಠಾಣೆಗೆ ಕರೆ ತಂದು ವಿಚಾರಣೆ ನಡೆಸಿದ್ದಾರೆ. 2017ರಲ್ಲಿ ರಾಮನಗರ ಬಿಟ್ಟು ಹೋಗಿದ್ದ ಲಕ್ಷ್ಮಣ್ ಲಿಂಗ ಪರಿವರ್ತನೆ ಮಾಡಿಸಿಕೊಂಡಿರುವುದು ತಿಳಿದುಬಂದಿದೆ. ಆತನನ್ನು ಕಂಡು ತನಿಖೆ ನಡೆಸುತ್ತಿದ್ದ ಪೊಲೀಸರೇ ಶಾಕ್‌ ಆಗಿದ್ದಾರೆ. ಬಳಿಕ ಕುಟುಂಬಸ್ಥರನ್ನು ಪೊಲೀಸರು ಠಾಣೆಗೆ ಕರೆಸಿದ್ದಾರೆ. ಠಾಣೆಗೆ ಆಗಮಿಸಿದಾಗ ಗಂಡ ಹೆಣ್ಣಾಗಿ ಪರಿವರ್ತನೆ ಆಗಿದ್ದನ್ನು ಕಂಡು ಪತ್ನಿ ಮೂರ್ಛೆ ಹೋಗಿದ್ದಾರೆ. ಇನ್ನು ತಂದೆಯ ಅವತಾರ ಕಂಡ ಪುಟ್ಟ ಮಕ್ಕಳು ಏನು ನಡೆಯುತ್ತಿದೆ ಎನ್ನುವುದನ್ನೂ ತಿಳಿಯದಂತಾಗಿದ್ದಾರೆ. ಅದೇ ರೀತಿ ಅಳಿಯನ ಅವತಾರ ಕಂಡು ಮಾವ ಪೇಚಾಡಿ ಮಗಳ ಬಾಳು ಹಾಳಾಯಿತು ಎಂದು ಕಣ್ಣೀರಿಟ್ಟಿದ್ದಾರೆ.

ಮಂಗಳಮುಖಿಯರಿಗೂ ಪ್ರತಿ ತಿಂಗಳು ಋತುಸ್ರಾವ ಆಗುತ್ತಾ?

‘ನಿನಗೆ ಹೆಂಡತಿ ಮಕ್ಕಳು ಬೇಡವೇ” ಎಂದು ಪ್ರಶ್ನಿಸಿದಾಗ, ‘ನನಗೆ ನನ್ನ ತೃತೀಯ ಲಿಂಗಿಗಳ ಕುಟುಂಬವೇ ಇಷ್ಟ. ಹೆಂಡತಿ ಮಕ್ಕಳು ಬೇಡ, ನಿಮ್ಮ ತಂಟೆಗೆ ಬರುವುದಿಲ್ಲ. ನನ್ನನ್ನು ಬಿಟ್ಟು ಬಿಡಿ’ ಎಂದು ಬೇಡಿಕೊಂಡಿದ್ದಾನೆ. ಪೊಲೀಸರು ಮುಚ್ಚಳಿಕೆ ಪತ್ರ ಬರೆಸಿಕೊಂಡು ನಾಪತ್ತೆ ಪ್ರಕರಣ ಇತ್ಯರ್ಥ ಗೊಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು: ಬ್ಯಾನರ್ ಗಲಾಟೆ, ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ, ಬಜರಂಗದಳ ಕಾರ್ಯಕರ್ತರ ಮೇಲೆ ಶಂಕೆ!
ಮಿರ್ಜಾ ಇಸ್ಮಾಯಿಲ್ ಮೊಮ್ಮಗಳ ಹಂತಕನಿಗೆ ಜೈಲೇ ಗತಿ, ಏನಿದು ಪ್ರಕರಣ?