
ಬೆಳಗಾವಿ (ಡಿ.3) : :ನೆರೆಯ ಗೋವಾ ರಾಜ್ಯದ ಮದ್ಯವನ್ನು ಅಕ್ರಮವಾಗಿ ಸಿನಿಮೀಯ ರೀತಿಯಲ್ಲಿ ಜಿಲ್ಲೆಯಲ್ಲಿ ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ಶನಿವಾರ ಅಬಕಾರಿ ಪೊಲೀಸರು ದಾಳಿ ನಡೆಸಿ ಇಬ್ಬರು ಬಂಧಿಸಿ, ₹ 5 ಲಕ್ಷ ಮೌಲ್ಯದ ಗೋವಾ ಮದ್ಯ ವಶಪಡಿಸಿಕೊಂಡಿದ್ದಾರೆ.
ಬೆಳಗಾವಿ ತಾಲೂಕಿನ ಬಹದ್ದೂರವಾಡಿಯ ಶಿವಾಜಿ ಗಲ್ಲಿಯ ನಾಗೇಶ ನಾರಾಯಣ ಪಾಟೀಲ(34), ಸಾಹಿಲ್ ಲಕ್ಷ್ಮಣ ಪಾಟೀಲ(19) ಬಂಧಿತ ಆರೋಪಿಗಳು.
ಬೆಳಗಾವಿ: ಪುಷ್ಪಾ ಸಿನಿಮಾ ಸ್ಟೈಲಲ್ಲಿ ಸಾಗಿಸುತ್ತಿದ್ದ ಅಕ್ರಮ ಮದ್ಯ ವಶ..!
ಶನಿವಾರ ಬೆಳ್ಳಂ ಬೆಳಗ್ಗೆ ಬೆಳಗಾವಿ ತಾಲೂಕಿನ ಬಿಜಗರ್ಣಿ ಗ್ರಾಮದಿಂದ ಕವಳೆವಾಡಿ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ರಸ್ತೆಗಾವಲು ಹಾಗೂ ವಾಹನ ತಪಾಸಣೆ ಮಾಡುತ್ತಿರುವಾಗ ಅಶೋಕ ಲೇ ಲ್ಯಾಂಡ ಗೂಡ್ಸ್ ವಾಹನದ ಹಿಂದುಗಡೆ ಪಾರ್ಟಿಷನ್ ಮಾಡಿ 9 ವಿವಿಧ ಕಂಪನಿಯ 760 ಬಾಟಲಿಗಳಲ್ಲಿ ಒಟ್ಟು 239.400 ಲೀ ಗೋವಾ ಮದ್ಯವನ್ನು ಮುಚ್ಚಿಟ್ಟುಕೊಂಡು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿರುವಾಗ ಪತ್ತೆಯಾಗಿದೆ. ₹ 5 ಲಕ್ಷ ಮೌಲ್ಯದ ಗೋವಾ ಮದ್ಯ, ₹ 3.30 ಲಕ್ಷ ಕಿಮ್ಮತ್ತಿನ ವಾಹನ ಸೇರಿದಂತೆ ಒಟ್ಟು ₹ 8.50 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಅಬಕಾರಿ ಇಲಾಖೆಯಿಂದ ಭಾರೀ ಮದ್ಯಸಾರ ಬೇಟೆ; ಶಾಸಕ ಸೈಲ್ಗೆ ಕಂಟಕವಾಯ್ತಾ ಪ್ರಕರಣದ ಮಧ್ಯ ಪ್ರವೇಶ?
ಅಬಕಾರಿ ಅಪರ ಆಯುಕ್ತ ಡಾ.ವೈ.ಮಂಜುನಾಥ, ಜಂಟಿ ಆಯುಕ್ತ ಫಿರೋಜಖಾನ್ ಕಿಲ್ಲೇದಾರ, ಉಪ ಆಯುಕ್ತ ವನಜಾಕ್ಷಿ ಎಂ ಹಾಗೂ ಅಧಿಕ್ಷಕ ವಿಜಯಕುಮಾರ ಹಿರೇಮಠ ಮಾರ್ಗದರ್ಶನದಲ್ಲಿ ಉಪಅಧಿಕ್ಷಕ ರವಿ ಎಂ .ಮುರಗೋಡ ನೇತೃತ್ವದ ಮಂಜುನಾಥ ಗಲಗಲಿ, ಸುನೀಲ ಪಾಟೀಲ, ಮಹಾದೇವಪ್ಪ ಕಟಗೆನ್ನವರ ತಂಡ ಕಾರ್ಯಚರಣೆ ನಡೆಸಿ ಅಕ್ರಮ ಮದ್ಯ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ