ರಾಯಚೂರು: ಅಕ್ರಮ ಸಂಬಂಧಕ್ಕೆ ಅಡ್ಡಿ; ಮದ್ಯದಲ್ಲಿ ನಿದ್ರೆ ಮಾತ್ರೆ ಬೆರೆಸಿ ಪತಿಯ ಹತ್ಯೆ!

By Ravi JanekalFirst Published Mar 21, 2024, 8:21 PM IST
Highlights

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನೇ ಹತ್ಯೆ ಮಾಡಿದ ಘಟನೆ ರಾಯಚೂರು ಜಿಲ್ಲೆಯ ಯಾಪಲದಿನ್ನಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂಗನೋಡಿ ತಾಂಡಾದಲ್ಲಿ ನಡೆದಿದೆ.

ರಾಯಚೂರು (ಮಾ.21): ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನೇ ಹತ್ಯೆ ಮಾಡಿದ ಘಟನೆ ರಾಯಚೂರು ಜಿಲ್ಲೆಯ ಯಾಪಲದಿನ್ನಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂಗನೋಡಿ ತಾಂಡಾದಲ್ಲಿ ನಡೆದಿದೆ.

ರಾಜು ನಾಯ್ಕ್ (38) ಕೊಲೆಯಾದ ದುರ್ದೈವಿ. ಸ್ನೇಹಾ ಕೊಲೆ ಮಾಡಿದ ಪತ್ನಿ. ರಾಯಚೂರು ತಾಲೂಕು ಪಂಚಾಯ್ತಿ ಮಾಜಿ ಸದಸ್ಯನಾಗಿದ್ದ ರಾಜು ನಾಯ್ಕ್, ಹಾಲಿ ಗ್ರಾಮ ಪಂಚಾಯ್ತಿ ಸದಸ್ಯನಾಗಿ ಸೇವೆ ಸಲ್ಲಿಸುತ್ತಿದ್ದ. ಇನ್ನು ಕೊಲೆ ಮಾಡಿರುವ ರಾಜು ನಾಯ್ಕ್ ಪತ್ನಿ ಪರಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು ಎಂಬ ಆರೋಪ ಕೇಳಿ ಬಂದಿದೆ. ಗ್ರಾಮದ ದೇವಸ್ಥಾನದ ಗೋಪುರ ಕಟ್ಟಲು ಬಂದಿದ್ದ ಮಹಾರಾಷ್ಟ್ರ ಮೂಲದ ವ್ಯಕ್ತಿಯೊಂದಿಗೆ ಪತ್ನಿಯ ಪರಿಚಯವಾಗಿ ಅನೈತಿಕ ಸಂಬಂಧ ತಿರುಗಿದೆ. ಇದು ಗಂಡ ರಾಜು ನಾಯ್ಕ್ ಗೊತ್ತಾದ ಬಳಿಕ ಇಬ್ಬರ ಮಧ್ಯೆ ಆಗಾಗ ಗಲಾಟೆಯಾಗಿದೆ. ಆದರೂ ಪತ್ನಿಯ ಅಕ್ರಮ ಸಂಬಂಧ ಮುಂದುವರಿದಿದೆ. ಅಲ್ಲದೇ ಅಕ್ರಮ ಸಂಬಂಧಕ್ಕೆ ಗಂಡ ಅಡ್ಡಿಯಾಗಿದ್ದಕ್ಕೆ ರಾತ್ರಿ ವೇಳೆ ಮದ್ಯದಲ್ಲಿ ನಿದ್ರೆ ಮಾತ್ರೆ ಬೆರೆಸಿ ಬಳಿಕ ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. 

ವಿದ್ಯಾರ್ಥಿನಿಯರಿಗೆ ಮರ್ಮಾಂಗದ ಫೋಟೊ ಕಳಿಸಿ ಮಂಚಕ್ಕೆ ಕರೆದ ಆರೋಪ; ಪಿಎಸ್‌ಐ ವಿರುದ್ಧ ದೂರು

ಸದ್ಯ ಘಟನೆ ಸಂಬಂಧ ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ಮುಂದುವರಿಸಿರುವ ಪೊಲೀಸರು.

click me!