ಹುಣಸೂರು: ಮನೆ ಸಾಲ ತೀರಿಸಲು ಆಗದೆ ಸೈನಿಕ ನೇಣುಬಿಗಿದು ದುರಂತ ಸಾವು

Ravi Janekal   | Kannada Prabha
Published : Oct 21, 2025, 12:32 PM IST
hunusuru soldier death due to home loan debt

ಸಾರಾಂಶ

hunusuru soldier death due to home loan debt ಹುಣಸೂರಿನಲ್ಲಿ, ಮನೆ ಕಟ್ಟಲು ಮಾಡಿದ ಸಾಲ ತೀರಿಸಲಾಗದೆ ಭಾರತೀಯ ಸೇನೆಯ ಯೋಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಪ್ಯಾರಾಚೂಟ್‌ ರೆಜಿಮೆಂಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರ್‌, ಆರ್ಥಿಕ ಸಂಕಷ್ಟದಿಂದ ಈ ದುರಂತ ನಿರ್ಧಾರ.

ಹುಣಸೂರು (ಅ.21): ಮನೆ ಕಟ್ಟಲು ಮಾಡಿಕೊಂಡಿದ್ದ ಸಾಲದ ತೀರಿಸಲಾಗದೆ ಭಾರತೀಯ ಭೂಸೇನೆಯ ಸೈನಿಕರೊಬ್ಬರು ಆತ್ಮ೧ಹತ್ಯೆ ಮಾಡಿಕೊಂಡ ದಾರುಣ ಘಟನೆ ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ನಡೆದಿದೆ.

ಕನಸಿನ ಮನೆ ನಿರ್ಮಾಣಕ್ಕೆ ಮೈತುಂಬಾ ಸಾಲ:

ಮೃತರನ್ನು ಎಂ. ಚಂದ್ರಶೇಖರ್‌ (35) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ಪ್ಯಾರಾಚೂಟ್‌ ರೆಜಿಮೆಂಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಎರಡು ವರ್ಷಗಳ ಹಿಂದೆ ಹುಣಸೂರಿನ ಹೊಸ ಬಡಾವಣೆಯಲ್ಲಿ ಚಂದ್ರಶೇಖರ್‌ ಅವರು ಕನಸಿನ ಮನೆ ನಿರ್ಮಿಸಿದ್ದರು. ಈ ಯೋಜನೆಗಾಗಿ ಬ್ಯಾಂಕ್‌ ಮತ್ತು ಸ್ನೇಹಿತರಿಂದ ಸಾಲ ಪಡೆದಿದ್ದರು. ಆದರೆ, ಸಾಲದ ಕಂತುಗಳನ್ನು ತೀರಿಸಲು ಸಾಧ್ಯವಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಈ ಒತ್ತಡದಿಂದ ಮಾನಸಿಕವಾಗಿ ಕುಗ್ಗಿದ ಅವರು, ಸೋಮವಾರ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಜೀವನವನ್ನೇ ಕೊನೆಗೊಳಿಸಿದ್ದಾರೆ.

ಆರ್ಥಿಕ ಒತ್ತಡಕ್ಕೆ ಕೌನ್ಸೆಲಿಂಗ್ ಅಗತ್ಯ:

ಈ ಘಟನೆಯಿಂದ ಕುಟುಂಬಸ್ಥರು ಮತ್ತು ಸ್ಥಳೀಯರಲ್ಲಿ ಆಘಾತ ಮೂಡಿಸಿದೆ. ಸೈನಿಕರೊಬ್ಬರ ಈ ದುರಂತದ ಅಂತ್ಯವು ಸಾಲದ ಒತ್ತಡದ ಗಂಭೀರತೆಯನ್ನು ಎತ್ತಿ ತೋರಿಸಿದೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಘಟನೆಯ ತನಿಖೆಯನ್ನು ಆರಂಭಿಸಿದ್ದಾರೆ. ಈ ಘಟನೆಯು ಆರ್ಥಿಕ ಸಂಕಷ್ಟದಿಂದ ಬಳಲುವವರಿಗೆ ಸೂಕ್ತ ಕೌನ್ಸೆಲಿಂಗ್‌ ಮತ್ತು ಬೆಂಬಲದ ಅಗತ್ಯವನ್ನು ಈ ಘಟನೆ ಎಚ್ಚರಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!