ಅಮೆರಿಕದಲ್ಲಿ ಭಾರತೀಯ ಕುಟುಂಬದ ನಾಲ್ವರ ಶವ ಪತ್ತೆ: ನಿಗೂಢ ಸಾವಿನ ಸುತ್ತ ಅನುಮಾನದ ಹುತ್ತ!

Published : Oct 06, 2023, 05:16 PM ISTUpdated : Oct 06, 2023, 05:17 PM IST
ಅಮೆರಿಕದಲ್ಲಿ ಭಾರತೀಯ ಕುಟುಂಬದ ನಾಲ್ವರ ಶವ ಪತ್ತೆ: ನಿಗೂಢ ಸಾವಿನ ಸುತ್ತ ಅನುಮಾನದ ಹುತ್ತ!

ಸಾರಾಂಶ

ಭಾರತೀಯ ಮೂಲದ ನಾಲ್ವರ ಕುಟುಂಬ ಅಮೆರಿಕದ ನ್ಯೂಜೆರ್ಸಿಯಲ್ಲಿ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಈ ಬಗ್ಗೆ ಅವರ ಕುಟುಂಬ ಸದಸ್ಯರು ಅನುಮಾನ ವ್ಯಕ್ತಪಡಿಸಿದ್ದಾರೆ.  

ವಾಷಿಂಗ್ಟನ್‌ (ಅಕ್ಟೋಬರ್ 6, 2023): ಅಮೆರಿಕದ ನ್ಯೂಜೆರ್ಸಿಯಲ್ಲಿ ಭಾರತೀಯ ಮೂಲದ ನಾಲ್ವರ ಕುಟುಂಬ ಶವವಾಗಿ ಪತ್ತೆಯಾಗಿದ್ದು, ಈ ಸಾವಿನ ಪ್ರಕರಣಗಳು ನಿಗೂಢವಾಗಿದೆ. ಇನ್ನು, ಈ ಪ್ರಕರಣಗಳು ಕೊಲೆ - ಆತ್ಮಹತ್ಯೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವರ ಕುಟುಂಬದ ಯೋಗಕ್ಷೇಮದ ಬಗ್ಗೆ ಅನುಮಾನ ಮೂಡುತ್ತಿದೆ ಎಂದು ಪೊಲೀಸರಿಗೆ ದೂರು ನೀಡಿದ ಬಳಿಕ ಪೊಲೀಸರು ಅವರ ಮನೆಗೆ ಹೋಗಿ ನೋಡಿದ ಬಳಿಕ ಭಾರತೀಯ ಮೂಲದ ಕುಟುಂಬ ಶವವಾಗಿ ಪತ್ತೆಯಾಗಿರುವುದು ತಿಳಿದುಬಂದಿದೆ. ಪ್ಲೇನ್ಸ್‌ಬೊರೊದ ಪೊಲೀಸರು ಅಕ್ಟೋಬರ್ 4 ರಂದು ಸಂಜೆ ಅವರ ಮನೆಗೆ ಹೋದಾಗ ಅವರು ಸತ್ತಿರುವುದು ಕಂಡುಬಂದಿದೆ ಎಂದು ಕೌಂಟಿ ಪ್ರಾಸಿಕ್ಯೂಟರ್ ಯೊಲಾಂಡಾ ಸಿಕ್ಕೋನ್ ಹೇಳಿದ್ದಾರೆ.

ಇದನ್ನು ಓದಿ: ಏರ್‌ಪೋರ್ಟ್‌ನಲ್ಲಿ ವೇಗವಾಗಿ ಬಿಎಂಡಬ್ಲ್ಯೂ ಕಾರು ಚಾಲನೆ: ಸಿಐಎಸ್‌ಎಫ್ ಜವಾನನ ಹತ್ಯೆಗೈದ ಹದಿಹರೆಯದ ಯುವಕ

ಮೃತರನ್ನು 43 ವರ್ಷದ ತೇಜ್‌ ಪ್ರತಾಪ್‌ ಸಿಂಗ್, 42 ವರ್ಷದ ಸೋನಾಲ್ ಪರಿಹಾರ್ ಹಾಗೂ ದಂಪತಿಯ 10 ವರ್ಷದ ಮಗ ಮತ್ತು ಆರು ವರ್ಷದ ಮಗಳು ಸೇರಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ಗುರುತಿಸಿದ್ದಾರೆ. ಕುಟುಂಬವು ಹೇಗೆ ಮೃತಪಟ್ಟಿದೆ ಎಂದು ಸಿಕ್ಕೋನ್‌ ಹೇಳದಿದ್ದರೂ, ಶೂಟಿಂಗ್ ನಡೆದಿರೋದನ್ನು ಕೌಂಟಿ ಪ್ರಾಸಿಕ್ಯೂಟರ್ ಕಚೇರಿಯ ವಕ್ತಾರರು ತಳ್ಳಿಹಾಕಿದ್ದಾರೆ. 

"ಈ ದುರಂತವು ತನಿಖೆಯ ಹಂತದಲ್ಲಿದೆ ಮತ್ತು ಶವಪರೀಕ್ಷೆಗಳನ್ನು ನಡೆಸಲಾಗುತ್ತಿದೆ" ಎಂದು ಅವರು ಅಕ್ಟೋಬರ್ 5 ರಂದು ಹೇಳಿದ್ದಾರೆ. ಇನ್ನು, ಭಾರತೀಯ ಮೂಲದ ಕುಟುಂಬದ ನಿಗೂಢ ಸಾವಿನ ಬಗ್ಗೆ ಮಾತನಾಡಿದ ಪ್ಲೇನ್ಸ್‌ಬೊರೊ ಮೇಯರ್ ಪೀಟರ್ ಕ್ಯಾಂಟು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಈ ಸಂಬಂಧ ಪೋಸ್ಟ್‌ ಮಾಡಿದ್ದಾರೆ.  "ನಮ್ಮ ಸಮುದಾಯದಲ್ಲಿ ಏನಾಯಿತು ಎಂಬುದು ಗ್ರಹಿಕೆಗೆ ಮೀರಿದೆ" ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. "ಈ ದುರಂತ ಘಟನೆಯಿಂದ ನಾವು ದುಃಖಿತರಾಗಿದ್ದೇವೆ" ಎಂದೂ ಅವರು ಹೇಳಿದರು.

ಇದನ್ನೂ ಓದಿ: ಗೂಗಲ್‌ ಮ್ಯಾಪ್ ನಂಬ್ಕೊಂಡು ಹೋದ ಇಬ್ಬರು ನೀರುಪಾಲು: ಹುಟ್ಟುಹಬ್ಬದ ದಿನವೇ ಬಲಿಯಾದ ಯುವ ವೈದ್ಯ!

ತೇಜ್‌ ಪ್ರತಾಪ್‌ ಸಿಂಗ್ ತನ್ನ ಕುಟುಂಬವನ್ನು ಕೊಂದಿದ್ದು ಮತ್ತು ನಂತರ ಸ್ವತ: ತಾನೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಮೆರಿಕ ಬ್ರಾಡ್‌ಕಾಸ್ಟಿಂಗ್ ಚಾನೆಲ್ ವರದಿ ಮಾಡಿದೆ. ಅನಾಮಧೇಯ ಪೊಲೀಸರು ಈ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದೂ ಮಾಧ್ಯಮ ತಿಳಿಸಿದೆ. ಇನ್ನೊಂದೆಡೆ, ದಂಪತಿ ಖುಷಿಯಾಗೇ ಇದ್ದರು. ಈ ಹಿನ್ನೆಲೆ ಈ ರೀತಿ ಆಗಿರುವುದನ್ನು ನಂಬಲು ಸಾಧ್ಯವಿಲ್ಲ ಎಂದು ಮನೆಯ ಹೊರಗೆ ಜಮಾಯಿಸಿದ ಕುಟುಂಬ ಸದಸ್ಯರು ಮಾಧ್ಯಮಕ್ಕೆ ತಿಳಿಸಿದ್ದಾರೆ. 

ಇಬ್ಬರೂ ಮಾಹಿತಿ ತಂತ್ರಜ್ಞಾನ ಕ್ಷೇತ್ರ (ಐಟಿ)ಯಲ್ಲಿ ಕೆಲಸ ಮಾಡುತ್ತಿದ್ದು, ಅವರಲ್ಲಿ ಒಬ್ಬರು ಮಾನವ ಸಂಪನ್ಮೂಲ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 

ಇದನ್ನು ಓದಿ: ಮೋಸ್ಟ್‌ ವಾಂಟೆಡ್‌ ಪಟ್ಟಿಯಲ್ಲಿರೋ ಐಸಿಸ್‌ ಉಗ್ರ ಬಂಧನ: ದೆಹಲಿ ಪೊಲೀಸರ ಕಾರ್ಯಾಚರಣೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ