ದೇಶ, ದೇಶಕ್ಕಾಗಿ ಬಲಿದಾನ ಮಾಡಿದ ಸೈನಿಕರ ನಿಂದಿಸಿದ ಗದಗದ ಕ್ರಿಮಿ

Published : Jun 18, 2020, 07:45 PM ISTUpdated : Jun 18, 2020, 07:54 PM IST
ದೇಶ, ದೇಶಕ್ಕಾಗಿ ಬಲಿದಾನ ಮಾಡಿದ ಸೈನಿಕರ ನಿಂದಿಸಿದ ಗದಗದ ಕ್ರಿಮಿ

ಸಾರಾಂಶ

ಭಾರತ-ಚೀನಾ ಗಡಿಯಲ್ಲಿ  ಭಾರತದ 20 ಸೈನಿಕರು ಹುತಾತ್ಮ/  ಭಾರತೀಯ ಸೈನಿಕರ ಬಗ್ಗೆ ಅಶ್ಲೀಲವಾಗಿ ನಿಂದಸಿ ಪೋಸ್ಟ್/   ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರೋ ಪೋಸ್ಟ್ / ಗದಗ ಜಿಲ್ಲೆ ರೋಣ ಪಟ್ಟಣದ ಬಸವರಾಜ್ ಯಶ್ ಗೆ ಹುಡುಕಾಟ

ಗದಗ (ಜೂ. 18)  ದೇಶದ ಗಡಿಯಲ್ಲಿ ಸೈನಿಕರು ಪ್ರಾಣ ಅರ್ಪಣೆ ಮಾಡುತ್ತಿದ್ದರೆ ಇಲ್ಲೊಬ್ಬ ಸೋಶಿಯಲ್ ಮೀಡಿಯಾದಲ್ಲಿ ದೇಶದ್ರೋಹಿ ಪೋಸ್ಟ್ ಹಾಕುತ್ತಾನೆ. ಗದಗ ಜಿಲ್ಲೆಯ ವಿಕೃತ ವ್ಯಕ್ತಿ ಎನ್ನಲು ನೋವಾಗುತ್ತಿದೆ.

ಭಾರತೀಯ ಸೈನಿಕರನ್ನು ನಿಂದಿಸಿ ಪೋಸ್ಟ್ ಬರೆದಿದ್ದ ಗದಗ ಜಿಲ್ಲೆ ರೋಣ ಪಟ್ಟಣದ ಬಸವರಾಜ ಯಶ್ ಎಂಬಾತನಿಗೆ ಹುಡುಕಾಟ ನಡೆದಿದೆ.  ರೋಣದ ಮುಲ್ಲಾನಭಾವಿ ಓಣಿಯಲ್ಲಿ‌ ಮೊಬೈಲ್ ಶಾಪ್ ಇಟ್ಟು ಕೊಂಡಿರುವ ಯುವಕ ಬಸವರಾಜ ಮೇಲೆ  ಕಲಂ -153, 505(1) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಟಿಕ್ ಟಾಕ್ ಸೇರಿ  52  ಅಪ್ಲಿಕೇಶನ್ ಬ್ಯಾನ್

ನಾಪತ್ತೆಯಾದ ದೇಶ ದ್ರೋಹಿ ಬಸವರಾಜ್ ಹುಡುಕಾಟವನ್ನು ರೋಣ ಪೊಲೀಸರು ನಡೆಸಿದ್ದಾರೆ. ಇಂಥವರಿಗೆ ಯಾವ ಶಿಕ್ಷೆ ನೀಡಬೇಕು ಎಂಬುದನ್ನು ಜನರೇ ತೀರ್ಮಾನ ಮಾಡಲಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿದೆ. 

ಕುತಂತ್ರಿ ಚೀನಾದೊಂದಿಗಿನ ಸಂಘರ್ಷದಲ್ಲಿ ಭಾರತದ 20  ಯೋಧರು ಬಲಿದಾನ ಮಾಡಿದ್ದರು. ಲಡಾಕ್ ಗಡಿಯಲ್ಲಿ ಆತಂಕದ ವಾತಾವರಣವಿದ್ದು ದೇಶದ ಒಳಗಿನಿಂದಿಲೇ ಇಂಥ ದೇಶದ್ರೋಹಿ ಪೋಸ್ಟ್ ಗಳು ಹರಿದುಬರುತ್ತಿರುವುದು ಮಾತ್ರ ದುರ್ದೈವ.


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!