
ಗಜೇಂದ್ರಗಡ(ಮಾ.21): ಪಟ್ಟಣದಿಂದ ಯಲಬುರ್ಗಾ ರಸ್ತೆಯ ಹೊಲವೊಂದರಲ್ಲಿ ನವಜಾತ ಶಿಶುವನ್ನು ಕೊಂದು ಎಸೆದು ಹೋಗಿರುವ ಅಮಾನುಷ ಘಟನೆ ಇಲ್ಲಿನ ಯಲಬುರ್ಗಾ ರಸ್ತೆಯ ಹೊಲವೊಂದರಲ್ಲಿ ಭಾನುವಾರ ಪತ್ತೆಯಾಗಿದೆ.
ಸ್ಥಳೀಯ ಕಿತ್ತೂರ ರಾಣಿ ಚೆನ್ನಮ್ಮ ವೃತ್ತದ ಕೂಗಳತೆಯ ದೂರದ ಯಲಬುರ್ಗಾ ರಸ್ತೆಗೆ ಹೊಂದಿಕೊಂಡಿರುವ ಹೊಲವೊಂದರಲ್ಲಿ ಎಸೆದು ಹೋಗಿದ್ದ ಹಸುಗೂಸಿನ ಮುಖದಲ್ಲಿ ಗಾಯ ಹಾಗೂ ಕುತ್ತಿಗೆ ಸುತ್ತ ಬಿಗಿಯಾಗಿ ಬಿಗಿದಿದ್ದ ಸೀರೆ ಕಂಡ ಸಾರ್ವಜನಿಕರು ದುಷ್ಕರ್ಮಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಚಿಂಚೋಳಿಯಲ್ಲಿ ನವಜಾತ ಶಿಶು ಪತ್ತೆ
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪಟ್ಟಣದ ಪಿಎಸ್ಐ ಗುರುಶಾಂತ ದಾಶ್ಯಾಳ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ