
ದಾವಣಗೆರೆ (ಜು.5): ವೈದ್ಯ ಮಾಡಿದ ಎಡವಟ್ಟಿನಿಂದ ಹೊರಪ್ರಪಂಚಕ್ಕೆ ಬರುವ ಮೊದಲೇ ನವಜಾತ ಶಿಶು ದುರ್ಮರಣಕ್ಕೀಡಾದ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನೆಡದಿದೆ.
ದಾವಣಗೆರೆ ಕೊಂಡಜ್ಜಿ ರಸ್ತೆ ಅರ್ಜುನ್ ಪತ್ನಿ ಅಮೃತಾ ಜೂ.27ರಂದು ಹೆರಿಗೆ ಮಾಡಿಸಲು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಅಮೃತಾಗೆ ಬಿಪಿ ಜಾಸ್ತಿಯಾಗಿ ಸೀಸೆರಿಯನ್ ಮಾಡಿ ಮಗು ತೆಗೆಯಬೇಕೆಂದು ವೈದ್ಯರು ಹೇಳಿದ್ದರಿಂದ ಸಿಸೇರಿಯನ್ ಗೆ ಒಪ್ಪಿದ್ದ ಕುಟುಂಬಸ್ಥರು. ಅಂತೆಯೇ ಸಿಸೇರಿಯನ್ ಮಾಡಿ ಮಗು ಹೊರತೆಗೆಯುವ ವೇಳೆ ತಾಯಿಯ ಹೊಟ್ಟೆಯೊಳಗಿದ್ದ ಮಗುವಿನ ರೆಕ್ಟಮ್(ಗುದದ್ವಾರಕ್ಕೆ)ಗೆ ಕತ್ತರಿ ಹಾಕಿದ ವೈದ್ಯ ನಿಜಾಮುದ್ದೀನ್. ಇದರಿಂದಾಗಿ ಶಿಶುವಿನ ರೆಕ್ಟಮ್ ಭಾಗಕ್ಕೆ ಹಾನಿಯಾಗಿ ಮಗುವಿನ ಸ್ಥಿತಿ ಚಿಂತಾಜನಕವಾಗಿತ್ತು. ಕೂಡಲೇ ಮಗುವನ್ನು ಬಾಪೂಜಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಎರಡು ದಿನಗಳ ಕಾಲ ಸತತ ಚಿಕಿತ್ಸೆ ನಡೆಸಿ ಮಗುವನ್ನ ಉಳಿಸಿಕೊಳ್ಳಲು ಪ್ರಯತ್ನ ನಡೆಸಲಾಯಿತಾದರೂ ಇಂದು ಚಿಕಿತ್ಸೆ ಫಲಿಸದೇ ಮಗು ಮೃತಪಟ್ಟಿದೆ.
ತುಮಕೂರು: ಜಮೀನು ವಿವಾದ ಎರಡು ಕುಟುಂಬಗಳ ನಡುವೆ ಮಾರಾಮಾರಿ
ಮಗುವಿಗೆ ವೈದ್ಯನೇ ಕಾರಣ:
ವೈದ್ಯನ ನಿರ್ಲಕ್ಷ್ಯವೇ ಮಗುವಿನ ಸಾವಿಗೆ ಕಾರಣ ಎಂದು ಪೊಷಕರು ಜಿಲ್ಲಾಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿ ವೈದ್ಯನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಸ್ತ್ರಚಿಕಿತ್ಸೆ ಮಾಡಿದ ದಾವಣಗೆರೆ(Davanagere) ಚಿಗಟೇರಿ ಜಿಲ್ಲಾಸ್ಪತ್ರೆ (chigateri hospital davangere)ವೈದ್ಯರಿಗೆ ನೋಟಿಸ್ ನೀಡಲಾಗಿದೆ. ಈ ಪ್ರಕರಣ ಸಂಬಂಧ ದಾವಣಗೆರೆ ಚಿಗಟೇರಿ ಜಿಲ್ಲಾಸ್ಪತ್ರೆ ಅಧೀಕ್ಷಕರಿಂದ ಜಿಲ್ಲಾಧಿಕಾರಿಗಳಿಗೆ ವರದಿ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ