ವಿಜಯಪುರ: ಮನೆಯ ಹೊಸ್ತಿಲು ಬಳಿ ನವಜಾತ ಶಿಶು ಇಟ್ಟು ದುರುಳರು ಪರಾರಿ..!

Published : Jun 22, 2024, 10:35 AM IST
ವಿಜಯಪುರ: ಮನೆಯ ಹೊಸ್ತಿಲು ಬಳಿ ನವಜಾತ ಶಿಶು ಇಟ್ಟು ದುರುಳರು ಪರಾರಿ..!

ಸಾರಾಂಶ

ರಾಮಕೃಷ್ಣ ಆಸ್ಪತ್ರೆಯ ಹಿಂಬದಿಯ ಬಿ.ಜಿ.ಪೊಲೀಸ್ ಪಾಟೀಲ ಎಂಬುವವರ ಮನೆಯ ಹೊಸ್ತಿಲಲ್ಲಿ ದುರುಳರು ನವಜಾತ ಶಿಶು ಇಟ್ಟು ಹೋಗಿದ್ದಾರೆ. ನಸುಕಿನ ಜಾವ ನವಜಾತ ಶಿಶು ಇಟ್ಟು ಪರಾರಿಯಾಗಿದ್ದಾರೆ.   

ವಿಜಯಪುರ(ಜೂ.22):  ನವಜಾತ ಶಿಶುವನ್ನು ಮನೆಯ ಹೊಸ್ತಿಲು ಬಳಿ ಎಸೆದು ದುಷ್ಟರು ಪರಾರಿಯಾದ ಹೃದಯವಿದ್ರಾವಕ  ಘಟನೆ ವಿಜಯಪುರ ನಗರದ ಚಾಲುಕ್ಯ ನಗರ ವೆಸ್ಟ್‌ನಲ್ಲಿ ಇಂದು(ಶನಿವಾರ) ನಡೆದಿದೆ.  ರಾಮಕೃಷ್ಣ ಆಸ್ಪತ್ರೆಯ ಹಿಂಬದಿಯ ಬಿ.ಜಿ.ಪೊಲೀಸ್ ಪಾಟೀಲ ಎಂಬುವವರ ಮನೆಯ ಹೊಸ್ತಿಲಲ್ಲಿ ದುರುಳರು ನವಜಾತ ಶಿಶು ಇಟ್ಟು ಹೋಗಿದ್ದಾರೆ. ನಸುಕಿನ ಜಾವ ನವಜಾತ ಶಿಶು ಇಟ್ಟು ಪರಾರಿಯಾಗಿದ್ದಾರೆ. 

ಆಸ್ಪತ್ರೆಯಲ್ಲಿ ಹೆರಿಗೆಯಾಗಿರುವ ಕ್ಲಿಪ್ ಜೊತೆಯಲ್ಲಿ ಮಗು ಬಿಟ್ಟು ಹೋಗಿದ್ದಾರೆ. ಗಂಡು ಮಗು ಮೃತಪಟ್ಟಿದೆ.   ಮಗುವಿನ ದೇಹದ ಮೇಲೆ ಕಪ್ಪು ಕಪ್ಪು ಕಲೆಗಳು ಇವೆ. ಮನೆಯಲ್ಲಿ ಬಾಡಿಗೆ ಇರುವ ವೇಳೆ ವಿದ್ಯಾರ್ಥಿನಿಯರು ಬಾಗಿಲು ತೆಗೆದಾಗ ಘಟನೆ ಬೆಳಕಿಗೆ ಬಂದಿದೆ. 

ಭದ್ರಾ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಶಿವಮೊಗ್ಗ ಮೂಲದ ಮೂವರು ಯುವಕರು ದುರಂತ ಸಾವು!

ಮೃತ ಮಗುವನ್ನು ಕಂಡು ವಿದ್ಯಾರ್ಥಿನಿಯರು ಹೌಹಾರಿದ್ದಾರೆ. ಅನಾರೋಗ್ಯದ ಕಾರಣದಿಂದ ಮಗುವನ್ನ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ.  ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯ ಸುತ್ತಮುತ್ತಲಿನ ಸಿಸಿಟಿವಿ ಪರಿಶೀಲನೆಗೆ ಪೊಲೀಸರು ಮುಂದಾಗಿದ್ದಾರೆ. ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಬಾತ್‌ರೂಮ್‌ನಲ್ಲೇ ಹಾಕಿ ಕೋಚ್ ಅತ್ಯಾ*ಚಾರ; ಆರೋಪಿ ಜೈಲಿಗಟ್ಟಿದ ಪೊಲೀಸರು
ಊಟ ಕೊಡುವ ನೆಪದಲ್ಲಿ ರೇ* ವಿಡಿಯೋ ವೈರಲ್ : ಅತ್ಯಾ*ಚಾರಿಗಳಿಗೆ ಮೀಸೆ, ತಲೆ ಬೋಳಿಸಿ ಥಳಿಸಿದ ಗ್ರಾಮಸ್ಥರು