ಮದುವೆಗೆ ಅಡ್ಡ ಬಂದ ಜಾತಿ: ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಪ್ರೇಮಿಗಳು

Published : Jul 04, 2020, 04:38 PM IST
ಮದುವೆಗೆ ಅಡ್ಡ ಬಂದ ಜಾತಿ: ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಪ್ರೇಮಿಗಳು

ಸಾರಾಂಶ

ಯುವ ಪ್ರೇಮಿಗಳಿಬ್ಬರು  ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

ಕೊಪ್ಪಳ, (ಜುಲೈ.04): ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ವ್ಯಾಪ್ತಿಯ ಮಾದಾಪೂರ ಗ್ರಾಮದಲ್ಲಿ ಅಂತರಜಾತಿ ವಿವಾಹಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಾಗಿದ್ದಾರೆ.

ಆತ್ಮಹತ್ಯೆ ಗೆ ಶರಣಾದವರನ್ನು ಹುಲಿಗೆಮ್ಮ(18) ಹಾಗೂ ವಿರುಪಾಕ್ಷಗೌಡ (20) ಎಂದು ಗುರುತಿಸಲಾಗಿದೆ.

ಗಂಗಾವತಿ: ಅಪ್ರಾಪ್ತೆ ಮೇಲೆ ಕಾಮುಕರಿಂದ ಅತ್ಯಾಚಾರ

ಇವರಿಬ್ಬರು ಕಳೆದ ಎರಡು ವರ್ಷದಿಂದ ಪ್ರೀತಿಸುತ್ತಿದ್ದರು.ಮನೆಯಲ್ಲಿ ಮದುವೆ ವಿಚಾರವನ್ನು ತಿಳಿಸಿದ್ದಾರೆ. ಆದ್ರೆ, ಇಬ್ಬರು ಅನ್ಯ ಜಾತಿಗೆ ಸೇರಿದವರಾಗಿದ್ದರಿಂದ.ಮನೆಯವರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಇದರಿಂದ ಮನೊಂದ ಪ್ರೇಮಿಗಳು ಜೆ. ರಾಂಪೂರ ಗ್ರಾಮದ ಜಮೀನೊಂದರ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಸದ್ಯ ಘಟನಾ ಸ್ಥಳಕ್ಕೆ ತಾವರಗೇರಾ ಪಿಎಸ್‍ಐ ಗೀತಾಂಜಲಿ ಶಿಂಧೆ ಹಾಗೂ ಸಿಪಿಐ ಚಂದ್ರಶೇಖರ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!