ಸೀರೆ ವ್ಯಾಪಾರದ ಸೋಗಲ್ಲಿ ಗಾಂಜಾ ಮಾರಾಟ, ಬೆಂಗಳೂರಿನಲ್ಲಿ ಐವರು ಅರೆಸ್ಟ್

Published : Jun 09, 2022, 04:06 AM IST
ಸೀರೆ ವ್ಯಾಪಾರದ ಸೋಗಲ್ಲಿ ಗಾಂಜಾ ಮಾರಾಟ, ಬೆಂಗಳೂರಿನಲ್ಲಿ ಐವರು ಅರೆಸ್ಟ್

ಸಾರಾಂಶ

ಆಂಧ್ರದಿಂದ ಸೀರೆಯೊಳಗೆ ಮಡಚಿಟ್ಟು ಸಾಗಾಟ ಐವರು ಚಾಲಾಕಿ ಪೆಡ್ಲರ್‌ಗಳನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿತರಿಂದ 53 ಕೆ.ಜಿ ಗಾಂಜಾ ಜಪ್ತಿ  

ಬೆಂಗಳೂರು (ಜೂ.9): ಸೀರೆ ವ್ಯಾಪಾರದ ಸೋಗಿನಲ್ಲಿ ನಗರಕ್ಕೆ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಐವರು ಚಾಲಾಕಿ ಪೆಡ್ಲರ್‌ಗಳನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ವಿಶಾಖಪಟ್ಟಣದ ಜಮೀಲ್‌ ಅಲಿಯಾಸ್‌ ಕುಳ್ಳ ಶಿವ, ತಿರುಪತಿಯ ಕಳ್ಳಪಲ್ಲಿ ನಾಗೇಂದ್ರ, ರಮಣ, ಮಣಿಕಂಠ ಹಾಗೂ ಯಶವಂತಪುರ ಕಿರಣ್‌ ಬಂಧಿತರಾಗಿದ್ದು, ಆರೋಪಿಗಳಿಂದ 53.45 ಕೆಜಿ ಗಾಂಜಾ ಸೇರಿದಂತೆ ಇತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಜಯರಾಮ್‌ ಕಾಲೋನಿ ಸಮೀಪ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿರುವ ಖಚಿತ ಮಾಹಿತಿ ಪಡೆದು ಕಿರಣ್‌ನನ್ನು ಇನ್ಸ್‌ಪೆಕ್ಟರ್‌ ಕೆ.ಸುರೇಶ್‌ ತಂಡ ಬಂಧಿಸಿತ್ತು. ವಿಚಾರಣೆ ವೇಳೆ ಆತ ನೀಡಿದ ಮಾಹಿತಿ ಆಧರಿಸಿ ಆಂಧ್ರಪ್ರದೇಶ ಮೂಲದ ಪ್ರಮುಖ ಗಾಂಜಾ ಪೂರೈಕೆದಾರರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಶಿಕ್ಷಣ ಸಚಿವರ ಮನೆಗೆ ನುಗ್ಗಿದವರು ವಿದ್ಯಾರ್ಥಿಗಳೇ ಅಲ್ಲ: Araga Jnanendra

ಸೀರೆ ಕವರ್‌ಗಳಲ್ಲಿ ಗಾಂಜಾ ಸಾಗಣೆ: ಆಂಧ್ರಪ್ರದೇಶ ಮೂಲದ ನಾಲ್ವರು ಆರೋಪಿಗಳು ವೃತ್ತಿಪರ ಗಾಂಜಾ ಪೆಡ್ಲರ್‌ಗಳಾಗಿದ್ದು, ಅವರ ವಿರುದ್ಧ ಬೆಂಗಳೂರು ಸೇರಿದಂತೆ ವಿವಿಧೆಡೆ ಪ್ರಕರಣ ದಾಖಲಾಗಿವೆ. ತಿಂಗಳ ಹಿಂದಷ್ಟೇ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದ ಈ ನಾಲ್ವರು, ಮತ್ತೆ ತಮ್ಮ ಚಾಳಿ ಮುಂದುವರೆಸಿ ಈಗ ಜೈಲು ಸೇರಿದ್ದಾರೆ. ಬಸ್‌, ರೈಲುಗಳಲ್ಲಿ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ನಗರಕ್ಕೆ ಗಾಂಜಾ ಸಾಗಿಸಿ ಬಳಿಕ ದುಬಾರಿ ಬೆಲೆಗೆ ಗಾಂಜಾ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸೀರೆ ಮಧ್ಯದಲ್ಲಿ ಪೊಟ್ಟಣಗಳಲ್ಲಿ ತುಂಬಿದ ಗಾಂಜಾವನ್ನು ಇಟ್ಟು ಆಂಧ್ರಪ್ರದೇಶದಿಂದ ಬಸ್‌ಗಳಲ್ಲಿ ನಗರಕ್ಕೆ ಗಾಂಜಾ ಸಾಗಿಸುತ್ತಿದ್ದರು ಎಂದು ಪೊಲೀಸರು ವಿವರಿಸಿದ್ದಾರೆ.

ಸೆರೆಯಾಗಿದ್ದು ಹೇಗೆ?: ಕೊರಿಯರ್‌ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಕಿರಣ್‌ ಗಾಂಜಾ ವ್ಯಸನಿ ಆಗಿದ್ದು, ನಂತರ ಹಣದಾಸೆಗೆ ಬಿದ್ದು ಆತ ಪೆಡ್ಲರ್‌ ಆಗಿ ಪರಿವರ್ತನೆಗೊಂಡಿದ್ದ. ತಾನು ಗಾಂಜಾ ಖರೀದಿಸುತ್ತಿದ್ದ ಸ್ಥಳೀಯ ಪೆಡ್ಲರ್‌ ಮೂಲಕ ಆಂಧ್ರಪ್ರದೇಶದ ಪೆಡ್ಲರ್‌ಗಳನ್ನು ಪರಿಚಯಿಸಿಕೊಂಡು ಕಿರಣ್‌ ಗಾಂಜಾ ಮಾರಾಟ ದಂಧೆಗಿಳಿದಿದ್ದ. ಆಂಧ್ರಪ್ರದೇಶದಲ್ಲಿ .2,500 ಸಾವಿರಕ್ಕೆ ತಲಾ 1 ಕೆಜಿ ಗಾಂಜಾ ಖರೀದಿಸಿ ತಂದು ನಗರದಲ್ಲಿ ಅದನ್ನೇ .15 ರಿಂದ .20 ಸಾವಿರಕ್ಕೆ ಮಾರುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Chikkamagaluru : ಗಾಂಜಾ ದಂಧೆಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಹೊಸ ಪ್ಲಾನ್

ಕೋಲಾರ: ಆಪೇ ಆಟೋದಲ್ಲಿ ಅಕ್ರಮವಾಗಿ 158 ಗ್ರಾಂ ಕಡ್ಡಿ ಮಿಶ್ರಿತ ಒಣ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ಆರೋಪಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಆರೋಪಿ ಮುಳಬಾಗಿಲು ತಾಲೂಕಿನ ನಾಗಮಂಗಲ ಗ್ರಾಮದ ಮಧುಸೂಧನ ಎಂದು ಗುರ್ತಿಸಲಾಗಿದೆ. ಬಂಧಿತ ಆರೋಪಿಯನ್ನು ಜೆ.ಎಂ.ಎಫ್‌.ಸಿ ಮುಳಬಾಗಿಲು ನ್ಯಾಯಾಲಯ ಕ್ಕೆ ಹಾಜರುಪಡಿಸಲಾಗಿದೆ.

ಈ ಸಂದರ್ಭದಲ್ಲಿ ಅಬಕಾರಿ ಉಪ ಆಯುಕ್ತ ಎಚ್‌ ರಮೇಶ್‌ ಕುಮಾರ್‌, ಕೆಜಿಎಫ್‌ ಉಪ ಅಧೀಕ್ಷಕ ವಿಶ್ವನಾಥ್‌ ಬಾಬು, ಮುಳಬಾಗಿಲು ಅಬಕಾರಿ ನಿರೀಕ್ಷಕ ಎನ್‌ ವಿ ನಂದೀಶ್‌, ಅಬಕಾರಿ ಉಪನಿರೀಕ್ಷಕ ರೂಪಚಂದ್‌ ಶ್ರೀ, ಕೋಲಾರ ಅಬಕಾರಿ ನಿರೀಕ್ಷಕ ವೇಣುಗೋಪಾಲ್‌, ಅಬಕಾರಿ ಸಿಬ್ಬಂದಿ ದಾದಾಪೀರ್‌, ಕೆ ವಿಜಯ್‌, ವಿ. ವಿಜಯ್‌ ಇತರರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?
ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!