ದರ್ಶನ್‌ಗೆ ಜೈಲೋ? ಬೇಲೋ ? ಇಂದು ಸುಪ್ರೀಂನಿಂದ ತೀರ್ಪು

Kannadaprabha News   | Kannada Prabha
Published : Aug 14, 2025, 05:08 AM IST
actor darshan

ಸಾರಾಂಶ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ನೀಡಿರುವ ಜಾಮೀನು ಮುಂದುವರೆಸಬೇಕೋ ಅಥವಾ ರದ್ದುಪಡಿಬೇಕೋ ಎಂಬುದರ ಬಗ್ಗೆ ಸುಪ್ರೀಂಕೋರ್ಟ್‌ ಗುರುವಾರ ಮಹತ್ವದ ತೀರ್ಪು ನೀಡಲಿದೆ.

ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ನೀಡಿರುವ ಜಾಮೀನು ಮುಂದುವರೆಸಬೇಕೋ ಅಥವಾ ರದ್ದುಪಡಿಬೇಕೋ ಎಂಬುದರ ಬಗ್ಗೆ ಸುಪ್ರೀಂಕೋರ್ಟ್‌ ಗುರುವಾರ ಮಹತ್ವದ ತೀರ್ಪು ನೀಡಲಿದೆ.

ದರ್ಶನ್‌ ಮತ್ತು ಪ್ರಕರಣದ ಇತರೆ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್‌ ಕಳೆದ ವರ್ಷ ಡಿ.13ರಂದು ನೀಡಿದ್ದ ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಲೇರಿದೆ. ಈ ಅರ್ಜಿಯನ್ನು ಜು.24ರಂದು ವಿಚಾರಣೆ ನಡೆಸಿದ ನ್ಯಾ। ಜೆ.ಬಿ. ಪರ್ದಿವಾಲಾ ಮತ್ತು ನ್ಯಾ। ಆರ್‌. ಮಹಾದೇವನ್‌ ಅವರ ಪೀಠ, ತೀರ್ಪು ಕಾಯ್ದಿರಿಸಿತ್ತು.

ಜಾಮೀನಿಗೆ ಸುಪ್ರೀಂ ಗರಂ:

ಜಾಮೀನು ರದ್ದತಿ ಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಜಾಮೀನಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಪೀಠ, ಕರ್ನಾಟಕ ಹೈಕೋರ್ಟ್‌ ನೀಡಿದ ಜಾಮೀನು ಚಿಂತಿಸುವಂತೆ ಮಾಡಿದೆ. 7 ಆರೋಪಿಗಳ ಜಾಮೀನು ನಿರ್ಧರಿಸುವಾಗ ಹೈಕೋರ್ಟ್‌ ಖುಲಾಸೆಗೊಳಿಸುವಂತೆ ಆದೇಶ ಹೊರಡಿಸಿದೆ. ಪ್ರತಿಯೊಂದು ಜಾಮೀನು ಕೊಡುವಾಗ ಹೈಕೋರ್ಟ್‌ ಇಂಥ ಆದೇಶವನ್ನೇ ನೀಡುತ್ತದೆಯೇ? ಎಂದು ಪ್ರಶ್ನಿಸಿತ್ತು.

ಜೊತೆಗೆ ವಿವೇಚನಾಧಿಕಾರವನ್ನು ಹೈಕೋರ್ಟ್‌ ತಪ್ಪಾಗಿ ಪ್ರಯೋಗಿಸಿದೆ. ಹೈಕೋರ್ಟ್‌ ನಿಜಕ್ಕೂ ತನ್ನ ಬುದ್ಧಿಯನ್ನು ಬಳಸಿದೆಯೇ? ಎಂದು ಅಸಮಾಧಾನ ಹೊರಹಾಕಿತ್ತು. ಹೈಕೋರ್ಟ್‌ ರೀತಿ ನಾವು ಮತ್ತದೇ ತಪ್ಪು ಮಾಡುವುದಿಲ್ಲ. ದೋಷಿ ಅಥವಾ ನಿರ್ದೋಷಿ ಎಂಬುದನ್ನು ನಾವು ನಿರ್ಧರಿಸುವುದಿಲ್ಲ. ಸೆಷನ್ಸ್‌ ಕೋರ್ಟ್‌ ನ್ಯಾಯಾಧೀಶರು ಇಂತಹ ತಪ್ಪು ಮಾಡಬಹುದು. ಆದರೆ ಹೈಕೋರ್ಟ್‌ ಜಡ್ಜ್‌ ಅಂತಹ ತಪ್ಪು ಮಾಡುತ್ತಾರೆಂದರೆ ಹೇಗೆ? ಎಂದು ಹೇಳಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ