
ಧಾರವಾಡ(ಸೆ.13): ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತನೆ ಮಾಡಿದ ಪಾಲಿಕೆಯ ಜೆಡಿಎಸ್ ಮಾಜಿ ಸದಸ್ಯ ಶ್ರೀಕಾಂತ ಜಮನಾಳ ಅವರನ್ನು ವಿದ್ಯಾಗಿರಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಎರಡು ದಿನಗಳ ಹಿಂದೆ ಸತ್ತೂರಿನ ಡೆಂಟಲ್ ಕಾಲೇಜು ಬಳಿ ಮಹಿಳೆಯನ್ನು ನಡುರಸ್ತೆಯಲ್ಲಿಯೇ ಎಳೆದಾಡಿದ ಕುರಿತು ವಿಡಿಯೋ ವೈರಲ್ ಆಗಿತ್ತು. ತನ್ನ ಮೇಲಾದ ದೌರ್ಜನ್ಯ ಕುರಿತು ಮಹಿಳೆಯು ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಶನಿವಾರ ದೂರು ದಾಖಲಿಸಿದ್ದರು.
ಬಲವಂತವಾಗಿ ಡ್ರಗ್ ಸೇವಿಸುವಂತೆ ಮಾಡಿ, ಕಾರಿನಲ್ಲಿ ಯುವತಿಯ ಗ್ಯಾಂಗ್ ರೇಪ್!
ಈ ದೂರಿನ ಅನ್ವಯ ವಿದ್ಯಾಗಿರಿ ಪೊಲೀಸರು ಆರೋಪಿ ಶ್ರೀಕಾಂತ ಅವರನ್ನು ಸವದತ್ತಿ ಪಟ್ಟಣದಲ್ಲಿ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ