ಮತ್ತೊಬ್ಬ ಜೆಇಇ ವಿದ್ಯಾರ್ಥಿ ನೇಣಿಗೆ ಶರಣು: ಈ ವರ್ಷದ 13ನೇ ಕೇಸ್‌

Published : Jul 05, 2024, 11:03 AM ISTUpdated : Jul 05, 2024, 11:16 AM IST
ಮತ್ತೊಬ್ಬ ಜೆಇಇ ವಿದ್ಯಾರ್ಥಿ ನೇಣಿಗೆ ಶರಣು: ಈ ವರ್ಷದ 13ನೇ ಕೇಸ್‌

ಸಾರಾಂಶ

ನೀಟ್‌, ಜೆಇಇ ಪರೀಕ್ಷೆಗಳಿಗೆ ತರಬೇತಿ ಪಡೆಯುತ್ತಿದ್ದ ಮತ್ತೋರ್ವ ವಿದ್ಯಾರ್ಥಿ ಕೋಟಾದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. 16 ವರ್ಷದ ಸಂದೀಪ್‌ ಕುಮಾರ್‌ ಕುರ್ಮಿ, ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದು, ಇದು ವರ್ಷದ 13ನೇ ಆತ್ಮಹತ್ಯೆ ಪ್ರಕರಣವಾಗಿದೆ.   

ಕೋಟಾ (ಜು.05): ನೀಟ್‌, ಜೆಇಇ ಪರೀಕ್ಷೆಗಳಿಗೆ ತರಬೇತಿ ಪಡೆಯುತ್ತಿದ್ದ ಮತ್ತೋರ್ವ ವಿದ್ಯಾರ್ಥಿ ಕೋಟಾದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. 16 ವರ್ಷದ ಸಂದೀಪ್‌ ಕುಮಾರ್‌ ಕುರ್ಮಿ, ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದು, ಇದು ವರ್ಷದ 13ನೇ ಆತ್ಮಹತ್ಯೆ ಪ್ರಕರಣವಾಗಿದೆ. ಬುಧವಾರ ರಾತ್ರಿ ಸಂದೀಪ್‌ ಪಿಜಿ ಕೋಣೆ ಬಾಗಿಲು ತೆರೆಯದನ್ನು ಕಂಡ ಸ್ನೇಹಿತರು ವಾರ್ಡನ್‌ ಗಮನಕ್ಕೆ ತಂದು ಪೊಲೀಸರಿಗೆ ತಿಳಿಸಿದ್ದಾರೆ. 

ಬಳಿಕ ಪೊಲೀಸರು ಸಂದೀಪ್‌ ಶವವನ್ನು ಹೊರತೆಗೆದಿದ್ದಾರೆ. ಸಂದೀಪ್‌ ಹಾಗೂ ಆತನ ಸೋದರ ಇಬ್ಬರೂ ಕೋಟಾದಲ್ಲಿ ಪ್ರತ್ಯೇಕ ಪಿಜಿಯಲ್ಲಿ ಉಳಿದುಕೊಂಡು ವ್ಯಾಸಂಗ ಮಾಡುತ್ತಿದ್ದರು. ಇವರಿಗೆ ಪೋಷಕರು ಇಲ್ಲದ ಕಾರಣ ಇವರ ಸಂಬಂಧಿ ಹಣಕಾಸಿನ ನೆರವು ನೀಡುತ್ತಿದ್ದರು. ಕಳೆದ ವರ್ಷ 26 ವಿದ್ಯಾರ್ಥಿಗಳು ಅಸುನೀಗಿದ್ದರು. ಸಂದೀಪ್‌ ವಾಸಿಸುತ್ತಿದ್ದ ಪಿಜಿಯಲ್ಲಿ ಆತ್ಮಹತ್ಯೆ ತಡೆಯುವ ಸ್ಪ್ರಿಂಗ್‌ ಫ್ಯಾನ್‌ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಡ್ರಗ್ಸ್‌ ಸೇವನೆ ಮಾಡುತ್ತಿದ್ದ ಮಗನನ್ನೇ ಪೊಲೀಸರಿಗೆ ಹಿಡಿದು ಕೊಟ್ಟ ತಾಯಿ: ಗಾಂಜಾ ಸೇವನೆ ಮಾಡುತ್ತಿದ್ದ ಮಗನನ್ನು ತಾಯಿಯೇ ಪೊಲೀಸರ ಕೈಗೆ ಒಪ್ಪಿಸಿದ ಅಚ್ಚರಿಯ ಘಟನೆ ಚೆನ್ನೈನಲ್ಲಿ ನಡೆದಿದೆ. ಸರಕು ವಾಹನದ ಚಾಲಕನಾದ ಶ್ರೀರಾಮ್‌ ಇತ್ತೀಚಿಗೆ ಗಾಂಜಾ ಸೇವನೆ ಅಭ್ಯಾಸ ಬೆಳೆಸಿಕೊಂಡಿದ್ದ. ಈ ವಿಚಾರ ಗಮನಿಸಿದ ತಾಯಿ ಭಾಗ್ಯಲಕ್ಷ್ಮೀ ತಾವೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. 

ಲೈಂಗಿಕ ಕಿರುಕುಳ: ಪಶ್ಚಿಮ ಬಂಗಾಳ ರಾಜ್ಯಪಾಲರ ವಿರುದ್ಧ ಸುಪ್ರೀಂಕೋರ್ಟ್‌ಗೆ ಅರ್ಜಿ

ಈ ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಶ್ರೀರಾಮ್ ಮನೆ ಮೇಲೆ ದಾಳಿ ಮಾಡಿದ್ದರು. ಈ ವೇಳೆಯಲ್ಲಿ ಪೊಲೀಸರು 2 ಲಕ್ಷ ರು ಮೌಲ್ಯದ 630 ಮಿಲೀ ಗಾಂಜಾ ಎಣ್ಣೆ ವಶ ಪಡಿಸಿಕೊಂಡಿದ್ದಾರೆ. ಬಳಿಕ ಆತನನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಒಡಿಶಾ, ತಮಿಳುನಾಡು, ಕೇರಳದಲ್ಲಿ ನಡೆಯುತ್ತಿದ್ದ ಗಾಂಜಾ ಮಾರಾಟ ಜಾಲವನ್ನು ಬೇಧಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!